AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಟ್ಜರ್​ಲೆಂಡ್​ನಲ್ಲಿ ಅದ್ಧೂರಿಯಾಗಿ ನಡೆಯಿತು ಶಿವ ದೇವಾಲಯದ ಭೂಮಿ ಪೂಜೆ

ಸ್ವಿಟ್ಜರ್​ಲೆಂಡ್​ ಜ್ಯೂರಿಚ್‌ನಲ್ಲಿರುವ ಶಿವ ದೇವಾಲಯವನ್ನು ದೊಡ್ಡದಾಗಿ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಎರಡು ದಿನಗಳ ಕಾಲ ಭೂಮಿ ಪೂಜೆ ಸೇರಿದಂತೆ ಹಲವು ಬಗೆಯ ಕಾರ್ಯಕ್ರಮಗಳು ನೆರವೇರಿದವು.

ನಯನಾ ರಾಜೀವ್
|

Updated on: Mar 24, 2024 | 9:12 AM

Share

ಶಿವ ಶಿವ ಎಂದರೆ ಭಯವಿಲ್ಲ ಶಿವ ನಾಮಕೆ ಸಾಟಿ ಬೇರಿಲ್ಲ ಎಂಬಂತೆ ಆ ಶಿವನನ್ನು ನೆನೆದರೆ ವ್ಯಕ್ತಿ ಮಾಡಿದ ಎಲ್ಲಾ ಪಾಪತಾಪಗಳೆಲ್ಲಾ ಕಳೆದು ಹೋಗುತ್ತದೆ ಎನ್ನುವ ನಂಬಿಕೆ ಇದೆ. ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ. ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದ ಹಲವು ದೇಶಗಳಲ್ಲಿ ಶಿವಭಕ್ತರಿದ್ದಾರೆ. ವಿದೇಶಗಳಲ್ಲಿ ಅನೇಕ ಪ್ರಸಿದ್ಧ ಶಿವ ದೇವಾಲಯಗಳಿವೆ, ಅವುಗಳು ಹೆಚ್ಚು ಗುರುತಿಸಲ್ಪಟ್ಟಿವೆ. ಅಂತಹ ಒಂದು ಪ್ರಸಿದ್ಧ ಶಿವ ದೇವಾಲಯವು ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ನಲ್ಲಿದೆ.

ಇದು ಶಿವನಿಗೆ ಸಮರ್ಪಿತವಾಗಿದೆ. ದೇವಾಲಯದ ಪ್ರದೇಶವನ್ನು ಈಗ ವಿಸ್ತರಿಸಲಾಗುತ್ತಿದೆ. ಕಾಮಗಾರಿ ಆರಂಭಕ್ಕೂ ಮುನ್ನ ಭೂಮಿಪೂಜೆ ಏರ್ಪಡಿಸಲಾಗಿತ್ತು. ಈ ಪೂಜೆಯು ಮಾರ್ಚ್ 22 ರಂದು ಪ್ರಾರಂಭವಾಯಿತು ಮತ್ತು ಮಾರ್ಚ್ 24 ರಂದು ಮುಕ್ತಾಯಗೊಳ್ಳಲಿದೆ.

ಭೂಮಿಪೂಜೆ ನಿಮಿತ್ತ ವಿಧಿವಿಧಾನದಂತೆ ಪೂಜೆ ಆಯೋಜಿಸಲಾಗುತ್ತಿದೆ. ಇದರಲ್ಲಿ ವೇದ ಮಂತ್ರ ಪಠಣ ಮತ್ತು ಹವನ ನಡೆಯುತ್ತಿದೆ. ಜ್ಯೂರಿಚ್‌ನಲ್ಲಿರುವ ಈ ಶಿವ ದೇವಾಲಯವನ್ನು ಮೊದಲ ಮಹಡಿಯಲ್ಲಿ ನಿರ್ಮಿಸಲಾಗಿದೆ.

ಜ್ಯೂರಿಚ್‌ನಲ್ಲಿರುವ ಈ ಶಿವ ದೇವಾಲಯವನ್ನು ಪ್ರಸಿದ್ಧ ಹಿಂದೂ ದೇವಾಲಯಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಪ್ರಪಂಚದಾದ್ಯಂತದ ಜನರು, ವಿಶೇಷವಾಗಿ ಈ ಪ್ರದೇಶದ ಹಿಂದೂ ಭಕ್ತರು ಶಿವನನ್ನು ಪೂಜಿಸಲು ಇಲ್ಲಿಗೆ ಬರುತ್ತಾರೆ. ಭಾರತೀಯ ಹಬ್ಬಗಳನ್ನು ಆಚರಿಸಲು ಹಿಂದೂ ಸಮುದಾಯದ ಜನರು ಕೂಡ ಇಲ್ಲಿ ಸೇರುತ್ತಾರೆ.

ಮತ್ತಷ್ಟು ಓದಿ:  ಶಿವ -ಪಾರ್ವತಿ ವಿವಾಹವಾದ ಸ್ಥಳ ಈಗ ಹೇಗಿದೆ ಗೊತ್ತಾ?

ದೇವಾಲಯದ ಇತಿಹಾಸವೇನು? ಈ ದೇವಾಲಯವನ್ನು 1990 ರ ದಶಕದಲ್ಲಿ ಸ್ವಿಟ್ಜರ್ಲೆಂಡ್‌ನಲ್ಲಿರುವ ತಮಿಳು ಹಿಂದೂ ಜನಸಂಖ್ಯೆಯನ್ನು ಒಟ್ಟುಗೂಡಿಸಲು ನಿರ್ಮಿಸಲಾಯಿತು. ದೇವಾಲಯದ ವಿಸ್ತೀರ್ಣ ಚಿಕ್ಕದಾದ ಕಾರಣ ಅದನ್ನು ವಿಸ್ತರಿಸಲು ನಿರ್ಧರಿಸಲಾಯಿತು. ನಿರ್ಮಾಣ ಕಾಮಗಾರಿಗೂ ಮುನ್ನ ಎರಡು ದಿನಗಳ ಕಾಲ ಭೂಮಿಪೂಜೆ ಏರ್ಪಡಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?