AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈರೂತ್​ ವಿಸ್ಫೋಟ: ಜನಾಕ್ರೋಶಕ್ಕೆ ಭ್ರಷ್ಟ ಲೆಬನಾನ್​ ಸರ್ಕಾರ ಉಡೀಸ್!

ಲೆಬನಾನ್​ ರಾಜಧಾನಿ ಬೈರೂತ್​ ಬಂದರು ಪ್ರದೇಶ ಮೇಲಿನ ಚಿತ್ರದಂತೆ ಈಗ ಸ್ಮಶಾನಸದೃಶ. ಇದೀಗ ಅಲ್ಲಿನ ಭ್ರಷ್ಟ ಸರ್ಕಾರವೂ ಪತನಗೊಂಡಿದೆ. ಹೌದು, ಸರ್ಕಾರದ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿತು ಎಂದು ಜನರ ಆಕ್ರೋಶ ಮುಗಿಲುಮುಟ್ಟಿದೆ. ಘಟನೆ ಬಳಿಕ ಒಂದು ವಾರದಿಂದ ಬೀದಿಗಿಳಿದು ಪ್ರತಿಭಟನೆಗೆ ಮುಂದಾದ ಜನರ ಆಕ್ರೋಶಕ್ಕೆ ಮಣಿದ ಸರ್ಕಾರವು ಇದೀಗ ರಾಜೀನಾಮೆ ನೀಡಿದೆ. ದುರಂತದ ಜವಾಬ್ದಾರಿಯನ್ನ ಹೊತ್ತು ನಾವು ರಾಜೀನಾಮೆ ನೀಡುತ್ತಿದ್ದೇವೆ ಎಂದು ಅಲ್ಲಿನ ಆರೋಗ್ಯ ಸಚಿವ ಹಮದ್​ ಹಸನ್​ ಹೇಳಿಕೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ […]

ಬೈರೂತ್​ ವಿಸ್ಫೋಟ: ಜನಾಕ್ರೋಶಕ್ಕೆ ಭ್ರಷ್ಟ ಲೆಬನಾನ್​ ಸರ್ಕಾರ ಉಡೀಸ್!
KUSHAL V
| Edited By: |

Updated on:Aug 11, 2020 | 12:32 PM

Share

ಲೆಬನಾನ್​ ರಾಜಧಾನಿ ಬೈರೂತ್​ ಬಂದರು ಪ್ರದೇಶ ಮೇಲಿನ ಚಿತ್ರದಂತೆ ಈಗ ಸ್ಮಶಾನಸದೃಶ. ಇದೀಗ ಅಲ್ಲಿನ ಭ್ರಷ್ಟ ಸರ್ಕಾರವೂ ಪತನಗೊಂಡಿದೆ.

ಹೌದು, ಸರ್ಕಾರದ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿತು ಎಂದು ಜನರ ಆಕ್ರೋಶ ಮುಗಿಲುಮುಟ್ಟಿದೆ. ಘಟನೆ ಬಳಿಕ ಒಂದು ವಾರದಿಂದ ಬೀದಿಗಿಳಿದು ಪ್ರತಿಭಟನೆಗೆ ಮುಂದಾದ ಜನರ ಆಕ್ರೋಶಕ್ಕೆ ಮಣಿದ ಸರ್ಕಾರವು ಇದೀಗ ರಾಜೀನಾಮೆ ನೀಡಿದೆ. ದುರಂತದ ಜವಾಬ್ದಾರಿಯನ್ನ ಹೊತ್ತು ನಾವು ರಾಜೀನಾಮೆ ನೀಡುತ್ತಿದ್ದೇವೆ ಎಂದು ಅಲ್ಲಿನ ಆರೋಗ್ಯ ಸಚಿವ ಹಮದ್​ ಹಸನ್​ ಹೇಳಿಕೆ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಘಟನೆಗೆ ಸಂಬಂಧಿಸಿದಂತೆ ಹಲವಾರು ಸಚಿವರು ರಾಜೀನಾಮೆ ನೀಡಿದ್ದರು. ಇದೀಗ ಸರ್ಕಾರವೇ ರಾಜೀನಾಮೆ ನೀಡಲು ಮುಂದಾಗಿದ್ದು ಪ್ರಧಾನಿ ಹಸನ್​ ಡಿಯಾಬ್​ ಅವರೂ ತಮ್ಮ ಅಧಿಕೃತ ರಾಜೀನಾಮೆ ಪತ್ರವನ್ನ ರಾಷ್ಟ್ರಪತಿ ಮಿಚೆಲ್​ ಔನ್​ಗೆ ನೀಡಿದ್ದಾರೆ.

ಹಸನ್​ ಡಿಯಾಬ್​ ಸರ್ಕಾರದ ವಿರುದ್ಧ ಈ ಹಿಂದೆಯೂ ದುರಾಡಳಿತದ ಆರೋಪ ಕೇಳಿಬಂದಿತ್ತು. ಮೂಲಭೂತ ಸೌಕರ್ಯಗಳನ್ನ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿತ್ತು ಎಂಬ ಮಾತುಗಳು ಕೇಳಿಬಂದಿತ್ತು.

ಇದೀಗ, ಸರ್ಕಾರದ ಏಳು ತಿಂಗಳ ಆಡಳಿತಕ್ಕೆ ದುರಂತದ ಮುಖಾಂತರ ಅಂತ್ಯ ದೊರೆತಿದೆ. ಮುಂಬರುವ ಸರ್ಕಾರವು ಬಂದರು ದುರಂತದ ಆಘಾತ ಮತ್ತು ಎದುರಾಗಿರುವ ಹಾನಿಯಿಂದ ತತ್ತರಿಸಿರುವ ಜನರಿಗೆ ಹೇಗೆ ಆಸರೆಯಾಗುತ್ತದೆ  ಅನ್ನೋದನ್ನ ಕಾದುನೋಡಬೇಕಿದೆ.

Published On - 12:31 pm, Tue, 11 August 20

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು