AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​-19 ಲಸಿಕೆ ಕಳಿಸಿದ ಭಾರತ ಸರ್ಕಾರಕ್ಕೆ ಶುಕ್ರಿಯಾ ಎಂದ ಭೂತಾನ್​ನ ಪುಟ್ಟ ಬಾಲಕಿಗೆ ಮನಸೋತ ನೆಟ್ಟಿಗರು; ಎರಡೂ ದೇಶಗಳ ಸ್ನೇಹಕ್ಕೊಂದು ಸಾಕ್ಷಿ

ನಮ್ಮ ದೇಶ ಭೂತಾನ್​ಗೆ ದೊಡ್ಡ ಪ್ರಮಾಣದಲ್ಲಿ ಕೊವಿಡ್ 19 ಲಸಿಕೆ ನೀಡಿದ ಭಾರತ ಸರ್ಕಾರಕ್ಕೆ ಕೃತಜ್ಞತೆಗಳು. ಭಾರತವನ್ನು ನೆರೆರಾಷ್ಟ್ರವನ್ನಾಗಿ ಪಡೆದ ನಾವು ಭೂತಾನೀಯರು ತುಂಬ ಪುಣ್ಯವಂತರು ಎಂದು ಬಾಲಕಿ ವಿಡಿಯೋದಲ್ಲಿ ಹೇಳಿದ್ದಾಳೆ.

ಕೊವಿಡ್​-19 ಲಸಿಕೆ ಕಳಿಸಿದ ಭಾರತ ಸರ್ಕಾರಕ್ಕೆ ಶುಕ್ರಿಯಾ ಎಂದ ಭೂತಾನ್​ನ ಪುಟ್ಟ ಬಾಲಕಿಗೆ ಮನಸೋತ ನೆಟ್ಟಿಗರು; ಎರಡೂ ದೇಶಗಳ ಸ್ನೇಹಕ್ಕೊಂದು ಸಾಕ್ಷಿ
ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ ಭೂತಾನ್​ನ ಬಾಲಕಿ
Lakshmi Hegde
|

Updated on: Mar 30, 2021 | 1:52 PM

Share

ಥಿಂಪು: ಕೊವಿಡ್​-19 ಲಸಿಕೆಯನ್ನು ಭೂತಾನ್​​ಗೆ ಕಳಿಸಿದ ಭಾರತ ಸರ್ಕಾರಕ್ಕೆ ಅಲ್ಲಿನ ಪುಟ್ಟ ಹುಡುಗಿಯೊಬ್ಬಳು ಕೃತಜ್ಞತೆ ಸಲ್ಲಿಸಿದ ರೀತಿಯನ್ನು ಭಾರತೀಯರು ತುಂಬು ಮನಸಿನಿಂದ ಶ್ಲಾಘಿಸಿದ್ದಾರೆ. ಈ ವಿಡಿಯೋ ಇದೀಗ ಭಾರತ-ಭೂತಾನ್​ ನಡುವಿನ ಸೌಹಾರ್ದತೆಗೆ ಸಾಕ್ಷಿಯಾಗಿ ನಿಂತಿದೆ. ಕೊರೊನಾ ಲಸಿಕೆ ಕೊಟ್ಟು ಉಪಕರಿಸಿದ ಭಾರತಕ್ಕೆ ಶುಕ್ರಿಯಾ ಎಂದು ಬಾಲಕಿ ಹೇಳುತ್ತಿರುವ ವಿಡಿಯೋ ಇಂಟರ್​​ನೆಟ್​​ನಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಈ ಪುಟ್ಟು ಹುಡುಗಿ ಹಿಂದಿ ಹಾಗೂ ಇಂಗ್ಲಿಷ್​ ಎರಡಲ್ಲೂ ಮಾತನಾಡಿ ಭಾರತಕ್ಕೆ ಧನ್ಯವಾದ ತಿಳಿಸಿದ್ದಾಳೆ.

ಭಾರತದಲ್ಲಿ 2 ಕೊರೊನಾ ಲಸಿಕೆಗಳನ್ನು ನೀಡಲಾಗುತ್ತಿದೆ. ಹಾಗೇ ಭಾರತದಿಂದ ಸೀರಂ ಇನ್​ಸ್ಟಿಟ್ಯೂಟ್ ಆಫ್​ ಇಂಡಿಯಾದ ಕೊವಿಶೀಲ್ಡ್​ ಲಸಿಕೆಯನ್ನು ಪಡೆದ ಮೊದಲ ದೇಶ ಭೂತಾನ್​. ಭಾರತ ಸರ್ಕಾರ ಭೂತಾನ್​ಗೆ ಲಸಿಕೆಯನ್ನು ರಫ್ತು ಮಾಡಿದ ಬಳಿಕ ಬಾಲಕಿ ಈ 47 ಸೆಕೆಂಡ್​ಗಳ ವಿಡಿಯೋ ಮಾಡಿ ಕೃತಜ್ಞತೆ ಸಲ್ಲಿಸಿದ್ದಾಳೆ. ವಿಡಿಯೋವನ್ನು ಭೂತಾನ್​​​ನ ಭಾರತದ ರಾಯಭಾರಿ ರುಚಿರಾ ಕಾಂಬೊಜ್ ಮೊದಲು ಪೋಸ್ಟ್ ಮಾಡಿದ್ದು, ನಂತರ ತುಂಬ ಜನರು ಶೇರ್ ಮಾಡಿಕೊಂಡಿದ್ದಾರೆ. ಬಾಲಕಿ ಭೂತಾನ್​​ನ ಬಾಲ ಕಲಾವಿದೆ ಖೆನ್ರಾಬ್ ಯೀಡ್ಜಿನ್ ಸೈಲ್ಡೆನ್. ಇವಳು ಮುದ್ದುಮುದ್ದಾಗಿ, ಮುಗ್ಧವಾಗಿ ಶುಕ್ರಿಯಾ ಭಾರತ್​ ಎಂದಿದ್ದಾಳೆ.

ನಮ್ಮ ದೇಶ ಭೂತಾನ್​ಗೆ ದೊಡ್ಡ ಪ್ರಮಾಣದಲ್ಲಿ ಕೊವಿಡ್ 19 ಲಸಿಕೆ ನೀಡಿದ ಭಾರತ ಸರ್ಕಾರಕ್ಕೆ ಕೃತಜ್ಞತೆಗಳು. ಭಾರತವನ್ನು ನೆರೆರಾಷ್ಟ್ರವನ್ನಾಗಿ ಪಡೆದ ನಾವು ಭೂತಾನೀಯರು ತುಂಬ ಪುಣ್ಯವಂತರು ಎಂದು ವಿಡಿಯೋದಲ್ಲಿ ಹೇಳಿದ್ದಾಳೆ. ಅದನ್ನು ನೋಡಿದ ಭಾರತದ ನೆಟ್ಟಿಗರು, ಖೆನ್ರಾಬ್, ನೀನು ಸಲ್ಲಿಸಿದ ಕೃತಜ್ಞತೆ ನಮ್ಮ ಹೃದಯವನ್ನು ಸ್ಪರ್ಶಿಸಿತು ಎಂದಿದ್ದಾರೆ. ಇದರೊಂದಿಗೆ Vaccine Maitri (ವ್ಯಾಕ್ಸಿನ್ ಮೈತ್ರಿ), India Bhutan Friendship (ಭಾರತ-ಭೂತಾನ್​ ಸ್ನೇಹ) ಹ್ಯಾಷ್​ಟ್ಯಾಗ್​ಗಳು ಟ್ರೆಂಡ್ ಆಗುತ್ತಿವೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್