Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಗಾಪೂರದಲ್ಲಿ 25 ವರ್ಷದಲ್ಲೇ ಅತಿ ದೊಡ್ಡ ಪ್ರಮಾಣದ ಮಾದಕವಸ್ತುಗಳು ವಶಕ್ಕೆ

ಸಿಂಗಾಪೂರದಲ್ಲಿ 25 ವರ್ಷದಲ್ಲೇ ಅತಿ ದೊಡ್ಡ ಪ್ರಮಾಣದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಆ ದೇಶದಲ್ಲಿ 500 ಗ್ರಾಂ ಮತ್ತು ಅದಕ್ಕಿಂತ ಮೇಲ್ಪಟ್ಟ ಪ್ರಮಾಣದ ಗಾಂಜಾ ಸಾಗಣೆ ಮಾಡಿದರೆ ಗರಿಷ್ಠ ಪ್ರಮಾಣದ ಶಿಕ್ಷೆಯಾಗಿ ಮರಣದಂಡನೆಯನ್ನೂ ಸಹ ವಿಧಿಸಬಹುದು.

ಸಿಂಗಾಪೂರದಲ್ಲಿ 25 ವರ್ಷದಲ್ಲೇ ಅತಿ ದೊಡ್ಡ ಪ್ರಮಾಣದ ಮಾದಕವಸ್ತುಗಳು ವಶಕ್ಕೆ
ಗಾಂಜಾ (ಸಂಗ್ರಹ ಚಿತ್ರ)
Follow us
Srinivas Mata
|

Updated on: Apr 19, 2021 | 3:34 PM

ಸಿಂಗಾಪೂರದ ಮಾದಕವಸ್ತು ವಿರೋಧಿ ದಳವು ಸೋಮವಾರದಂದು ನೀಡಿದ ಹೇಳಿಕೆ ಪ್ರಕಾರ, ಕಳೆದ ವಾರ ಭಾರೀ ಕಾರ್ಯಾಚರಣೆಯನ್ನು ನಡೆಸಿ, ಕಳೆದ 25 ವರ್ಷದಲ್ಲೇ ಅತಿ ದೊಡ್ಡ ಪ್ರಮಾಣದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಂದಹಾಗೆ ಮಾದಕವಸ್ತು ಕಳ್ಳಸಾಗಣೆಗೆ ಸಂಬಂಧಿಸಿದಂತೆ ಸಿಂಗಾಪೂರದಲ್ಲಿ ಕಠಿಣ ಕಾನೂನುಗಳು ಇದ್ದು, ಗರಿಷ್ಠ ಪ್ರಮಾಣ ಅಂದರೆ, ಮರಣದಂಡನೆ ಶಿಕ್ಷೆಯನ್ನೂ ವಿಧಿಸಬಹುದಾಗಿದೆ. ಕೇಂದ್ರೀಯ ಮಾದಕವಸ್ತು ದಳವು 23.7 ಕೇಜಿ ಗಾಂಜಾ ಮತ್ತು 16.5 ಕೇಜಿ ಹೆರಾಯಿನ್ ವಶಪಡಿಸಿಕೊಂಡಿದೆ. ಅದರ ಜತೆಗೆ ಕ್ರಿಸ್ಟಲ್ ಮೆಟಂಫೆಟಮೈನ್ ಮತ್ತು ಎಕಸ್ಟಸಿ ಮಾತ್ರೆಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

1996ರ ನಂತರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಗಾಂಜಾ ಮತ್ತು 2001ರ ನಂತರ ಈ ಪ್ರಮಾಣದ ಹೆರಾಯಿನ್ ವಶಕ್ಕೆ ಪಡೆದಿರಲಿಲ್ಲ. ತನಿಖಾ ದಳದ ಮಾಹಿತಿಯ ಪ್ರಕಾರ, ಈ ಡ್ರಗ್ಸ್​ಗಳ ಮೌಲ್ಯ 17 ಲಕ್ಷ ಅಮೆರಿಕನ್ ಡಾಲರ್​ಗೂ ಹೆಚ್ಚಾಗುತ್ತದೆ. ಭಾರತದ ರೂಪಾಯಿ ಲೆಕ್ಕದಲ್ಲಿ ಹೇಳಬೇಕೆಂದರೆ, 12 ಕೋಟಿಗೂ ಹೆಚ್ಚಾಗುತ್ತದೆ. ಮಾದಕವಸ್ತು ಸಾಗಣೆಯ ಶಂಕಿತ ಆರೋಪಿಯಾದ 22 ವರ್ಷದ ಮಲೇಷ್ಯನ್ ಪ್ರಜೆಯನ್ನು ಈ ಪ್ರಕರಣದ ಸಂಬಂಧ ಕಳೆದ ಶುಕ್ರವಾರದಂದು ಅಧಿಕಾರಿಗಳು ಬಂಧಿಸಿದ್ದಾರೆ.

ಶ್ರೀಮಂತ ನಗರವಾದ ಸಿಂಗಾಪೂರದಲ್ಲಿ ಮಾದಕವಸ್ತು ಪದಾರ್ಥಗಳ ಸಾಗಣೆ ಅಪರಾಧಕ್ಕೆ ಗಂಭೀರವಾದ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಸುದೀರ್ಘಾವಧಿ ಜೈಲು ಶಿಕ್ಷೆಯೂ ಸೇರಿ, ಕೆಲವು ಪ್ರಕರಣದಲ್ಲಿ ಮರಣದಂಡನೆ ವಿಧಿಸಿದಂತೆ ಉದಾಹರಣೆಗಳು ಸಹ ಸಿಗುತ್ತವೆ. ಕಳೆದ ಒಂದು ದಶಕದಲ್ಲಿ ಹತ್ತಾರು ವಿದೇಶೀಯರೂ ಸೇರಿದಂತೆ ನೂರಾರು ಮಂದಿಯನ್ನು ಮಾದಕವಸ್ತುಗಳ ಸಾಗಣೆ ಆರೋಪದಲ್ಲೇ ನೇಣಿಗೆ ಏರಿಸಲಾಗಿದೆ. 500 ಗ್ರಾಮ್​ಗಿಂತ ಹೆಚ್ಚಿನ ಗಾಂಜಾವನ್ನು ಸಾಗಿಸಿದರೆ ಸಿಂಗಾಪೂರದಲ್ಲಿ ಮರಣದಂಡನೆ ವಿಧಿಸಲಾಗುತ್ತದೆ.

ಇದನ್ನೂ ಓದಿ: 130 ಕೋಟಿ ವಂಚಿಸಿದ್ದ ವಜ್ರದ ಸ್ಮಗ್ಲರ್ ಮುಂಬೈ ಪೊಲೀಸರ ಕಣ್ತಪ್ಪಿಸಿದ್ದು ಅದೇಷ್ಟು ವರ್ಷ ಗೊತ್ತಾ?

(Singapore said, it seized biggest cannabis since 25 years)

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್