AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಶಿಕ್ಷಣದ ಜಾಗತೀಕರಣದತ್ತ ದೊಡ್ಡ ಹೆಜ್ಜೆ; ಐಐಎಂ ಅಹಮದಾಬಾದ್ ದುಬೈ ಕ್ಯಾಂಪಸ್ ಉದ್ಘಾಟನೆಯಲ್ಲಿ ಧರ್ಮೇಂದ್ರ ಪ್ರಧಾನ್

ಐಐಎಂ ಅಹಮದಾಬಾದ್ ದುಬೈ ಕ್ಯಾಂಪಸ್ ಅನ್ನು ದುಬೈನ ಕ್ರೌನ್ ಪ್ರಿನ್ಸ್ ಎಚ್.ಎಚ್. ​​ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಉದ್ಘಾಟಿಸಿರುವುದು ಒಂದು ದೊಡ್ಡ ಗೌರವ. ಪ್ರಧಾನಿ ನರೇಂದ್ರ ಮೋದಿಯವರ ಕಲ್ಪನೆಯಂತೆ ಭಾರತದ ಶಿಕ್ಷಣದ ಜಾಗತೀಕರಣದತ್ತ ಇದು ಮತ್ತೊಂದು ದೊಡ್ಡ ಹೆಜ್ಜೆಯಾಗಿದೆ. ಐಐಎಂ ಅಹಮದಾಬಾದ್ ದುಬೈ ಕ್ಯಾಂಪಸ್ ಭಾರತದ ಅತ್ಯುತ್ತಮತೆಯನ್ನು ಜಗತ್ತಿಗೆ ಕೊಂಡೊಯ್ಯುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಭಾರತದ ಶಿಕ್ಷಣದ ಜಾಗತೀಕರಣದತ್ತ ದೊಡ್ಡ ಹೆಜ್ಜೆ; ಐಐಎಂ ಅಹಮದಾಬಾದ್ ದುಬೈ ಕ್ಯಾಂಪಸ್ ಉದ್ಘಾಟನೆಯಲ್ಲಿ ಧರ್ಮೇಂದ್ರ ಪ್ರಧಾನ್
Dharmendra Pradhan In Uae
ಸುಷ್ಮಾ ಚಕ್ರೆ
|

Updated on:Sep 11, 2025 | 6:51 PM

Share

ದುಬೈ, ಸೆಪ್ಟೆಂಬರ್ 11: ಐಐಎಂ ಅಹಮದಾಬಾದ್ ತನ್ನ ಹೊಸ ಕ್ಯಾಂಪಸ್ ಅನ್ನು ದುಬೈನಲ್ಲಿ ಪ್ರಾರಂಭಿಸಿದೆ. ಇಂದು ದುಬೈನ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಭಾರತದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ, ಭಾರತೀಯ ಶಿಕ್ಷಣದ ಜಾಗತೀಕರಣದಲ್ಲಿ ಇದು ಮಹತ್ವದ ಹೆಜ್ಜೆ, ಭಾರತದ ಅತ್ಯುತ್ತಮ ಪ್ರತಿಭೆಯನ್ನು ಈಗ ಜಗತ್ತಿಗೆ ಪ್ರದರ್ಶಿಸಲಾಗುವುದು ಎಂದು ಧರ್ಮೇಂದ್ರ ಪ್ರಧಾನ್ ಹೇಳಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೆಪ್ಟೆಂಬರ್ 10ರಂದು 2 ದಿನಗಳ ಭೇಟಿಗೆ ಯುಎಇಗೆ ತೆರಳಿದ್ದಾರೆ. ನಾಳೆ ಅವರು ದೆಹಲಿಗೆ ವಾಪಾಸ್ ಬರಲಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರ ಈ ಭೇಟಿಯ ಉದ್ದೇಶ ಎರಡೂ ದೇಶಗಳ ನಡುವಿನ ಸಹಕಾರವನ್ನು ಗಾಢವಾಗಿಸುವುದು. ಈ ಸಂದರ್ಭದಲ್ಲಿ, ಮೊದಲ ವಿದೇಶಿ ಅಟಲ್ ಇನ್ಕ್ಯುಬೇಷನ್ ಸೆಂಟರ್ ಮತ್ತು ಐಐಎಂ ಅಹಮದಾಬಾದ್‌ನ ದುಬೈ ಕ್ಯಾಂಪಸ್ ಅನ್ನು ಉದ್ಘಾಟಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಸಹಕಾರದ ಸಾಧ್ಯತೆಗಳನ್ನು ಅನ್ವೇಷಿಸುವುದು, ಶೈಕ್ಷಣಿಕ ಶ್ರೇಷ್ಠತೆ ಮತ್ತು ನಾವೀನ್ಯತೆಗಳನ್ನು ಉತ್ತೇಜಿಸುವುದು ಮತ್ತು ಎರಡೂ ದೇಶಗಳ ವಿದ್ಯಾರ್ಥಿಗಳು ಮತ್ತು ಯುವಕರ ಆಕಾಂಕ್ಷೆಗಳನ್ನು ಪೂರೈಸಲು ಪಾಲುದಾರಿಕೆಗೆ ಹೊಸ ಅವಕಾಶಗಳನ್ನು ಕಂಡುಕೊಳ್ಳುವುದು ಈ ಭೇಟಿಯ ಉದ್ದೇಶವಾಗಿದೆ.

ಇದನ್ನೂ ಓದಿ: ಆಂಧ್ರ ಸರ್ಕಾರದ ಲೀಪ್ ಮಾದರಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶ್ಲಾಘನೆ

ಐಐಎಂ ಅಹಮದಾಬಾದ್ ದುಬೈ ಕ್ಯಾಂಪಸ್ ಉದ್ಘಾಟನೆಯ ಬಗ್ಗೆ ಮಾಹಿತಿ ನೀಡಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ಐಐಎಂ ಅಹಮದಾಬಾದ್ ದುಬೈ ಕ್ಯಾಂಪಸ್ ಅನ್ನು ದುಬೈನ ಕ್ರೌನ್ ಪ್ರಿನ್ಸ್ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಉದ್ಘಾಟಿಸಿದ್ದು ನಮಗೆ ತುಂಬಾ ಗೌರವದ ವಿಷಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕಲ್ಪನೆಯಂತೆ ಭಾರತೀಯ ಶಿಕ್ಷಣದ ಜಾಗತೀಕರಣದತ್ತ ಇದು ಮತ್ತೊಂದು ದೊಡ್ಡ ಹೆಜ್ಜೆಯಾಗಿದೆ. ಐಐಎಂ ಅಹಮದಾಬಾದ್ ದುಬೈ ಕ್ಯಾಂಪಸ್ ಭಾರತದ ಅತ್ಯುತ್ತಮ ಪ್ರತಿಭೆಯನ್ನು ಜಗತ್ತಿಗೆ ತರುತ್ತದೆ. ಇಂದು ಐಐಎಂ ಅಹಮದಾಬಾದ್ ಅಂತಾರಾಷ್ಟ್ರೀಯ ಕ್ಯಾಂಪಸ್ ಅನ್ನು ಆಯೋಜಿಸುವ ಮೂಲಕ ದುಬೈ ‘ಭಾರತೀಯ ಮನೋಭಾವ, ಜಾಗತಿಕ ದೃಷ್ಟಿಕೋನ’ ತತ್ವಕ್ಕೆ ಆದರ್ಶ ವೇದಿಕೆಯನ್ನು ಒದಗಿಸಿದೆ. ಭಾರತ-ಯುಎಇ ಜ್ಞಾನ ಸಹಕಾರಕ್ಕೆ ಅದ್ಭುತ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ಶೇಖ್ ಹಮ್ದಾನ್ ಅವರಿಗೆ ಕೃತಜ್ಞತೆಗಳು” ಎಂದು ಪೋಸ್ಟ್ ಮಾಡಿದ್ದಾರೆ.

ತಮ್ಮ ಭೇಟಿಯ ಸಮಯದಲ್ಲಿ ಧರ್ಮೇಂದ್ರ ಪ್ರಧಾನ್ ಅವರು ಶಿಕ್ಷಣ, ನಾವೀನ್ಯತೆ ಮತ್ತು ಜ್ಞಾನ ವಿನಿಮಯದಲ್ಲಿ ಪಾಲುದಾರಿಕೆಯನ್ನು ಹೆಚ್ಚಿಸಲು ಯುಎಇಯ ಪ್ರಮುಖ ನಾಯಕರು, ಮಂತ್ರಿಗಳು, ನೀತಿ ನಿರೂಪಕರು, ಶಿಕ್ಷಣ ತಜ್ಞರು ಮತ್ತು ಭಾರತೀಯ ಮತ್ತು ಯುಎಇ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಬುಧವಾರ ಅವರು ಅಬುಧಾಬಿಯ ಶಿಕ್ಷಣ ಮತ್ತು ಜ್ಞಾನ ಇಲಾಖೆಯ ಅಧ್ಯಕ್ಷೆ ಸಾರಾ ಮುಸಲ್ಲಮ್ ಅವರನ್ನು ಭೇಟಿಯಾದರು. ಅವರು ಐಐಟಿ ದೆಹಲಿ-ಅಬುಧಾಬಿ ಕ್ಯಾಂಪಸ್‌ಗೆ ಸಹ ಭೇಟಿ ನೀಡಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:48 pm, Thu, 11 September 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು