AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ: ಕುವೈತ್​​ನ ಸೂಪರ್ ಮಾರ್ಕೆಟ್​​ಗಳಲ್ಲಿ ಭಾರತೀಯ ಉತ್ಪನ್ನಗಳಿಗೆ ಬಹಿಷ್ಕಾರ

ಕುವೈತ್ ಸಿಟಿಯ ಹೊರಗಿರುವ ಸೂಪರ್ ಮಾರ್ಕೆಟ್‌ನಲ್ಲಿ ಅಕ್ಕಿಯ ಚೀಲಗಳು, ಮಸಾಲೆಗಳು ಮತ್ತು ಮೆಣಸಿನಕಾಯಿಗಳ ಕಪಾಟುಗಳನ್ನು ಪ್ಲಾಸ್ಟಿಕ್ ಹಾಳೆಗಳಿಂದ ಮುಚ್ಚಲಾಗಿತ್ತು. ಅರೇಬಿಕ್ ಭಾಷೆಯಲ್ಲಿ "ನಾವು ಭಾರತೀಯ ಉತ್ಪನ್ನಗಳನ್ನು ತೆಗೆದುಹಾಕಿದ್ದೇವೆ" ಎಂದು ಬರೆಯಲಾಗಿದೆ.

ಪ್ರವಾದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿವಾದ: ಕುವೈತ್​​ನ ಸೂಪರ್ ಮಾರ್ಕೆಟ್​​ಗಳಲ್ಲಿ ಭಾರತೀಯ ಉತ್ಪನ್ನಗಳಿಗೆ ಬಹಿಷ್ಕಾರ
ಕುವೈತ್ ಸೂಪರ್ ಮಾರ್ಕೆಟ್​​ನಲ್ಲಿ ಭಾರತದ ಉತ್ಪನ್ನಗಳ ಮೇಲೆ ಪ್ಲಾಸ್ಟಿಕ್ ಕವರ್ ಹೊದಿಸಿರುವುದುImage Credit source: AFP
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 06, 2022 | 8:49 PM

ಕುವೈತ್ ಸಿಟಿ: ಪ್ರವಾದಿ ಮೊಹಮ್ಮದ್ (Prophet Muhammad) ಕುರಿತು ಬಿಜೆಪಿ (BJP) ನಾಯಕರು ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಸೋಮವಾರ ಆಕ್ರೋಶ ಹೆಚ್ಚಾಗಿದ್ದು ಕುವೈತ್ (Kuwait) ಸೂಪರ್ ಮಾರ್ಕೆಟ್ ಭಾರತೀಯ ಉತ್ಪನ್ನಗಳನ್ನು ತನ್ನ ಕಪಾಟಿನಿಂದ ಹೊರತೆಗೆದಿದೆ. ಅಲ್-ಅರ್ದಿಯಾ ಕೋ-ಆಪರೇಟಿವ್ ಸೊಸೈಟಿ ಅಂಗಡಿಯ ಕಾರ್ಮಿಕರು ಬಿಜೆಪಿ ನಾಯಕರ ಹೇಳಿಕೆಗಳನ್ನು “ಇಸ್ಲಾಮೋಫೋಬಿಕ್” ಎಂದು ಖಂಡಿಸಿ ಪ್ರತಿಭಟಿಸಿದ್ದು ಚಹಾ ಮತ್ತು ಭಾರತದ ಇತರ ಉತ್ಪನ್ನಗಳನ್ನು ಟ್ರಾಲಿಗಳಲ್ಲಿ ತುಂಬಿಸಲಾಗಿದೆ. ಸೌದಿ ಅರೇಬಿಯಾ, ಕತಾರ್ ಮತ್ತು ಈ ಪ್ರದೇಶದ ಇತರ ದೇಶಗಳು ಸೇರಿದಂತೆ ಕೈರೋದ ಪ್ರಭಾವಿ ಅಲ್-ಅಜರ್ ವಿಶ್ವವಿದ್ಯಾಲಯವು ಬಿಜೆಪಿಯ ವಕ್ತಾರರ ಹೇಳಿಕೆಯನ್ನು ಖಂಡಿಸಿವೆ. ಕುವೈತ್ ಸಿಟಿಯ ಹೊರಗಿರುವ ಸೂಪರ್ ಮಾರ್ಕೆಟ್‌ನಲ್ಲಿ ಅಕ್ಕಿಯ ಚೀಲಗಳು, ಮಸಾಲೆಗಳು ಮತ್ತು ಮೆಣಸಿನಕಾಯಿಗಳ ಕಪಾಟುಗಳನ್ನು ಪ್ಲಾಸ್ಟಿಕ್ ಹಾಳೆಗಳಿಂದ ಮುಚ್ಚಲಾಗಿತ್ತು. ಅರೇಬಿಕ್ ಭಾಷೆಯಲ್ಲಿ “ನಾವು ಭಾರತೀಯ ಉತ್ಪನ್ನಗಳನ್ನು ತೆಗೆದುಹಾಕಿದ್ದೇವೆ” ಎಂದು ಬರೆಯಲಾಗಿದೆ. “ನಾವು, ಕುವೈತ್​​ನ ಮುಸ್ಲಿಂ ಜನರು, ಪ್ರವಾದಿಯನ್ನು ಅವಮಾನಿಸುವುದನ್ನು ಒಪ್ಪಿಕೊಳ್ಳುವುದಿಲ್ಲ” ಎಂದು ಅಂಗಡಿಯ ಸಿಇಒ ನಾಸರ್ ಅಲ್-ಮುತೈರಿ ಹೇಳಿರುವುದಾಗಿ ಎಎಫ್‌ಪಿಗೆ ವರದಿ ಮಾಡಿದೆ . ಕಂಪನಿಯಾದ್ಯಂತ ಬಹಿಷ್ಕಾರವನ್ನು ಪರಿಗಣಿಸಲಾಗುತ್ತಿದೆ ಎಂದು ಈ ಅಂಗಡಿಗಳಶ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಗಳು ಮುಸ್ಲಿಂ ರಾಷ್ಟ್ರಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿವೆ.

ಇದನ್ನೂ ಓದಿ
Image
ಬಿಜೆಪಿಯ ಮತಾಂಧತೆ ಜಾಗತಿಕವಾಗಿ ಭಾರತದ ಸ್ಥಾನಮಾನಕ್ಕೆ ಧಕ್ಕೆ ತಂದಿದೆ: ರಾಹುಲ್ ಗಾಂಧಿ
Image
ನಿಮ್ಮಂತೆ ಮತಾಂಧರನ್ನು ಸ್ತುತಿಸುವುದಿಲ್ಲ; ಪಾಕ್ ಪ್ರಧಾನಿ ಟ್ವೀಟ್​ಗೆ ಭಾರತ ತಿರುಗೇಟು
Image
ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ಒಐಸಿ ಟೀಕೆ ಅನಗತ್ಯ ಮತ್ತು ಸಂಕುಚಿತ ಮನಸ್ಸಿನದ್ದು ಎಂದ ಭಾರತ
Image
Nupur Sharma: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮ ಯಾರು?

ಧಾರ್ಮಿಕ ದ್ವೇಷಕ್ಕೆ ಪ್ರಚೋದನೆ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಅನಿಲ-ಸಮೃದ್ಧ ಗಲ್ಫ್ ರಾಜ್ಯಕ್ಕೆ ವ್ಯಾಪಾರವನ್ನು ಉತ್ತೇಜಿಸುವ ಉದ್ದೇಶದಿಂದ ಭೇಟಿ ನೀಡಿದ್ದರಿಂದ, “ಇಸ್ಲಾಮೋಫೋಬಿಕ್” ಕಾಮೆಂಟ್‌ಗಳಿಗಾಗಿ ಭಾರತವು ಕ್ಷಮೆಯಾಚಿಸಬೇಕು ಎಂದು ಕತಾರ್ ಭಾನುವಾರ ಒತ್ತಾಯಿಸಿತು.

ಕತಾರ್ ಮತ್ತು ಕುವೈತ್ ನಂತರ ಇರಾನ್ ಕೂಡಾ ಭಾರತೀಯ ರಾಯಭಾರಿಯನ್ನು ಕರೆಸಿದೆ ಎಂದು ಎಂದು ರಾಜ್ಯ ಸುದ್ದಿ ಸಂಸ್ಥೆ ಐಆರ್​ಎನ್​​ಎ (IRNA) ಭಾನುವಾರ ತಡರಾತ್ರಿ ತಿಳಿಸಿದೆ.

ಇಸ್ಲಾಂ ಧರ್ಮದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಅಲ್-ಅಝರ್ ವಿಶ್ವವಿದ್ಯಾನಿಲಯವು ಈ ಹೇಳಿಕೆಗಳು “ನಿಜವಾದ ಭಯೋತ್ಪಾದನೆ” ಮತ್ತು “ಇಡೀ ಜಗತ್ತನ್ನು ಮಾರಣಾಂತಿಕ ಬಿಕ್ಕಟ್ಟು ಮತ್ತು ಯುದ್ಧಗಳಿಗೆ ಕಾರಣವಾಗಬಹುದು ಎಂದು ಹೇಳಿದೆ.

ಸೌದಿ ಮೂಲದ ಮುಸ್ಲಿಂ ವರ್ಲ್ಡ್ ಲೀಗ್ ಬಿಜೆಪಿ ನಾಯಕರ ಹೇಳಿಕೆಗಳು “ದ್ವೇಷವನ್ನು ಪ್ರಚೋದಿಸಬಹುದು” ಎಂದು ಹೇಳಿದ್ದು, ಸೌದಿ ಅರೇಬಿಯಾದ ಮಹಾ ಮಸೀದಿ ಮತ್ತು ಪ್ರವಾದಿ ಮಸೀದಿಯ ವ್ಯವಹಾರಗಳ ಜನರಲ್ ಪ್ರೆಸಿಡೆನ್ಸಿ ಇದನ್ನು “ಹೇಯ ಕೃತ್ಯ” ಎಂದು ಕರೆದಿದೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 8:43 pm, Mon, 6 June 22

ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ