AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​ ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್ ಜೊತೆ ನಿಂತಿದ್ದಕ್ಕೆ ಪ್ರಧಾನಿ ಮೋದಿಗೆ ನೆತನ್ಯಾಹು ಧನ್ಯವಾದ

ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಉಲ್ಬಣಗೊಂಡಿದೆ. ಇರಾನ್ ಮೇಲಿನ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್, ಅಮೆರಿಕ, ಸೌದಿ ಮುಂತಾದ ಗಲ್ಫ್ ದೇಶಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಶಾಂತಿಯುತ ಮಾತುಕತೆಯ ಮೂಲಕ ಸಂಘರ್ಷವನ್ನು ಕೊನೆಗೊಳಿಸಲು ಭಾರತ ಕರೆನೀಡಿದೆ. ಇದರ ನಡುವೆ ಈ ಯುದ್ಧದಲ್ಲಿ ಇಸ್ರೇಲ್‌ನೊಂದಿಗೆ ನಿಂತಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಧನ್ಯವಾದ ತಿಳಿಸಿದ್ದಾರೆ.

ಇರಾನ್​ ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್ ಜೊತೆ ನಿಂತಿದ್ದಕ್ಕೆ ಪ್ರಧಾನಿ ಮೋದಿಗೆ ನೆತನ್ಯಾಹು ಧನ್ಯವಾದ
Pm Modi With Netanyahu
ಸುಷ್ಮಾ ಚಕ್ರೆ
|

Updated on: Mar 02, 2026 | 10:45 PM

Share

ಟೆಲ್ ಅವಿವ್, ಮಾರ್ಚ್ 2: ಇಸ್ರೇಲ್- ಅಮೆರಿಕದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರಿದಿದೆ. ಈ ಸಂಘರ್ಷದಲ್ಲಿ ಇಸ್ರೇಲ್‌ನೊಂದಿಗೆ ನಿಂತಿದ್ದಕ್ಕಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. ತಮ್ಮಿಬ್ಬರ ಮಾತುಕತೆಯ ಕುರಿತು ಅವರು ವಿವರಗಳನ್ನು ನೀಡದಿದ್ದರೂ, ಭಾರತದ ಜನರು ಇಸ್ರೇಲ್‌ನಲ್ಲಿ ತುಂಬಾ ಮೆಚ್ಚುಗೆ ಪಡೆದಿದ್ದಾರೆ ಎಂದು ಅವರು ಹೇಳಿದ್ದಾರೆ.

“ನಮ್ಮ ಆತ್ಮೀಯ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾನು ಮಾತನಾಡಿದ್ದೆ. ನಾನು ನಿನ್ನೆ ಅವರೊಂದಿಗೆ ಬಹಳ ಸಮಯ ಮಾತನಾಡಿದ್ದೇನೆ. ಇಸ್ರೇಲ್‌ನೊಂದಿಗೆ ನಿಂತಿದ್ದಕ್ಕಾಗಿ, ಯಹೂದಿಗಳೊಂದಿಗೆ ನಿಂತಿದ್ದಕ್ಕಾಗಿ, ಸತ್ಯಕ್ಕಾಗಿ ನಿಂತಿದ್ದಕ್ಕಾಗಿ ಮತ್ತು ಭಾರತದ ಜನರ ಅಗಾಧ ಸ್ನೇಹಕ್ಕಾಗಿ ನಾನು ಇಸ್ರೇಲ್ ಜೊತೆ ನಿಂತಿದ್ದಕ್ಕಾಗಿ ಅವರಿಗೆ ಧನ್ಯವಾದ ಹೇಳಿದ್ದೇನೆ. ಅವರ ಜೊತೆ ಮಾತನಾಡಿದ ವಿಷಯಗಳ ಬಗ್ಗೆ ಹೆಚ್ಚಿನ ವಿವರಗಳನ್ನು ನಾನು ನೀಡುವುದಿಲ್ಲ. ಆದರೆ, ಅವರೊಂದಿಗೆ ಮಾತನಾಡಿ ಖುಷಿಯಾಯಿತು” ಎಂದು 76 ವರ್ಷದ ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿದ್ದಾರೆ.

ಇದನ್ನೂ ಓದಿ: ನಾವು ಗೆಳೆಯರಿಗಿಂತ ಹೆಚ್ಚಾಗಿ ಸಹೋದರರು; ಮೋದಿ ಬಗ್ಗೆ ಇಸ್ರೇಲ್ ಸಂಸತ್​​ನಲ್ಲಿ ಪ್ರಧಾನಿ ನೆತನ್ಯಾಹು ಬಣ್ಣನೆ

ಪ್ರಧಾನಿ ಮೋದಿ ಭಾನುವಾರ ನೆತನ್ಯಾಹು ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು ಮಧ್ಯಪ್ರಾಚ್ಯದ ಪರಿಸ್ಥಿತಿಯ ಬಗ್ಗೆ ಭಾರತದ ಕಳವಳಗಳನ್ನು ತಿಳಿಸಿದರು. ಮಾತುಕತೆಯ ಸಮಯದಲ್ಲಿ, ಭಾರತದ ಪ್ರಧಾನಿ ಜನರ ಸುರಕ್ಷತೆಯನ್ನು ಆದ್ಯತೆಯಾಗಿ ತೆಗೆದುಕೊಳ್ಳಲು ಮನವಿ ಮಾಡಿದ್ದರು. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಎಲ್ಲಾ ರೀತಿಯ ಹಗೆತನವನ್ನು ಕೊನೆಗೊಳಿಸಬೇಕೆಂದು ಕರೆ ನೀಡಿದ್ದರು.

ಈ ಸಂಘರ್ಷದಲ್ಲಿ ಇಲ್ಲಿಯವರೆಗೆ ಒಬ್ಬ ಭಾರತೀಯ ಪ್ರಜೆ ಸಾವನ್ನಪ್ಪಿದ್ದಾರೆ. ಭಾರತೀಯ ಪ್ರಜೆ ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ನಲ್ಲಿದ್ದಾಗ ಸ್ಫೋಟಕಗಳಿಂದ ತುಂಬಿದ ಮಾನವರಹಿತ ಹಡಗು ಡಿಕ್ಕಿ ಹೊಡೆದಿತ್ತು. ಇದರಿಂದ ಅವರು ಮೃತಪಟ್ಟಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?