AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಲೀಸೆಸ್ಟರ್‌ನಲ್ಲಿರುವ ಹಿಂದೂ ಧಾರ್ಮಿಕ ಸ್ಥಳಗಳ ಧ್ವಂಸ, ಭಾರತ ಖಂಡನೆ

ಲೀಸೆಸ್ಟರ್ ಕೋಮು ಹಿಂಸಾಚಾರಸದಲ್ಲಿ ಭಾರತವು ಭಾರತೀಯ ಸಮುದಾಯದ ವಿರುದ್ಧ ಹಿಂಸಾಚಾರವನ್ನು ಖಂಡಿಸುತ್ತದೆ, ಯುಕೆ ಲೀಸೆಸ್ಟರ್‌ನಲ್ಲಿ ಹಿಂದೂ ಧಾರ್ಮಿಕ ಆವರಣಗಳನ್ನು ಧ್ವಂಸಗೊಳಿಸಿದ್ದಾರೆ.

BIG NEWS: ಲೀಸೆಸ್ಟರ್‌ನಲ್ಲಿರುವ ಹಿಂದೂ ಧಾರ್ಮಿಕ ಸ್ಥಳಗಳ ಧ್ವಂಸ, ಭಾರತ ಖಂಡನೆ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 19, 2022 | 5:50 PM

ಲೀಸೆಸ್ಟರ್ ಕೋಮು ಹಿಂಸಾಚಾರದಲ್ಲಿ ಭಾರತವು ಭಾರತೀಯ ಸಮುದಾಯದ ವಿರುದ್ಧ ಹಿಂಸಾಚಾರವನ್ನು ಖಂಡಿಸುತ್ತದೆ, ಯುಕೆ ಲೀಸೆಸ್ಟರ್‌ನಲ್ಲಿ ಹಿಂದೂ ಧಾರ್ಮಿಕ ಸ್ಥಳಗಳನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಅಲ್ಲಿಯ ಸರ್ಕಾರಕ್ಕೆ ಹೇಳಲಾಗಿದೆ ಎಂದು ಭಾರತ ತಿಳಿಸಿದೆ.

ಶನಿವಾರ ಯುನೈಟೆಡ್ ಕಿಂಗ್ಡಂನ ಲೀಸೆಸ್ಟರ್‌ನಲ್ಲಿ (Leicester )ಮುಸ್ಲಿಂ ಮತ್ತು ಹಿಂದೂ ಸಮುದಾಯಗಳ ನಡುವೆ ಗಲಭೆಯುಂಟಾಗಿದ್ದು ಪೊಲೀಸರು ಮತ್ತು ಸಮುದಾಯದ ಮುಖಂಡರು ಶಾಂತವಾಗಿರಲು ಜನತೆಗೆ ಕರೆ ನೀಡಿದ್ದಾರೆ. ಎರಡೂ ಸಮುದಾಯದ ಗುಂಪುಗಳ ನಡುವಿನ ಘರ್ಷಣೆ ತಪ್ಪಿಸಲು ಪೊಲೀಸರು ಪ್ರಯತ್ನಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಏಕಾಏಕಿ ಪ್ರತಿಭಟನೆ ನಡೆದಿದ್ದು ಉದ್ವಿಗ್ನ ಪರಿಸ್ಥಿತಿಯುಂಟಾಗಿದೆ ಎಂದು ಪೊಲೀಸರು ಹೇಳಿದರು. ಆಗಸ್ಟ್ 28 ರಂದು ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ಹಿಂಸಾಚಾರ ಸೇರಿದಂತೆ ಹಲವಾರು ಘಟನೆಗಳು ಇತ್ತೀಚೆಗೆ ವರದಿ ಆಗಿತ್ತು. ನಾವು ಬೀದಿಗಳಲ್ಲಿ ನೋಡಿರುವುದು ತುಂಬಾ ಆತಂಕಕಾರಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಹೊತ್ತಲ್ಲಿ ಸಮುದಾಯಗಳ ನಡುವೆ ವಾಗ್ವಾದ ಆಗುತ್ತದೆ. ಈ ಪಂದ್ಯಗಳಿಗೆ ಜನ ಸೇರುತ್ತಾರೆ, ಆದರೆ ಈವರೆಗೆ ಈ ರೀತಿ ಇಷ್ಟು ಕೆಟ್ಟದಾಗಿ ಏನೂ ಆಗಿರಲಿಲ್ಲ ಎಂದು ಲೀಸೆಸ್ಟರ್ ಮೂಲದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಸುಲೇಮಾನ್ ನಗ್ಡಿ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ. ನಮಗೆ ಶಾಂತಿ ಬೇಕು. ಈ ಉದ್ವಿಗ್ನತೆ ನಿಲ್ಲಬೇಕು. ಕೆಲವು ಅತೃಪ್ತ ಯುವಕರು ವಿನಾಶವನ್ನು ಉಂಟು ಮಾಡುತ್ತಿದ್ದಾರೆ. ಇದು ಕೊನೆಗೊಳ್ಳಬೇಕು ಎಂಬ ಸಂದೇಶವನ್ನು ನಾವು ನೀಡಬೇಕು ಪೋಷಕರು ವರ ಹಿರಿಯರು ಯುವ ಜನಾಂಗದೊಂದಿಗೆ ಮಾತನಾಡುವ ಮೂಲಕ ಇದನ್ನು ಮಾಡಲು ಪ್ರಯತ್ನಿಸಬೇಕು ಎಂದಿದ್ದಾರೆ.

ಲೀಸೆಸ್ಟರ್‌ನಾದ್ಯಂತ ಹಿಂದೂ ಮತ್ತು ಜೈನ ದೇವಾಲಯಗಳನ್ನು ಪ್ರತಿನಿಧಿಸುವ ಸಂಜೀವ್ ಪಟೇಲ್, ಶನಿವಾರ ರಾತ್ರಿ ಸಂಭವಿಸಿದ ಘಟನೆ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ನಾವು ನಗರದಲ್ಲಿ ಹಲವು ದಶಕಗಳಿಂದ ಸಾಮರಸ್ಯದಿಂದ ಬದುಕಿದ್ದೇವೆ. ಆದರೆ ಕಳೆದ ಕೆಲವು ವಾರಗಳಲ್ಲಿ ಜನರುಯಾವುದರ ಬಗ್ಗೆ ಅತೃಪ್ತಿ ಹೊಂದಿದ್ದಾರೆ ಎಂಬುದರ ಬಗ್ಗೆ ನಾವು ಚರ್ಚಿಸಬೇಕಿದೆ ಎಂದಿದ್ದಾರೆ.

ಇದೀಗ ಲೀಸೆಸ್ಟರ್​ ಕೋಮು ಹಿಂಸಾಚಾರ ಭಾರತವು ಭಾರತೀಯ ಸಮುದಾಯದ ವಿರುದ್ಧ ಹಿಂಸಾಚಾರವನ್ನು ಖಂಡಿಸುತ್ತದೆ, ಯುಕೆ ಲೀಸೆಸ್ಟರ್‌ನಲ್ಲಿ ಹಿಂದೂ ಧಾರ್ಮಿಕ ಆವರಣಗಳನ್ನು ಧ್ವಂಸಗೊಳಿಸಿದ್ದಾರೆ. ಈ ವಿಚಾರವಾಗಿ ಭಾರತವು ವ್ಯಾಪಕವಾಗಿ ಖಂಡಿಸಿದೆ.

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್