AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ದೇಶಗಳ ಕಮರ್ಷಿಯಲ್ ಹಡಗಿಗೂ ಹಾರ್ಮುಜ್ ಜಲಸಂಧಿ ತೆರೆದಿದೆ; ಇರಾನ್ ಮಹತ್ವದ ಘೋಷಣೆ

ಜಾಗತಿಕ ತೈಲ ಟ್ಯಾಂಕರ್ ಸಂಚಾರದ ಮುಖ್ಯವಾದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ್ದಕ್ಕೆ ಇರಾನ್ ಹಲವು ದೇಶಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಹಾರ್ಮುಜ್ ಅನ್ನು ತೆರೆಸಿಯೇ ಸಿದ್ಧ ಎಂದು ಡೊನಾಲ್ಡ್ ಟ್ರಂಪ್ ಕೂಡ ಶಪಥ ಮಾಡಿದ್ದರು. ಕೊನೆಗೂ ಇದೀಗ ಇರಾನ್ ಮಹತ್ವದ ಘೋಷಣೆ ಮಾಡುವ ಮೂಲಕ ಯಾವ ದೇಶದ ಹಡಗಿಗೂ ಹಾರ್ಮುಜ್ ಜಲಸಂಧಿಯಲ್ಲಿ ನಿರ್ಬಂಧವಿಲ್ಲ ಎಂದು ಹೇಳಿದೆ. ಇದರಿಂದ ಎಲ್ಲ ದೇಶಗಳು ನಿಟ್ಟುಸಿರು ಬಿಟ್ಟಿವೆ.

ಎಲ್ಲ ದೇಶಗಳ ಕಮರ್ಷಿಯಲ್ ಹಡಗಿಗೂ ಹಾರ್ಮುಜ್ ಜಲಸಂಧಿ ತೆರೆದಿದೆ; ಇರಾನ್ ಮಹತ್ವದ ಘೋಷಣೆ
Hormuz Image Credit source: PTI
ಸುಷ್ಮಾ ಚಕ್ರೆ
|

Updated on:Apr 17, 2026 | 7:24 PM

Share

ಟೆಹ್ರಾನ್, ಏಪ್ರಿಲ್ 17: ವಿಶ್ವದಾದ್ಯಂತದ ಎಲ್ಲಾ ರಾಷ್ಟ್ರಗಳ ದೊಡ್ಡ ತಲೆನೋವೊಂದು ಬಗೆಹರಿದಂತಾಗಿದೆ. ನಿನ್ನೆ (ಗುರುವಾರ) ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಘೋಷಣೆಯಾದ ನಂತರ ಕೊನೆಗೂ ಇಂದು ಇರಾನ್ ಎಲ್ಲಾ ದೇಶಗಳ ವಾಣಿಜ್ಯ ಹಡಗುಗಳ ಸಾಗಣೆಗೆ ಹಾರ್ಮುಜ್ ಜಲಸಂಧಿಯನ್ನು (Strait Of Hormuz) ತೆರೆಯುವುದಾಗಿ ಘೋಷಿಸಿದೆ. ಇದು ವಿಶ್ವದ ಅತ್ಯಂತ ಪ್ರಮುಖ ಜಲಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯ ನಿರ್ಬಂಧಗಳಲ್ಲಿ ಗಮನಾರ್ಹ ಸಡಿಲಿಕೆಯನ್ನು ಸೂಚಿಸುತ್ತದೆ.

ಈ ಬಗ್ಗೆ ಎಕ್ಸ್ (ಹಿಂದೆ ಟ್ವಿಟರ್)ನಲ್ಲಿ ಪೋಸ್ಟ್‌ ಮಾಡಿರುವ ಇರಾನ್​ ವಿದೇಶಾಂಗ ಸಚಿವ ಅರಘ್ಚಿ, “ಲೆಬನಾನ್‌ನಲ್ಲಿನ ಕದನ ವಿರಾಮಕ್ಕೆ ಅನುಗುಣವಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಎಲ್ಲಾ ವಾಣಿಜ್ಯ ಹಡಗುಗಳಿಗೆ ಮಾರ್ಗವನ್ನು ಉಳಿದ ಕದನ ವಿರಾಮದ ಅವಧಿಗೆ ಸಂಪೂರ್ಣವಾಗಿ ಮುಕ್ತವೆಂದು ಘೋಷಿಸುತ್ತಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ: ಇಸ್ರೇಲ್, ಲೆಬನಾನ್ 10 ದಿನಗಳ ಕದನವಿರಾಮಕ್ಕೆ ಒಪ್ಪಿಕೊಂಡಿವೆ; ಟ್ರಂಪ್ ಘೋಷಣೆ

ಇರಾನ್‌ನ ಈ ಘೋಷಣೆಯ ನಂತರ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಇರಾನ್​ಗೆ ಧನ್ಯವಾದ ಅರ್ಪಿಸಿದ್ದಾರೆ. “ಇರಾನ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಿದೆ ಮತ್ತು ಪೂರ್ಣ ಮಾರ್ಗಕ್ಕೆ ಸಿದ್ಧವಾಗಿದೆ ಎಂದು ಇರಾನ್ ಘೋಷಿಸಿದೆ. ಥ್ಯಾಂಕ್ಯೂ ಇರಾನ್” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಜಾಗತಿಕ ರಾಜಕೀಯದಲ್ಲಿ ಬದಲಾದ ಲೆಕ್ಕಾಚಾರ, ಪಾಕಿಸ್ತಾನ ಭೇಟಿಗೆ ಇರಾನ್ ಒಪ್ಪಂದದ ಷರತ್ತು ವಿಧಿಸಿದ ಟ್ರಂಪ್

ಇಸ್ರೇಲ್ ಮತ್ತು ಲೆಬನಾನ್ 10 ದಿನಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಘೋಷಿಸಿದ ನಂತರ ಇರಾನ್ ಈ ಘೋಷಣೆ ಮಾಡಿದೆ. ಟ್ರಂಪ್ ಗುರುವಾರ ಲೆಬನಾನ್ ಮತ್ತು ಇಸ್ರೇಲ್ ನಡುವೆ 10 ದಿನಗಳ ಕದನ ವಿರಾಮ ಒಪ್ಪಂದವನ್ನು ಘೋಷಿಸಿದ್ದರು. ಹಾಗೇ, ಎರಡು ದೇಶಗಳ ನಾಯಕರ ನಡುವೆ ಮೊದಲ ಸಭೆಯನ್ನು ಸಂಘಟಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಿದ್ದರು. 10ನೇ ಯುದ್ಧವನ್ನು ನಿಲ್ಲಿಸಿದ ಹೆಮ್ಮೆ ನನಗಿದೆ ಎಂದು ಟ್ರಂಪ್ ತಾವೇ ತಮ್ಮ ಬೆನ್ನು ತಟ್ಟಿಕೊಂಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:23 pm, Fri, 17 April 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?