AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಕ್ಕೆ ಮುಜುಗರ ತಂದ ಅಮೆರಿಕ; ಶೃಂಗಸಭೆಗೆ ತೈವಾನ್​​ಗೆ ಆಮಂತ್ರಣ ನೀಡಿ, ಚೀನಾವನ್ನು ನಿರ್ಲಕ್ಷಿಸಿದ ಬೈಡನ್​

ಚೀನಾ -ಅಮೆರಿಕ ವೈರತ್ವ ಜಗಜ್ಜಾಹೀರು. ಯುಎಸ್​ಗೆ ಚೀನಾ ಯಾವತ್ತಿದ್ದರೂ ಸೈದ್ಧಾಂತಿಕ ಶತ್ರು. ಹಾಗೇ ತೈವಾನ್​ ಮೇಲೆ ಕೂಡ ಚೀನಾದ ಕೆಂಗಣ್ಣಿದೆ.

ಚೀನಾಕ್ಕೆ ಮುಜುಗರ ತಂದ ಅಮೆರಿಕ; ಶೃಂಗಸಭೆಗೆ ತೈವಾನ್​​ಗೆ ಆಮಂತ್ರಣ ನೀಡಿ, ಚೀನಾವನ್ನು ನಿರ್ಲಕ್ಷಿಸಿದ ಬೈಡನ್​
ಅಮೆರಿಕ ಅಧ್ಯಕ್ಷ ಜೋ ಬೈಡನ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 24, 2021 | 8:13 AM

Share

ಡಿಸೆಂಬರ್​​ನಲ್ಲಿ ವರ್ಚ್ಯುವಲ್​ ಆಗಿ ನಡೆಯಲಿರುವ ಪ್ರಜಾಪ್ರಭುತ್ವ ರಾಷ್ಟ್ರಗಳ ಶೃಂಗಸಭೆಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್​ 110 ದೇಶಗಳನ್ನು ಆಹ್ವಾನಿಸಿದ್ದಾರೆ. ಅವರು ಆಮಂತ್ರಣ ನೀಡಿದ ದೇಶಗಳ ಹೆಸರನ್ನು ಅಮೆರಿಕದ ವಿದೇಶಾಂಗ ಇಲಾಖೆಯ ವೆಬ್​ಸೈಟ್​​ನಲ್ಲಿ ಪ್ರಕಟಿಸಲಾಗಿದೆ. ಬೈಡನ್​ ತಮ್ಮ ಪಾಶ್ಚಿಮಾತ್ರ ಮಿತ್ರರಾಷ್ಟ್ರಗಳಿಗೆ ಆಹ್ವಾನ ನೀಡುವ ಜತೆ, ಇರಾಕ್​, ಭಾರತ, ಪಾಕಿಸ್ತಾನಕ್ಕೂ ಆಹ್ವಾನವಿತ್ತಿದ್ದಾರೆ. ಆದರೆ ಇಲ್ಲಿ ಚೀನಾ ಹೆಸರಿಲ್ಲ. ಅಂದರೆ ಬೈಡನ್​ ಚೀನಾಕ್ಕೆ ಆಹ್ವಾನ ಕೊಟ್ಟಿಲ್ಲ. ಅದರಲ್ಲಿ ವಿಶೇಷವೆಂದರೆ ಚೀನಾದ ವೈರಿ ರಾಷ್ಟ್ರ ತೈವಾನ್​ಗೆ ಆಹ್ವಾನ ಹೋಗಿದೆ. ಹಾಗೇ ಟರ್ಕಿ ಕೂಡ ಈ ಪಟ್ಟಿಯಲ್ಲಿ ಇಲ್ಲ. 

ಚೀನಾ -ಅಮೆರಿಕ ವೈರತ್ವ ಜಗಜ್ಜಾಹೀರು. ಯುಎಸ್​ಗೆ ಚೀನಾ ಯಾವತ್ತಿದ್ದರೂ ಸೈದ್ಧಾಂತಿಕ ಶತ್ರು. ಹಾಗೇ ತೈವಾನ್​ ಮೇಲೆ ಕೂಡ ಚೀನಾದ ಕೆಂಗಣ್ಣಿದೆ. ತೈವಾನ್​ ಆಡಳಿತ ತನ್ನನ್ನು ತಾನು ಸ್ವತಂತ್ರ ಎಂದು ಹೇಳಿಕೊಂಡಿದ್ದರೂ ಚೀನಾ ಅದನ್ನು ಒಪ್ಪುತ್ತಿಲ್ಲ. ಅದು ತಮ್ಮದೇ ಒಂದು ಭಾಗ ಎಂದೇ ಹೇಳಿಕೊಂಡುಬರುತ್ತಿದೆ. ಈಗ ಅಮೆರಿಕ ತೈವಾನ್​​ಗೆ ಆಮಂತ್ರಣಕೊಟ್ಟಿದ್ದು ಚೀನಾದ ಸಿಟ್ಟಿಗೆ ಕಾರಣವಾಗುವುದರಲ್ಲಿ ಸಂಶಯವೇ ಇಲ್ಲ ಎನ್ನುತ್ತಿದ್ದಾರೆ ರಾಜಕೀಯ ತಜ್ಞರು.

ಡಿಸೆಂಬರ್​ 9-10ರಂದು ನಡೆಯಲಿರುವ ವರ್ಚ್ಯುವಲ್​ ಶೃಂಗಸಭೆಯಲ್ಲಿ ಮಧ್ಯಪ್ರಾಚ್ಯ ರಾಷ್ಟ್ರಗಳಾದ ಇಸ್ರೇಲ್​ ಮತ್ತು ಇರಾಕ್​ ಮಾತ್ರ ಪಾಲ್ಗೊಳ್ಳಲಿವೆ. ಇಲ್ಲಿ ಈಜಿಪ್ಟ್​, ಸೌದಿ ಅರೇಬಿಯಾ, ಜೋರ್ಡನ್​, ಕತಾರ್​, ಯುನೈಟೆಡ್​ ಅರಬ್​ ಎಮಿರೇಟ್ಸ್​ಗಳಿಗೆ ಯುಎಸ್ ಆಹ್ವಾನ ನೀಡಿಲ್ಲ.  ಬ್ರೆಜಿಲ್​ ಅಧ್ಯಕ್ಷ ಜೇರ್​ ಬೊಲ್ಸೊನಾರೋ ಅವರು ಸರ್ವಾಧಿಕಾರಿ, ಅಮೆರಿಕದ ಹಿಂದಿನ ಅಧ್ಯಕ್ಷ ಜೋ ಬೈಡನ್​ ಬೆಂಬಲಿಗರು ಎಂಬಂಥ ಟೀಕೆಗಳಿದ್ದರೂ ಅವರಿಗೂ ಶೃಂಗಸಭೆಗೆ ಆಹ್ವಾನ ನೀಡಲಾಗಿದೆ.  ಯುರೋಪ್​​ನಲ್ಲಿ ಪೋಲ್ಯಾಂಡ್​, ಆಫ್ರಿಕಾದಲ್ಲಿ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ದಕ್ಷಿಣ ಆಫ್ರಿಕಾ, ನೈಜೀರಿಯಾ ಮತ್ತು ನೈಜರ್ ದೇಶಗಳು ಪಟ್ಟಿಯಲ್ಲಿ ಸೇರಿವೆ.

ಡಿಸೆಂಬರ್​ನಲ್ಲಿ ಈ ಪ್ರಜಾಪ್ರಭುತ್ವ ಶೃಂಗಸಭೆ ನಡೆಯಲಿದೆ ಎಂದು ಆಗಸ್ಟ್​​ನಲ್ಲಿಯೇ ಘೋಷಿಸಲಾಗಿತ್ತು. ಈ ಶೃಂಗಸಭೆಯಲ್ಲಿ, ಸರ್ವಾಧಿಕಾರದ ವಿರುದ್ಧ ಪ್ರಜೆಗಳ ರಕ್ಷಣೆ, ಭ್ರಷ್ಟಾಚಾರದ ವಿರುದ್ಧ ಹೋರಾಟ ಮತ್ತು ಮಾನವ ಹಕ್ಕುಗಳ ಗೌರವ ಉತ್ತೇಜಿಸುವ ವಿಚಾರಗಳಿಗೆ ಆದ್ಯತೆ ಇರಲಿದೆ ಎಂದು ಆಗಸ್ಟ್​ನಲ್ಲಿಯೇ ಘೋಷಿಸಲಾಗಿದೆ.

ಇದನ್ನೂ ಓದಿ: Gold Price Today: ಚಿನ್ನಾಭರಣ ಪ್ರಿಯರಿಗೆ ಸಂತೋಷದ ಸುದ್ದಿ​; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್