AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಗ ಮಧ್ಯೆ ಪ್ರಯಾಣಿಕರೊಬ್ಬರಿಗೆ ತೀವ್ರ ಅತಿಸಾರ, ಡೆಲ್ಟಾ ವಿಮಾನ ಯುಟರ್ನ್​

ಡೆಲ್ಟಾ ವಿಮಾನವು ಆಟ್ಲಾಂಟಾದಿಂದ ಬಾರ್ಸಿಲೋನಾಗೆ ಹೊರಟಿತ್ತು, ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರಿಗೆ ಅತಿಸಾರ ಹೆಚ್ಚಾದ ಕಾರಣ ವಿಮಾನವು ಮತ್ತೆ ಅಟ್ಲಾಂಟಕ್ಕೆ ವಾಪಸ್ ಕರೆತರಲಾಯಿತು. ಜಾರ್ಜಿಯಾದ ಆಟ್ಲಾಂಟಾದಿಂದ ಸ್ಪೇನ್​ ಬಾರ್ಸಿಲೋನಾಗೆ ಒಟ್ಟು 8 ಗಂಟೆಗಳು ತಗುಲುತ್ತವೆ, ವಿಮಾನ ಹೊರಟು 2 ಗಂಟೆಗಳ ಬಳಿಕ ಹಿಂದಿರುಗಿದೆ. ಎಕ್ಸ್​ಪೋಸ್ಟ್​ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲರ್ ಬಳಿ ಪ್ರಯಾಣಿಕರೊಬ್ಬರ ಆರೋಗ್ಯ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅಟ್ಲಾಂಟಾಗೆ ಹಿಂದಿರುಗಬೇಕೆಂದು ಮನವಿ ಮಾಡಿಕೊಂಡಿದ್ದರು.

ಮಾರ್ಗ ಮಧ್ಯೆ ಪ್ರಯಾಣಿಕರೊಬ್ಬರಿಗೆ ತೀವ್ರ ಅತಿಸಾರ, ಡೆಲ್ಟಾ ವಿಮಾನ ಯುಟರ್ನ್​
ವಿಮಾನ
ನಯನಾ ರಾಜೀವ್
|

Updated on: Sep 05, 2023 | 11:58 AM

Share

ಡೆಲ್ಟಾ ವಿಮಾನವು ಆಟ್ಲಾಂಟಾದಿಂದ ಬಾರ್ಸಿಲೋನಾಗೆ ಹೊರಟಿತ್ತು, ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರಿಗೆ ಅತಿಸಾರ ಹೆಚ್ಚಾದ ಕಾರಣ ವಿಮಾನವು ಮತ್ತೆ ಅಟ್ಲಾಂಟಕ್ಕೆ ವಾಪಸ್ ಕರೆತರಲಾಯಿತು. ಜಾರ್ಜಿಯಾದ ಆಟ್ಲಾಂಟಾದಿಂದ ಸ್ಪೇನ್​ ಬಾರ್ಸಿಲೋನಾಗೆ ಒಟ್ಟು 8 ಗಂಟೆಗಳು ತಗುಲುತ್ತವೆ, ವಿಮಾನ ಹೊರಟು 2 ಗಂಟೆಗಳ ಬಳಿಕ ಹಿಂದಿರುಗಿದೆ. ಎಕ್ಸ್​ಪೋಸ್ಟ್​ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲರ್ ಬಳಿ ಪ್ರಯಾಣಿಕರೊಬ್ಬರ ಆರೋಗ್ಯ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅಟ್ಲಾಂಟಾಗೆ ಹಿಂದಿರುಗಬೇಕೆಂದು ಮನವಿ ಮಾಡಿಕೊಂಡಿದ್ದರು.

ಘಟನೆಗೆ ಕಾರಣವಾದ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸಿಲ್ಲ, ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಮತ್ತೊಂದು ವಿಮಾನಕ್ಕೆ ವರ್ಗಾಯಿಸಲಾಯಿತು. ಅತಿಸಾರವಿದ್ದ ಕಾರಣ ವಿಮಾನದಲ್ಲೆಲ್ಲಾ ಮಲವಿಸರ್ಜನೆ ಮಾಡಿದ್ದರು. ಹೀಗಾಗಿ ವಿಮಾನವನ್ನು ಸಂಪೂರ್ಣವಾಗಿ ಶುಚಿಗೊಳಿಸಲಾಯಿತು.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ವಿಮಾನವು ನಿಗದಿತ ಸಮಯಕ್ಕಿಂತ ಎಂಟು ತಾಸು ತಡವಾಗಿ ಹಾರಾಟ ನಡೆಸಿತ್ತು. ವಿಮಾನವು ಸ್ಪೇನ್ ತಲುಪಿದಾಗ ಅತಿಸಾರ ಸಮಸ್ಯೆ ಇರುವ ಪ್ರಯಾಣಿಕ ಅದೇ ವಿಮಾನದಲ್ಲಿ ತೆರಳಿದ್ದರೇ ಎನ್ನುವ ಮಾಹಿತಿ ಅಸ್ಪಷ್ಟವಾಗಿದೆ.

ಡೆಲ್ಟಾ ಅಧಿಕಾರಿಗಳು ವಿಮಾನದಲ್ಲಿ ವೈದ್ಯಕೀಯ ಸಮಸ್ಯೆ ಸಂಭವಿಸಿರುವುದನ್ನು ದೃಢಪಡಿಸಿದರು. ಇದರ ಪರಿಣಾಮವಾಗಿ ತುರ್ತು ಲ್ಯಾಂಡಿಂಗ್ ಮಾಡಬೇಕಾಯಿತು. ಡೆಲ್ಟಾ ಅಧಿಕಾರಿಗಳು ವಿಮಾನ ವಿಳಂಬದಿಂದಾಗಿ ಉಂಟಾದ ಅನನುಕೂಲತೆ ಬಗ್ಗೆ ಕ್ಷಮೆಯಾಚಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು