AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಮಾಲ್ಡೀವ್ಸ್​ನಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ ಗೊಟಬಯ ರಾಜಪಕ್ಸ

ಮಾಲ್ಡೀವ್ಸ್ ನಿಂದ ಸಿಂಗಾಪುರ್ ಗೆ ಪ್ರಯಾಣ ಬೆಳೆಸಿದ ಗೊಟಬಯ ರಾಜಪಕ್ಸ. ಖಾಸಗಿ ಜೆಟ್ ನಲ್ಲಿ ಸಿಂಗಾಪುರ್ ಗೆ ಪ್ರಯಾಣ. ಶ್ರೀಲಂಕಾದಿಂದ ಮಾಲ್ಡೀವ್ಸ್ ಗೆ ಈ ಮೊದಲು ಪರಾರಿಯಾಗಿದ್ದ ಗೊಟಬಯ ರಾಜಪಕ್ಸ. 

Big News: ಮಾಲ್ಡೀವ್ಸ್​ನಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ ಗೊಟಬಯ ರಾಜಪಕ್ಸ
Gotabaya Rajapaksa
TV9 Web
| Edited By: |

Updated on:Jul 14, 2022 | 1:27 PM

Share

ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ (Gotabaya Rajapaksa) ಅವರು ಗುರುವಾರ ಮಾಲ್ಡೀವ್ಸ್​​ನಿಂದ (Maldives) ಸಿಂಗಾಪುರಕ್ಕೆ (Singapore) ಪ್ರಯಾಣಿಸಿದ್ದಾರೆ. ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಹಿನ್ನಲೆಯಲ್ಲಿ ಜನಾಕ್ರೋಶ ಸಿಡಿದೆದ್ದಾಗ ಗೊಟಬಯ ಶ್ರೀಲಂಕಾದಿಂದ ಪಲಾಯನ ಮಾಡಿ ಮಾಲ್ಡೀವ್ಸ್ ನಲ್ಲಿ ನೆಲೆಸಿದ್ದರು. ರಾಜಪಕ್ಸ ಅವರು ಮಾಲ್ಡೀವ್ಸ್ ನಿಂದ ಸೌದಿ ಏರ್ ಲೈನ್ ವಿಮಾನ ಎಸ್ ವಿ788ನಲ್ಲಿ ಸಿಂಗಾಪುರಕ್ಕೆ ಹೋಗಿದ್ದಾರೆ. 73ರ ಹರೆಯದ ಗೊಟಬಯ ದೇಶದಿಂದ ಪಲಾಯನ ಮಾಡಿದ ಮೇಲೆ ಬುಧವಾರದಂದು ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಸದ್ಯ ಶ್ರೀಲಂಕಾದ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದು ಮುಂದಿನ ಅಧ್ಯಕ್ಷರ ಆಯ್ಕೆ ವರೆಗೆ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಗೊಟಬಯ ಅವರು ಬುಧವಾರ ಸೌದಿ ಏರ್ ಲೈನ್ಸ್ ವಿಮಾನ ಹತ್ತಿದ್ದು, ಅವರು ಸಿಂಗಾಪುರಕ್ಕೆ ಹೋಗಲಿದ್ದಾರೆ. ಅಲ್ಲಿಂದ ಅವರು ಜೆದ್ದಾ ನಂತರ  ಸೌದಿ ಅರೇಬಿಯಾಕ್ಕೆ ಹೋಗಲಿದ್ದಾರೆ ಎಂದು ಹೆಸರು ಹೇಳಲು ಬಯಸದ  ಮಾಲ್ಡೀವ್ಸ್ ಸರ್ಕಾರದ ಅಧಿಕಾರಿಗಳು ಹೇಳಿದ್ದಾರೆ.

ಕೊಲಂಬೊ ಜಿಲ್ಲೆಯೊಳಗೆ ಇಂದು ಮಧ್ಯಾಹ್ನದಿಂದ ನಾಳೆ ಬೆಳಗ್ಗೆ 5 ಗಂಟೆ ವರೆಗೆ ಕರ್ಫ್ಯೂ ವಿಧಿಸಲಾಗಿದೆ ಎಂದು ಸರ್ಕಾರದ ಮಾಹಿತಿ ಇಲಾಖೆ ಹೇಳಿದೆ.

ರಾಜೀನಾಮೆ ನೀಡಿ ಇಲ್ಲವೇ ನಾವು ಬೇರೆ ಆಯ್ಕೆ ಕಂಡುಕೊಳ್ಳುತ್ತೇವೆ: ಸ್ಪೀಕರ್

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ

ಅಧ್ಯಕ್ಷ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡುವುದಾಗಿ ಹೇಳಿದ್ದ ಗೊಟಬಯ ರಾಜಪಕ್ಸ ಇನ್ನೂ ರಾಜೀನಾಮೆ ನೀಡಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಶ್ರೀಲಂಕಾ ಸ್ಪೀಕರ್ ಮಹಿಂದಾ ಯಾಪ ಅಬೇವರ್ಧೆನಾ ಆದಷ್ಟು ಬೇಗ ರಾಜೀನಾಮೆ ಸಲ್ಲಿಸಿ ಇಲ್ಲವೇ ನಾವು ನಿಮ್ಮನ್ನು ಹುದ್ದೆಯಿಂದ ಕಿತ್ತು ಹಾಕುವ ಆಯ್ಕೆ ಪರಿಗಣಿಸುತ್ತೇವೆ ಎಂದು ಹೇಳಿರುವುದಾಗಿ ನ್ಯೂಸ್ ಫಸ್ಟ್ ಲಂಕಾ ವರದಿ ಮಾಡಿದೆ.

ಗಲ್ಲೆಯಿಂದ ಚದುರಿದ ಪ್ರತಿಭಟನಾಕಾರರು

ಶ್ರೀಲಂಕಾದ ಗಲ್ಲೆಯಲ್ಲಿರುವ ಪ್ರತಿಭಟನಾಕಾರರು  ಪ್ರೆಸಿಡೆನ್ಶಿಯಲ್ ಸೆಕ್ರೆಟರಿಯೇಟ್ , ಅಧ್ಯಕ್ಷರ ನಿವಾಸ ಮತ್ತು ಪ್ರಧಾನಿಯವರ ನಿವಾಸದಿಂದ ಹೊರಹೋಗಲು ನಿರ್ಧರಿಸಿದ್ದಾರೆ

Published On - 12:38 pm, Thu, 14 July 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ