AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈರೂತ್​ ವಿಸ್ಫೋಟ: ಜನಾಕ್ರೋಶಕ್ಕೆ ಭ್ರಷ್ಟ ಲೆಬನಾನ್​ ಸರ್ಕಾರ ಉಡೀಸ್!

ಲೆಬನಾನ್​ ರಾಜಧಾನಿ ಬೈರೂತ್​ ಬಂದರು ಪ್ರದೇಶ ಮೇಲಿನ ಚಿತ್ರದಂತೆ ಈಗ ಸ್ಮಶಾನಸದೃಶ. ಇದೀಗ ಅಲ್ಲಿನ ಭ್ರಷ್ಟ ಸರ್ಕಾರವೂ ಪತನಗೊಂಡಿದೆ. ಹೌದು, ಸರ್ಕಾರದ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿತು ಎಂದು ಜನರ ಆಕ್ರೋಶ ಮುಗಿಲುಮುಟ್ಟಿದೆ. ಘಟನೆ ಬಳಿಕ ಒಂದು ವಾರದಿಂದ ಬೀದಿಗಿಳಿದು ಪ್ರತಿಭಟನೆಗೆ ಮುಂದಾದ ಜನರ ಆಕ್ರೋಶಕ್ಕೆ ಮಣಿದ ಸರ್ಕಾರವು ಇದೀಗ ರಾಜೀನಾಮೆ ನೀಡಿದೆ. ದುರಂತದ ಜವಾಬ್ದಾರಿಯನ್ನ ಹೊತ್ತು ನಾವು ರಾಜೀನಾಮೆ ನೀಡುತ್ತಿದ್ದೇವೆ ಎಂದು ಅಲ್ಲಿನ ಆರೋಗ್ಯ ಸಚಿವ ಹಮದ್​ ಹಸನ್​ ಹೇಳಿಕೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ […]

ಬೈರೂತ್​ ವಿಸ್ಫೋಟ: ಜನಾಕ್ರೋಶಕ್ಕೆ ಭ್ರಷ್ಟ ಲೆಬನಾನ್​ ಸರ್ಕಾರ ಉಡೀಸ್!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 11, 2020 | 12:32 PM

Share

ಲೆಬನಾನ್​ ರಾಜಧಾನಿ ಬೈರೂತ್​ ಬಂದರು ಪ್ರದೇಶ ಮೇಲಿನ ಚಿತ್ರದಂತೆ ಈಗ ಸ್ಮಶಾನಸದೃಶ. ಇದೀಗ ಅಲ್ಲಿನ ಭ್ರಷ್ಟ ಸರ್ಕಾರವೂ ಪತನಗೊಂಡಿದೆ.

ಹೌದು, ಸರ್ಕಾರದ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿತು ಎಂದು ಜನರ ಆಕ್ರೋಶ ಮುಗಿಲುಮುಟ್ಟಿದೆ. ಘಟನೆ ಬಳಿಕ ಒಂದು ವಾರದಿಂದ ಬೀದಿಗಿಳಿದು ಪ್ರತಿಭಟನೆಗೆ ಮುಂದಾದ ಜನರ ಆಕ್ರೋಶಕ್ಕೆ ಮಣಿದ ಸರ್ಕಾರವು ಇದೀಗ ರಾಜೀನಾಮೆ ನೀಡಿದೆ. ದುರಂತದ ಜವಾಬ್ದಾರಿಯನ್ನ ಹೊತ್ತು ನಾವು ರಾಜೀನಾಮೆ ನೀಡುತ್ತಿದ್ದೇವೆ ಎಂದು ಅಲ್ಲಿನ ಆರೋಗ್ಯ ಸಚಿವ ಹಮದ್​ ಹಸನ್​ ಹೇಳಿಕೆ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಘಟನೆಗೆ ಸಂಬಂಧಿಸಿದಂತೆ ಹಲವಾರು ಸಚಿವರು ರಾಜೀನಾಮೆ ನೀಡಿದ್ದರು. ಇದೀಗ ಸರ್ಕಾರವೇ ರಾಜೀನಾಮೆ ನೀಡಲು ಮುಂದಾಗಿದ್ದು ಪ್ರಧಾನಿ ಹಸನ್​ ಡಿಯಾಬ್​ ಅವರೂ ತಮ್ಮ ಅಧಿಕೃತ ರಾಜೀನಾಮೆ ಪತ್ರವನ್ನ ರಾಷ್ಟ್ರಪತಿ ಮಿಚೆಲ್​ ಔನ್​ಗೆ ನೀಡಿದ್ದಾರೆ.

ಹಸನ್​ ಡಿಯಾಬ್​ ಸರ್ಕಾರದ ವಿರುದ್ಧ ಈ ಹಿಂದೆಯೂ ದುರಾಡಳಿತದ ಆರೋಪ ಕೇಳಿಬಂದಿತ್ತು. ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿತ್ತು ಎಂಬ ಮಾತುಗಳು ಕೇಳಿಬಂದಿತ್ತು.

ಇದೀಗ, ಸರ್ಕಾರದ ಏಳು ತಿಂಗಳ ಆಡಳಿತಕ್ಕೆ ದುರಂತದ ಮುಖಾಂತರ ಅಂತ್ಯ ದೊರೆತಿದೆ. ಮುಂಬರುವ ಸರ್ಕಾರವು ಬಂದರು ದುರಂತದ ಆಘಾತ ಮತ್ತು ಎದುರಾಗಿರುವ ಹಾನಿಯಿಂದ ತತ್ತರಿಸಿರುವ ಜನರಿಗೆ ಹೇಗೆ ಆಸರೆಯಾಗುತ್ತದೆ  ಅನ್ನೋದನ್ನ ಕಾದುನೋಡಬೇಕಿದೆ.

Published On - 12:31 pm, Tue, 11 August 20

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ