AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸಾಪ್ ಸಂದೇಶಗಳ ಮೂಲಕ ಧರ್ಮನಿಂದನೆ: ಪಾಕಿಸ್ತಾನದ ವಿದ್ಯಾರ್ಥಿಗೆ ಮರಣದಂಡನೆ, ವಿದ್ಯಾರ್ಥಿನಿಗೆ ಜೀವಾವಧಿ ಶಿಕ್ಷೆ

ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ 22 ವರ್ಷದ ವಿದ್ಯಾರ್ಥಿಯು ಧರ್ಮನಿಂದೆಯ ವಿಷಯವನ್ನು ಹಂಚಿಕೊಂಡಿದ್ದಾನೆ. ಹಾಗಾಗಿ ಮರಣದಂಡನೆ ವಿಧಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಧರ್ಮನಿಂದನೆ ವಿಷಯವನ್ನು ಹಂಚಿಕೊಂಡಿದ್ದಕ್ಕಾಗಿ ಹದಿಹರೆಯದ ವಿದ್ಯಾರ್ಥಿನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ವಾಟ್ಸಾಪ್ ಸಂದೇಶಗಳ ಮೂಲಕ ಧರ್ಮನಿಂದನೆ: ಪಾಕಿಸ್ತಾನದ ವಿದ್ಯಾರ್ಥಿಗೆ ಮರಣದಂಡನೆ, ವಿದ್ಯಾರ್ಥಿನಿಗೆ ಜೀವಾವಧಿ ಶಿಕ್ಷೆ
ದೈವನಿಂದನೆ ಮಾಡಿದ ಪಾಕಿಸ್ತಾನದ ವಿದ್ಯಾರ್ಥಿಗೆ ಗಲ್ಲುಶಿಕ್ಷೆ
ಸಾಧು ಶ್ರೀನಾಥ್​
|

Updated on:Mar 13, 2024 | 2:34 PM

Share

ಪ್ರವಾದಿ ಮುಹಮ್ಮದ್ (Prophet Muhammad) ಮತ್ತು ಆತನ ಪತ್ನಿಯರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿ ಫೋಟೋಗಳು ಮತ್ತು ವೀಡಿಯೊಗಳನ್ನು ಸಿದ್ಧಪಡಿಸಿದ್ದಕ್ಕಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನ್ಯಾಯಾಲಯವು 22 ವರ್ಷದ ವಿದ್ಯಾರ್ಥಿಗೆ ಮರಣದಂಡನೆ ವಿಧಿಸಿದೆ. ಪಾಕಿಸ್ತಾನದಲ್ಲಿ 22 ವರ್ಷದ ವಿದ್ಯಾರ್ಥಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಜೊತೆಗೆ ವಾಟ್ಸಾಪ್ ಸಂದೇಶಗಳ (WhatsApp messages) ಮೂಲಕ ಧರ್ಮನಿಂದೆಯ ಆರೋಪದ ಮೇಲೆ 17 ವರ್ಷದ ಯುವತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನ್ಯಾಯಾಲಯದ (Pakistan Punjab Province court) ನ್ಯಾಯಾಧೀಶರ ಆದೇಶವನ್ನು ಉಲ್ಲೇಖಿಸಿ, ಬಿಬಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ 22 ವರ್ಷದ ವಿದ್ಯಾರ್ಥಿಯು ಧರ್ಮನಿಂದೆಯ ವಿಷಯವನ್ನು ಹಂಚಿಕೊಂಡಿದ್ದಾನೆ. ಹಾಗಾಗಿ ಮರಣದಂಡನೆ ವಿಧಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಧರ್ಮನಿಂದನೆ ವಿಷಯವನ್ನು ಹಂಚಿಕೊಂಡಿದ್ದಕ್ಕಾಗಿ ಹದಿಹರೆಯದ ವಿದ್ಯಾರ್ಥಿನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆದರೆ ಇಬ್ಬರೂ ಆರೋಪಗಳನ್ನು ನಿರಾಕರಿಸಿದರು ಮತ್ತು ಅವರ ವಕೀಲರು ಬಿಬಿಸಿ ವರದಿಯ ಪ್ರಕಾರ “ಸುಳ್ಳು ಪ್ರಕರಣದಲ್ಲಿ ಸಿಲುಕಿಸಿದ್ದಾರೆ” ಎಂದು ವಾದಿಸಿದರು.

ಲಾಹೋರ್‌ನಲ್ಲಿರುವ ಪಾಕಿಸ್ತಾನದ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿಯ (ಎಫ್‌ಐಎ Pakistan’s Federal Investigation Agency -FIA) ಸೈಬರ್ ಕ್ರೈಮ್ ಘಟಕವು 2022 ರಲ್ಲಿ ಆ ಇಬ್ಬರ ವಿರುದ್ಧ ದೂರು ದಾಖಲಿಸಿತ್ತು.

ಇದನ್ನೂ ಓದಿ: ಚಂದ್ರ ಕಣ್ಣಿಗೆ ಬಿದ್ದರೆ ದಯವಿಟ್ಟು ತಿಳಿಸಿ: ಸೌದಿ ಅರೇಬಿಯಾದ ನ್ಯಾಯಾಲಯದಿಂದ ಸಾರ್ವಜನಿಕರಿಗೆ ಬಿನ್ನಹ

ಮೂರು ವಿಭಿನ್ನ ಮೊಬೈಲ್ ಫೋನ್ ಸಂಖ್ಯೆಗಳಿಂದ ಧರ್ಮನಿಂದೆಯ ವಿಷಯವಿರುವ ವೀಡಿಯೊಗಳು ಮತ್ತು ಫೋಟೋಗಳನ್ನು ಅವರು ಸ್ವೀಕರಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ದೂರುದಾರನ ಫೋನ್ ಅನ್ನು ಪರಿಶೀಲಿಸಿದ ನಂತರ ಅಗೌರವ ಸಂದೇಶಗಳನ್ನು (derogatory words) ಕಳುಹಿಸಲಾಗಿದೆ ಎಂದು ತನಿಖಾ ಸಂಸ್ಥೆ ದೃಢಪಡಿಸಿತು. ಮುಸಲ್ಮಾನರ ಭಾವನೆಗಳನ್ನು ಕೆರಳಿಸುವಂತಹ ಉದ್ದೇಶದೊಂದಿಗೆ ಅವರು ಈ ಕುಕೃತ್ಯವೆಸಗಿದ್ದಾರೆ ಎಂದು ಕೋರ್ಟ್​​ ಅಭಿಪ್ರಾಯಪಟ್ಟಿತು.

ತನ್ನ ಮಗನ ಮೇಲಿನ ತೀರ್ಪಿನ ವಿರುದ್ಧ ಲಾಹೋರ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತಿರುವುದಾಗಿ 22 ವರ್ಷದ ವಿದ್ಯಾರ್ಥಿಯ ತಂದೆ ಬಿಬಿಸಿಗೆ ತಿಳಿಸಿದರು.

ಪಾಕಿಸ್ತಾನದಲ್ಲಿ ಧರ್ಮನಿಂದನೆಗೆ ಮರಣದಂಡನೆ ವಿಧಿಸಲಾಗುತ್ತದೆ. ಧರ್ಮನಿಂದೆಯ ವಿರುದ್ಧದ ಕಾನೂನುಗಳನ್ನು ಮೊದಲು ಭಾರತದ ಬ್ರಿಟಿಷ್ ಆಡಳಿತಗಾರರು ಜಾರಿಗೆ ತಂದರು ಮತ್ತು 1980 ರ ದಶಕದಲ್ಲಿ ಪಾಕಿಸ್ತಾನದ ಮಿಲಿಟರಿ ಸರ್ಕಾರದ ಅಡಿಯಲ್ಲಿ ಅದನ್ನು ವಿಸ್ತರಿಸಲಾಯಿತು.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Wed, 13 March 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ