Big News: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಕೇಸ್ ದಾಖಲು; ಭಾಷಣದ ನೇರ ಪ್ರಸಾರಕ್ಕೂ ತಡೆ

| Updated By: ಸುಷ್ಮಾ ಚಕ್ರೆ

Updated on: Aug 22, 2022 | 8:22 AM

ಇಸ್ಲಾಮಾಬಾದ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ನ್ಯಾಯಾಧೀಶರು ಮತ್ತು ಇಬ್ಬರು ಉನ್ನತ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಕ್ಕಾಗಿ ಇಮ್ರಾನ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Big News: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಕೇಸ್ ದಾಖಲು; ಭಾಷಣದ ನೇರ ಪ್ರಸಾರಕ್ಕೂ ತಡೆ
ಇಮ್ರಾನ್ ಖಾನ್
Image Credit source: India Today
Follow us on

ಇಸ್ಲಮಾಬಾದ್: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್​ (Imran Khan) ವಿರುದ್ಧ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಇಸ್ಲಾಮಾಬಾದ್‌ನಲ್ಲಿ (Islamabad) ರ್ಯಾಲಿ ವೇಳೆ ನ್ಯಾಯಾಧೀಶರು ಹಾಗೂ ಇಬ್ಬರು ಉನ್ನತ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಕ್ಕಾಗಿ ಪಾಕ್ ಮಾಜಿ ಪಿಎಂ ಇಮ್ರಾನ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶನಿವಾರ ಸಂಜೆ ಎಫ್ -9 ಪಾರ್ಕ್‌ನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಸರ್ಕಾರಿ ಸಂಸ್ಥೆಗಳಿಗೆ ಬೆದರಿಕೆ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಕೆಲವೇ ಗಂಟೆಗಳ ನಂತರ ಪಾಕಿಸ್ತಾನದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನೇರ ಭಾಷಣಗಳನ್ನು ಪ್ರಸಾರ ಮಾಡುವುದನ್ನು ಪಾಕಿಸ್ತಾನ್ ಎಲೆಕ್ಟ್ರಾನಿಕ್ ಮೀಡಿಯಾ ರೆಗ್ಯುಲೇಟರಿ ಅಥಾರಿಟಿ ನಿಷೇಧಿಸಿತು.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಭಾಷಣ, ಹೇಳಿಕೆಗಳಲ್ಲಿ ಆಧಾರರಹಿತ ಆರೋಪಗಳನ್ನು ಹೊರಿಸುವ ಮೂಲಕ ನಿರಂತರವಾಗಿ ಪಾಕಿಸ್ತಾನದ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ರಾಜ್ಯ ಸಂಸ್ಥೆಗಳು ಮತ್ತು ಅಧಿಕಾರಿಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳ ಮೂಲಕ ದ್ವೇಷಪೂರಿತ ಭಾಷಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಪಿಇಎಂಆರ್‌ಎ ತನ್ನ ನಿರ್ದೇಶನದಲ್ಲಿ ತಿಳಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆಗೆ ಇದರಿಂದ ತೊಡಕಾಗಿದೆ. ಇದರಿಂದ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: Imran Khan: ಮತ್ತೆ ಭಾರತವನ್ನು ಹೊಗಳಿದ ಇಮ್ರಾನ್ ಖಾನ್; ಪಾಕಿಸ್ತಾನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆಗೆ ಆಕ್ರೋಶ

ಶನಿವಾರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಇಮ್ರಾನ್ ಖಾನ್, ಕಳೆದ ವಾರ ದೇಶದ್ರೋಹದ ಆರೋಪದ ಮೇಲೆ ಬಂಧಿತನಾಗಿದ್ದ ತನ್ನ ಸಹಾಯಕ ಶಹಬಾಜ್ ಗಿಲ್‌ಗೆ ನೀಡಿದ ಚಿಕಿತ್ಸೆಗೆ ಸಂಬಂಧಿಸಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು, ಮಹಿಳಾ ಮ್ಯಾಜಿಸ್ಟ್ರೇಟ್, ಪಾಕಿಸ್ತಾನದ ಚುನಾವಣಾ ಆಯೋಗ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: Imran Khan: “ಪಾಕಿಸ್ತಾನದ ಮೇಲೆ ಅಣು ಬಾಂಬ್ ಹಾಕುವುದು ಉತ್ತಮ” ಎಂದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಭಾಷಣವು ಸೇನೆ ಮತ್ತು ಇತರ ಸಂಸ್ಥೆಗಳನ್ನು ಗುರಿಯಾಗಿಸುವ ಪ್ರವೃತ್ತಿಯ ಮುಂದುವರಿಕೆಯಾಗಿದೆ ಎಂದು ಪಾಕಿಸ್ತಾನದ ಆಂತರಿಕ ಸಚಿವ ರಾಣಾ ಸನಾವುಲ್ಲಾ ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ