Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ಪರಿಶೀಲನೆಗೂ ಮುನ್ನವೇ ಅಮೆರಿಕದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ

ಎಂಡಿಎಚ್​ ಮಸಾಲವು ಜಾಗತಿಕ ಪರಿಶೀಲನೆಗೂ ಮುನ್ನವೇ ತಿರಸ್ಕೃತಗೊಂಡಿದೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ ಆಡಳಿತ ನಿಷೇಧ ಹೇರಿದೆ.

ಜಾಗತಿಕ ಪರಿಶೀಲನೆಗೂ ಮುನ್ನವೇ ಅಮೆರಿಕದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ
ಮಸಾಲ
Follow us
ನಯನಾ ರಾಜೀವ್
|

Updated on:May 13, 2024 | 9:07 AM

ಜಾಗತಿಕ ಪರಿಶೀಲನೆಗೂ ಮುನ್ನವೇ ಅಮೆರಿಕದಲ್ಲಿ ಎಂಡಿಎಚ್(MDH)​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ ಆಡಳಿತ ನಿಷೇಧ ಹೇರಿದೆ. ಬ್ಯಾಕ್ಟೀರಿಯಾ ಪತ್ತೆಯಾದ ಸಾಂಬಾರ್ ಮಸಾಲವನ್ನು ಉತ್ತರ ಕ್ಯಾಲಿಫೋರ್ನಿಯಾದಲ್ಲಿ ವಿತರಿಸಲಾಗಿತ್ತು ಎಂದು ಆನ್​ಲೈನ್ ಮಾರಾಟ ಮಳಿಗೆ ಹೌಸ್ ಆಫ್ ಸ್ಪೈಸಸ್ ತಿಳಿಸಿತ್ತು. ಸದ್ಯ ಅಲ್ಲಿಂದ ಉತ್ಪನ್ನಗಳನ್ನು ಹಿಂಪಡೆಯಲಾಗಿದೆ.

ಏನಿದು ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಸಾಲ್ಮೋನೆಲ್ಲಾ ಎಂಬುದು ಬ್ಯಾಕ್ಟೀರಿಯಾ, ಆಹಾರಗಳ ಮೂಲಕ ಪಸರಿಸುವ ಸೋಂಕು ಇದಾಗಿದೆ. ಸಾಲ್ಮೋನಲ್ ಸೋಂಕು ತಗುಲಿ 12 ಗಂಟೆಯ ಬಳಿಕ ಅತಿಸಾರ, ಬೇಧಿ, ಹೊಟ್ಟೆನೋವು, ಜ್ವರ ಕಾಣಿಸಿಕೊಳ್ಳುತ್ತದೆ, ಕೆಲವೊಮ್ಮೆ ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಗೂ ತಲುಪುತ್ತದೆ.

ಹಾಂಗ್​ಕಾಂಗ್ ಕಳೆದ ತಿಂಗಳು ಎಂಡಿಎಚ್ ಹಾಗೂ ಇನ್ನೊಂದು ಭಾರತೀಯ ಕಂಪನಿ ಎವರೆಸ್ಟ್​ನಿಂದ ತಯಾರಿಸಿದ ಮೂರು ಮಸಾಲೆ ಪದಾರ್ಥಗಳ ಮಿಶ್ರಣಗಳ ಮಾರಾಟವನ್ನು ಸ್ಥಗಿತಗೊಳಿಸಿತು. ಇದರಲ್ಲಿ ಕ್ಯಾನ್ಸರ್​ ಉಂಟು ಮಾಡುವ ಕೀಟನಾಶಕಗಳನ್ನು ಹೊಂದಿತ್ತು. ಎಥಲೀನ್ ಆಕ್ಸೈಡ್ ಮಾನವನ ಬಳಕೆಗೆ ಅನರ್ಹವಾಗಿದೆ ಮತ್ತು ದೀರ್ಘಕಾಲ ಬಳಕೆ ಮಾಡಿದರೆ ಕ್ಯಾನ್ಸರ್ ಅಪಾಯವಿದೆ ಎಂದು ಹೇಳಲಾಗಿತ್ತು.

ಕಂಪನಿಗಳು ತಮ್ಮ ಉತ್ಪನ್ನಗಳನ್ನು ಸುರಕ್ಷಿತವೆಂದು ಹೇಳಿವೆ, ಮಸಾಲೆ ಸಂಗ್ರಹಿಸುವ, ಸಂಸ್ಕರಿಸುವ ಅಥವಾ ಪ್ಯಾಕಿಂಗ್​ ಮಾಡುವ ಯಾವುದೇ ಹಂತದಲ್ಲಿ ಎಥಲೀನ್ ಅಕ್ಸೈಡ್​ಗಳನ್ನು ಬಳಸುವುದಿಲ್ಲ ಎಂದು ಎಂಡಿಎಚ್ ಹೇಳಿದೆ. ಯುನೈಟೆಡ್ ಸ್ಟೇಟ್ಸ್​, ಆಸ್ಟ್ರೇಲಿಯಾ ಹಾಗೂ ಭಾರತದ ಅಧಿಕಾರಿಗಳು ಈ ವಿಷಯವನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಬ್ರ್ಯಾಂಡ್​ಗಳು ಭಾರತದಲ್ಲಿ ಜನಪ್ರಿಯವಾಗಿವೆ ಹಾಗೂ ಪ್ರಪಂಚಾದ್ಯಂತ ರಫ್ತಾಗುತ್ತಿದೆ.

ಮತ್ತಷ್ಟು ಓದಿ: ನೀವು ಬಳಸುವ ಮಸಾಲೆ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆಯೇ?

ಹಾಂಗ್​ಕಾಂಗ್​ ಹಾಗೂ ಸೀಮಗಾಪುರದಲ್ಲಿ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಪದಾರ್ಥಗಳಿಗೆ ನಿಷೇಧ ಹೇರುವುದಕ್ಕೆ ಸಂಬಂಧಿಸಿದಂತೆ ಅಲ್ಲಿನ ಆಹಾರ ಸುರಕ್ಷತೆ ಕೇಂದ್ರಗಳು ಸಿದ್ಧಪಡಿಸಿರುವ ವರದಿಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ ಪರಿಶೀಲನೆಗೂ ಮುನ್ನವೇ ಅಮೆರಿಕ ಈ ಮಸಾಲೆ ಪದಾರ್ಥಗಳನ್ನು ತಿರಸ್ಕರಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:07 am, Mon, 13 May 24

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ