AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan Mosque Blast: ಪೇಶಾವರ ಮಸೀದಿಯೊಂದರಲ್ಲಿ ಸ್ಫೋಟ, 46 ಸಾವು, 150 ಮಂದಿಗೆ ಗಾಯ

ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ ಸಂಭವಿಸಿದ್ದು, ಹಲವು ಸಾವು ನೋವುಗಳು ಸಂಭವಿಸಿದೆ ಎಂದು ವರದಿ ಹೇಳಿದೆ.

Pakistan Mosque Blast: ಪೇಶಾವರ ಮಸೀದಿಯೊಂದರಲ್ಲಿ ಸ್ಫೋಟ, 46 ಸಾವು, 150 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jan 30, 2023 | 6:07 PM

Share

ಪೇಶಾವರ: ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ (Pakistan Mosque Blast) ಸಂಭವಿಸಿದ್ದು, ಹಲವು ಸಾವು ನೋವುಗಳು ಸಂಭವಿಸಿದೆ ಎಂದು ವರದಿ ಹೇಳಿದೆ. ಪಾಕಿಸ್ತಾನದ ವಾಯುವ್ಯ ನಗರವಾದ ಪೇಶಾವರದಲ್ಲಿ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಪೇಶಾವರದ ಮಸೀದಿಯೊಂದರಲ್ಲಿ ಸ್ಫೋಟದಲ್ಲಿ 150ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ರಾಯಿಟರ್ಸ್‌ಗೆ ತಿಳಿಸಿದ್ದು, 46ಜನ  ಸಾವನ್ನಪ್ಪಿದ್ದಾರೆ  ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇನ್ನೂ ಕೆಲವರು ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಾರ್ಥನೆಗಾಗಿ ಸೇರಿದ್ದ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಸಿಕಂದರ್ ಖಾನ್ ತಿಳಿಸಿದ್ದಾರೆ. ಕಟ್ಟಡದ ಒಂದು ಭಾಗವು ಕುಸಿದಿದೆ ಮತ್ತು ಹಲವಾರು ಜನರು ಅದರ ಅಡಿಯಲ್ಲಿದ್ದಾರೆ ಎಂದು ಹೇಳಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನು ಓದಿ; Afghanistan Mosque Blast: ಅಫ್ಘಾನಿಸ್ತಾನ ಮಸೀದಿ ಸ್ಫೋಟ, ಹಲವು ಮಂದಿ ಸಾವು, ಅನೇಕರಿಗೆ ಗಾಯ

ಅಫ್ಘಾನಿಸ್ತಾನದ ಬಳಿಯ ಪೇಶಾವರದಲ್ಲಿ ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಮುಖ್ಯಸ್ಥ ಮುಹಮ್ಮದ್ ಇಜಾಜ್ ಖಾನ್ ಎಎಫ್‌ಪಿಗೆ ತಿಳಿಸಿದ್ದಾರೆ. ನಾವು ಮೃತ ದೇಹಗಳನ್ನು ಗುರುತಿಸಿದ್ದು. ಇದು ತುರ್ತು ಪರಿಸ್ಥಿತಿ ಎಂದು ಪೇಶಾವರದ ಮುಖ್ಯ ಆಸ್ಪತ್ರೆಯ ವಕ್ತಾರ ಮುಹಮ್ಮದ್ ಅಸಿಮ್ ಖಾನ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Mon, 30 January 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು