AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಮಾಲ್ಡೀವ್ಸ್​ನಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ ಗೊಟಬಯ ರಾಜಪಕ್ಸ

ಮಾಲ್ಡೀವ್ಸ್ ನಿಂದ ಸಿಂಗಾಪುರ್ ಗೆ ಪ್ರಯಾಣ ಬೆಳೆಸಿದ ಗೊಟಬಯ ರಾಜಪಕ್ಸ. ಖಾಸಗಿ ಜೆಟ್ ನಲ್ಲಿ ಸಿಂಗಾಪುರ್ ಗೆ ಪ್ರಯಾಣ. ಶ್ರೀಲಂಕಾದಿಂದ ಮಾಲ್ಡೀವ್ಸ್ ಗೆ ಈ ಮೊದಲು ಪರಾರಿಯಾಗಿದ್ದ ಗೊಟಬಯ ರಾಜಪಕ್ಸ. 

Big News: ಮಾಲ್ಡೀವ್ಸ್​ನಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ ಗೊಟಬಯ ರಾಜಪಕ್ಸ
Gotabaya Rajapaksa
TV9 Web
| Edited By: |

Updated on:Jul 14, 2022 | 1:27 PM

Share

ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ (Gotabaya Rajapaksa) ಅವರು ಗುರುವಾರ ಮಾಲ್ಡೀವ್ಸ್​​ನಿಂದ (Maldives) ಸಿಂಗಾಪುರಕ್ಕೆ (Singapore) ಪ್ರಯಾಣಿಸಿದ್ದಾರೆ. ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಹಿನ್ನಲೆಯಲ್ಲಿ ಜನಾಕ್ರೋಶ ಸಿಡಿದೆದ್ದಾಗ ಗೊಟಬಯ ಶ್ರೀಲಂಕಾದಿಂದ ಪಲಾಯನ ಮಾಡಿ ಮಾಲ್ಡೀವ್ಸ್ ನಲ್ಲಿ ನೆಲೆಸಿದ್ದರು. ರಾಜಪಕ್ಸ ಅವರು ಮಾಲ್ಡೀವ್ಸ್ ನಿಂದ ಸೌದಿ ಏರ್ ಲೈನ್ ವಿಮಾನ ಎಸ್ ವಿ788ನಲ್ಲಿ ಸಿಂಗಾಪುರಕ್ಕೆ ಹೋಗಿದ್ದಾರೆ. 73ರ ಹರೆಯದ ಗೊಟಬಯ ದೇಶದಿಂದ ಪಲಾಯನ ಮಾಡಿದ ಮೇಲೆ ಬುಧವಾರದಂದು ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಸದ್ಯ ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದು ಮುಂದಿನ ಅಧ್ಯಕ್ಷರ ಆಯ್ಕೆ ವರೆಗೆ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಗೊಟಬಯ ಅವರು ಬುಧವಾರ ಸೌದಿ ಏರ್ ಲೈನ್ಸ್ ವಿಮಾನ ಹತ್ತಿದ್ದು, ಅವರು ಸಿಂಗಾಪುರಕ್ಕೆ ಹೋಗಲಿದ್ದಾರೆ. ಅಲ್ಲಿಂದ ಅವರು ಜೆದ್ದಾ ನಂತರ  ಸೌದಿ ಅರೇಬಿಯಾಕ್ಕೆ ಹೋಗಲಿದ್ದಾರೆ ಎಂದು ಹೆಸರು ಹೇಳಲು ಬಯಸದ  ಮಾಲ್ಡೀವ್ಸ್ ಸರ್ಕಾರದ ಅಧಿಕಾರಿಗಳು ಹೇಳಿದ್ದಾರೆ.

ಕೊಲಂಬೊ ಜಿಲ್ಲೆಯೊಳಗೆ ಇಂದು ಮಧ್ಯಾಹ್ನದಿಂದ ನಾಳೆ ಬೆಳಗ್ಗೆ 5 ಗಂಟೆ ವರೆಗೆ ಕರ್ಫ್ಯೂ ವಿಧಿಸಲಾಗಿದೆ ಎಂದು ಸರ್ಕಾರದ ಮಾಹಿತಿ ಇಲಾಖೆ ಹೇಳಿದೆ.

ರಾಜೀನಾಮೆ ನೀಡಿ ಇಲ್ಲವೇ ನಾವು ಬೇರೆ ಆಯ್ಕೆ ಕಂಡುಕೊಳ್ಳುತ್ತೇವೆ: ಸ್ಪೀಕರ್

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ

ಅಧ್ಯಕ್ಷ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡುವುದಾಗಿ ಹೇಳಿದ್ದ ಗೊಟಬಯ ರಾಜಪಕ್ಸ ಇನ್ನೂ ರಾಜೀನಾಮೆ ನೀಡಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಶ್ರೀಲಂಕಾ ಸ್ಪೀಕರ್ ಮಹಿಂದಾ ಯಾಪ ಅಬೇವರ್ಧೆನಾ ಆದಷ್ಟು ಬೇಗ ರಾಜೀನಾಮೆ ಸಲ್ಲಿಸಿ ಇಲ್ಲವೇ ನಾವು ನಿಮ್ಮನ್ನು ಹುದ್ದೆಯಿಂದ ಕಿತ್ತು ಹಾಕುವ ಆಯ್ಕೆ ಪರಿಗಣಿಸುತ್ತೇವೆ ಎಂದು ಹೇಳಿರುವುದಾಗಿ ನ್ಯೂಸ್ ಫಸ್ಟ್ ಲಂಕಾ ವರದಿ ಮಾಡಿದೆ.

ಗಲ್ಲೆಯಿಂದ ಚದುರಿದ ಪ್ರತಿಭಟನಾಕಾರರು

ಶ್ರೀಲಂಕಾದ ಗಲ್ಲೆಯಲ್ಲಿರುವ ಪ್ರತಿಭಟನಾಕಾರರು  ಪ್ರೆಸಿಡೆನ್ಶಿಯಲ್ ಸೆಕ್ರೆಟರಿಯೇಟ್ , ಅಧ್ಯಕ್ಷರ ನಿವಾಸ ಮತ್ತು ಪ್ರಧಾನಿಯವರ ನಿವಾಸದಿಂದ ಹೊರಹೋಗಲು ನಿರ್ಧರಿಸಿದ್ದಾರೆ

Published On - 12:38 pm, Thu, 14 July 22

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ