AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಹೀರಾತು ಫಲಕ ಅಳವಡಿಸಿ ಭಾರತ, ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿದ ಕೆನಡಾ

ಈಗಾಗಲೇ 50 ದೇಶಗಳಿಗೆ ಕೊರೊನಾ ಲಸಿಕೆ ನೀಡಿರುವುದಾಗಿ ಇತ್ತೀಚಿಗೆ ನಡೆದಿದ್ದ ವರ್ಚುವಲ್ ಸಮ್ಮಿಟ್​ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದರು. ಅಷ್ಟೇ ಅಲ್ಲದೇ ಇನ್ನೂ ಹೆಚ್ಚಿನ ದೇಶಗಳಿಗೆ ಮೇಡ್ ಇನ್ ಇಂಡಿಯಾ ಕೊರೊನಾ ಲಸಿಕೆಯನ್ನು ಕಳುಹಿಸಲು ಚಿಂತನೆ ನಡೆಸಿರುವುದಾಗಿ ಸಹ ಪ್ರಧಾನಿ ತಿಳಿಸಿದ್ದರು.

ಜಾಹೀರಾತು ಫಲಕ ಅಳವಡಿಸಿ ಭಾರತ, ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿದ ಕೆನಡಾ
ಭಾರತಕ್ಕೆ ಧನ್ಯವಾದ ಅರ್ಪಿಸಿದ ಕೆನಡಾ
Follow us
guruganesh bhat
|

Updated on:Mar 11, 2021 | 12:27 PM

ಗ್ರೇಟರ್ ಟೊರಾಂಟೋ: ಭಾರತದಲ್ಲಿ ತಯಾರಿಸಿದ ಕೊರೊನಾ ಲಸಿಕೆಯನ್ನು ಕೆನಡಾದ ವಿನಂತಿ ಮೇರೆಗೆ ಇತ್ತೀಚಿಗೆ ಪೂರೈಕೆ ಮಾಡಲಾಗಿತ್ತು. ಇದರಿಂದ ಖುಷಿಗೊಂಡಿರುವ ಕೆನಡಾ ಆಡಳಿತ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದೆ. ಇಷ್ಟೇ ಅಲ್ಲದೇ ಧನ್ಯವಾದ ತಿಳಿಸಲು ಗ್ರೇಟರ್ ಟೊರಾಂಟೊ ನಗರದ ಹೆದ್ದಾರಿಗಳಲ್ಲಿ ಬೃಹತ್ ಜಾಹೀರಾತು ಫಲಕಗಳನ್ನು ಅಳವಡಿಸಿ ತನ್ನ ಕೃತಜ್ಞತೆಗಳು ಅರ್ಪಿಸಿದೆ. 

ಹಿಂದಿನ ವಾರ ಭಾರತದಲ್ಲೇ ತಯಾರಿಸಿದ ಕೋವಿಶೀಲ್ಡ್ ಕೊರೊನಾ ಲಸಿಕೆಯ 5ಲಕ್ಷ ಘಟಕಗಳನ್ನು ಕೆನಡಾಕ್ಕೆ ಕಳುಹಿಸಿಕೊಟ್ಟಿತ್ತು ಭಾರತ. ಅಲ್ಲದೇ ಈಗಾಗಲೇ 50 ದೇಶಗಳಿಗೆ ಕೊರೊನಾ ಲಸಿಕೆ ನೀಡಿರುವುದಾಗಿ ಇತ್ತೀಚಿಗೆ ನಡೆದಿದ್ದ ವರ್ಚುವಲ್ ಸಮ್ಮೇಳನವೊದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದರು. ಅಷ್ಟೇ ಅಲ್ಲದೇ ಇನ್ನೂ ಹೆಚ್ಚಿನ ದೇಶಗಳಿಗೆ ಮೇಡ್ ಇನ್ ಇಂಡಿಯಾ ಕೊರೊನಾ ಲಸಿಕೆಯನ್ನು ಕಳುಹಿಸಲು ಚಿಂತನೆ ನಡೆಸಿರುವುದಾಗಿ ಸಹ ಪ್ರಧಾನಿ ತಿಳಿಸಿದ್ದರು. ಭಾರತ ಕೈಗೊಳ್ಳುತ್ತಿರುವ ಈ ಮಾನವೀಯ ಕ್ರಮಕ್ಕೆ ಕೊರೊನಾ ಲಸಿಕೆ ಪಡೆದ ದೇಶಗಳಷ್ಟೇ ಅಲ್ಲದೇ, ವಿಶ್ವ ಆರೋಗ್ಯ ಸಂಸ್ಥೆ ಸಹ ಶ್ಲಾಘನೆ ವ್ಯಕ್ತಪಡಿಸಿತ್ತು.

ಪಾಕಿಸ್ತಾನಕ್ಕೂ ಲಸಿಕೆ ನೀಡಿದೆ ಭಾರತ

ಭಾರತದಲ್ಲಿ ತಯಾರಿಸಿದ ಕೊರೊನಾ ಲಸಿಕೆಗಳು ಈಗಾಗಲೇ ಜಾಗತಿಕ ಮಟ್ಟದಲ್ಲಿ ಬಹುಬೇಡಿಕೆ ಗಿಟ್ಟಿಸಿಕೊಂಡಿವೆ. ಬೇರೆ ಬೇರೆ ದೇಶಗಳಿಗೆ ಕೊವಿಡ್​ 19 ಲಸಿಕೆ ವಿತರಿಸಿದ್ದ ಭಾರತ ತನ್ನ ನೆರೆ ರಾಷ್ಟ್ರ ಪಾಕಿಸ್ತಾನಕ್ಕೂ ಲಸಿಕೆ ಪೂರೈಸಿತ್ತು. ಸೆರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಕೊವಿಶೀಲ್ಡ್ ಲಸಿಕೆಯನ್ನು ಪೂರೈಸಿರುವ ಭಾರತ, ಗ್ಲೋಬಲ್ ಅಲೆಯನ್ಸ್ ಫಾರ್ ವ್ಯಾಕ್ಸಿನ್ ಇಮ್ಯೂನೈಜೇಶನ್ (GAVI) ಅಡಿ ಲಸಿಕೆ ನೀಡಿತ್ತು

ಈ ಮೂಲಕ ಪಾಕಿಸ್ತಾನಕ್ಕೆ ಮೇಡ್ ಇನ್ ಇಂಡಿಯಾ ಲಸಿಕೆ ತಲುಪಿದ್ದು, ಅಲ್ಲಿನ ಪ್ರಜೆಗಳಿಗೆ ಕೊರೊನಾ ಲಸಿಕೆ ವಿತರಿಸುವ ಕಾರ್ಯವನ್ನು ಪಾಕಿಸ್ತಾನ ಶೀಘ್ರದಲ್ಲೇ ಆರಂಭಿಸುವ ಸಾಧ್ಯತೆ ಇದೆ. ಭಾರತದಲ್ಲಿ ಈಗಾಗಲೇ ಮತ್ತೊಂದು ಹಂತದ ಲಸಿಕೆ ಪೂರೈಕೆ ಆರಂಭಿಸಿರುವ ಭಾರತ, 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು 45 ವರ್ಷ ಮೇಲ್ಪಟ್ಟು ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲು ಸಜ್ಜಾಗಿದೆ. ಇದೆಲ್ಲದರ ಜೊತೆಜೊತೆಗೆ ಹಲವು ದೇಶಗಳಿಗೆ ಲಸಿಕೆ ಪೂರೈಸುತ್ತಿರುವುದರಿಂದ ಭಾರತದ ಕಾರ್ಯಕ್ಕೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

ಮೈಕ್ರೋಸಾಫ್ಟ್ ಕಂಪೆನಿಯ ಮಾಲೀಕ ಬಿಲ್ ಗೇಟ್ಸ್​ ಸಹ ಭಾರತದ ಕೊರೊನಾ ಲಸಿಕೆ ದಾನದ ಕ್ರಮಗಳಿಗೆ ಈಗಾಗಲೇ ಅಪಾರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಭಾರತ ಮಾನವೀಯ ಕ್ರಮಗಳ ಮೂಲಕ ವಿಶ್ವ ಸೋದರತ್ವವನ್ನು ಎತ್ತಿಹಿಡಿಯುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈಗಾಗಲೇ 51 ದೇಶಗಳಿಗೆ ಭಾರತ ದೇಶದಲ್ಲಿ ತಯಾರಾದ ಕೊರೊನಾ ಲಸಿಕೆ ಒದಗಿಸಿದೆ. ಇದು ವ್ಯಾಕ್ಸಿನ್ ಮೈತ್ರಿಯಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಕೊರೊನಾದಿಂದ ಸಾವು ಸಂಭವಿಸಿ ಭರ್ತಿ ಒಂದು ವರ್ಷ, ಸಾವಿಗೆ ನಾಂದಿ ಹಾಡಿದ್ದೇ ಕರ್ನಾಟಕ

ಬಾಲಿವುಡ್ ನಟ ರಣಬೀರ್ ಕಪೂರ್​ಗೆ ಕೊರೊನಾ ಪಾಸಿಟಿವ್; ಹೋಮ್ ಕ್ವಾರಂಟೈನ್​ನಲ್ಲಿ ಇದ್ದಾರೆ ಎಂದ ನೀತು ಕಪೂರ್

Published On - 12:22 pm, Thu, 11 March 21

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ