AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಕ್ರಿಸ್ಮಸ್​ ಉಡುಗೊರೆ ನೀಡಿದ ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡನ್; ಮಹತ್ವದ ನಿರ್ಧಾರ ಘೋಷಣೆ

ಕಾಲೇಜು ಶಿಕ್ಷಣವು ಬದುಕಿನ ಏಣಿಯಾಗಬೇಕು, ಆದರೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವು ಅವರನ್ನು ಹಿಂದಕ್ಕೆ ಎಳೆಯುತ್ತಿದೆ. ಯುಎಸ್ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಈ ಬಗ್ಗೆ ಹೊಸ ಯೋಜನೆಯ ಭರವಸೆ ನೀಡಿದ್ದಾರೆ.

ವಿದ್ಯಾರ್ಥಿಗಳಿಗೆ ಕ್ರಿಸ್ಮಸ್​ ಉಡುಗೊರೆ ನೀಡಿದ ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡನ್; ಮಹತ್ವದ ನಿರ್ಧಾರ ಘೋಷಣೆ
ಭಾರತೀಯ ಮೂಲದ ಅಮೆರಿಕನ್ನರ ಕುರಿತು ಶ್ಲಾಘನೆ ವ್ಯಕ್ತವಾಗಿದೆ.
TV9 Web
| Updated By: ganapathi bhat|

Updated on:Apr 06, 2022 | 11:20 PM

Share

ಜನವರಿ 20ರಂದು ಶ್ವೇತಭವನ ಪ್ರವೇಶಿಸಲಿರುವ ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಹೊಸ ಶೈಕ್ಷಣಿಕ ಯೋಜನೆಯೊಂದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆ ಮೂಲಕ,  ಯುಎಸ್ ವಿದ್ಯಾರ್ಥಿಗಳಿಗೆ ಕ್ರಿಸ್ಮಸ್  ಉಡುಗೊರೆ ನೀಡಿದ್ದಾರೆ.

ಜೋ ಬೈಡನ್, ಅಮೆರಿಕಾದ ಕಮ್ಯುನಿಟಿ ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡುವ ಯೋಜನೆಯ ಬಗ್ಗೆ ಹೇಳಿಕೆ ನೀಡಿದ್ದಾರೆ.. ಇಂದಿನ 21ನೇ ಶತಮಾನದಲ್ಲಿ 12 ವರ್ಷಗಳ ಕಲಿಕೆ ಸಾಕಾಗುವುದಿಲ್ಲ. ಹಾಗಾಗಿ, ಬೈಡನ್-ಹ್ಯಾರಿಸ್ ಯೋಜನೆಯಡಿ,  ಸಮುದಾಯ ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು. ಹಾಗೇ ಪಬ್ಲಿಕ್ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ, 1.25 ಲಕ್ಷ ಅಮೆರಿಕನ್ ಡಾಲರ್​ಗಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಟ್ವೀಟ್ ಮಾಡುವ ಮೂಲಕ ತಮ್ಮ ಶೈಕ್ಷಣಿಕ ಕಾಳಜಿಯನ್ನು ಮೆರೆದಿದ್ದಾರೆ.

ಅಮೆರಿಕಾದಲ್ಲಿ ಕಾರ್ಮಿಕ ವರ್ಗದ (1.25 ಲಕ್ಷ ಅಮೆರಿಕನ್ ಡಾಲರ್​ಗಿಂತ ಕಡಿಮೆ ಆದಾಯ ಹೊಂದಿರುವ) ಬಹುಪಾಲು ಜನರು ವರ್ಣೀಯರಾಗಿದ್ದಾರೆ. ಬೈಡನ್ -ಹ್ಯಾರಿಸ್ ಪಕ್ಷದ ಗೆಲುವಿಗೆ ಕಾರಣರಾದ ಅಂತಹ ಕುಟುಂಬಗಳಿಗೆ ಈ ಯೋಜನೆಯಿಂದ ಸಹಾಯವಾಗಲಿದೆ ಎಂಬ ಅಭಿಪ್ರಾಯಗಳೂ ಕೇಳಿಬಂದಿವೆ.

ಬೈಡನ್​ ಪಕ್ಷದ ಇತರ ನಾಯಕರೂ ಇಂತಹ ಯೋಜನೆಯನ್ನು ಕಾರ್ಯರೂಪಗೊಳಿಸಬೇಕು ಎಂದು ಈ ಹಿಂದೆ ಅಭಿಪ್ರಾಯಪಟ್ಟಿದ್ದರು. ಅಮೆರಿಕದ ವಿದ್ಯಾರ್ಥಿಗಳು ಎದುರಿಸುತ್ತಿರುವ ಆರ್ಥಿಕ ಒತ್ತಡವನ್ನು ಕಡಿಮೆ ಮಾಡುವ ಬಗ್ಗೆ ಯೋಚಿಸಿದ್ದರು. ಕಾಲೇಜು ಶಿಕ್ಷಣವು ಬದುಕಿನ ಏಣಿಯಾಗಬೇಕು, ಆದರೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವು ಅವರನ್ನು ಹಿಂದಕ್ಕೆ ಎಳೆಯುತ್ತಿದೆ ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿದ್ದವು. ಇದೀಗ ಬೈಡನ್ ಹೊಸ ಭರವಸೆ ನೀಡಿರುವುದು ಅಮೆರಿಕನ್ನರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ರಾಷ್ಟ್ರದ ಪ್ರಗತಿಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು. ವಿಶ್ವದ ವಿವಿಧ ದೇಶಗಳು ಈ ನೆಲೆಯಲ್ಲಿ ಕೆಲಸ ಮಾಡುತ್ತಿವೆ. ತನ್ನ ಭವಿಷ್ಯದ ಅಭಿವೃದ್ಧಿಗಾಗಿ ಇಂದಿನ ವಿದ್ಯಾರ್ಥಿಗಳನ್ನು ಉತ್ತಮ ಹಾದಿಯಲ್ಲಿ ಕೊಂಡೊಯ್ಯಲು ಪ್ರಯತ್ನಿಸುತ್ತಿವೆ. ಈಗಾಗಲೇ ಭಾರತದಲ್ಲೂ ಈ ಬಗ್ಗೆ ಕೆಲಸಗಳಾಗುತ್ತಿರುವುದನ್ನು ನಾವು ಗಮನಿಸಬಹುದು. ನೂತನ ಶಿಕ್ಷಣ ಪದ್ಧತಿಯಂತಹ ಯೋಜನೆಗಳಿಂದ ಶೈಕ್ಷಣಿಕ ಕ್ಷೇತ್ರದ ಬದಲಾವಣೆಗೆ ದೇಶ ಶ್ರಮಿಸುತ್ತಿದೆ. ಬಿಸಿಯೂಟ ಯೋಜನೆ, ಉಚಿತ ಸೈಕಲ್ ವಿತರಣೆ, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಇತ್ಯಾದಿ ಯೋಜನೆಗಳನ್ನೂ ನಾವು ಸ್ಮರಿಸಬಹುದು.

36 ದಿನಕ್ಕೆ ಮುಂಚೆ ಕೊನೆಗೂ ಜೋ ಬೈಡನ್ ಗೆಲುವನ್ನು ದೃಢೀಕರಿಸಿದ US ಚುನಾವಣಾ ಆಯೋಗ

Published On - 1:11 pm, Sat, 26 December 20

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು