AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ಮಿಂಗ್​​ಹ್ಯಾಮ್​ನಲ್ಲಿ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ, 6ರಿಂದ 7 ಮನೆಗಳು ಧ್ವಂಸ

ಕಿಂಗ್‌ಸ್ಟಾಂಡಿಂಗ್‌ನ ದುಲ್ವಿಚ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟ ಸಂಭವಿಸಿದ ಮನೆ ಸಂಪೂರ್ಣ ನಾಶವಾಗಿದೆ.

ಬರ್ಮಿಂಗ್​​ಹ್ಯಾಮ್​ನಲ್ಲಿ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ, 6ರಿಂದ 7 ಮನೆಗಳು ಧ್ವಂಸ
ಬರ್ಮಿಂಗ್​ಹ್ಯಾಮ್​ನಲ್ಲಿ ಸ್ಫೋಟImage Credit source: News18
TV9 Web
| Edited By: |

Updated on:Jun 27, 2022 | 12:01 PM

Share

ಬರ್ಮಿಂಗ್​ಹ್ಯಾಂ: ಭಾನುವಾರ ರಾತ್ರಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮನೆಯೊಂದು ಸಂಪೂರ್ಣವಾಗಿ ನಾಶವಾಗಿದೆ. ಈ ಸ್ಫೋಟದ ಕಾರಣ ತಿಳಿದಿಲ್ಲ. ಇಂಗ್ಲೆಂಡ್ ಮೂಲದ ಮಾಧ್ಯಮಗಳ ಪ್ರಕಾರ, ತುರ್ತು ಸೇವೆಗಳು ಇನ್ನೂ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಹತ್ತಿರದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. ಸ್ಕೈ ನ್ಯೂಸ್ ಮತ್ತು ಗಾರ್ಡಿಯನ್ ಪ್ರಕಾರ, ಈ ಸ್ಫೋಟದಿಂದ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ನಾಲ್ವರಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗಿದೆ.

ಕಿಂಗ್‌ಸ್ಟಾಂಡಿಂಗ್‌ನ ದುಲ್ವಿಚ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟ ಸಂಭವಿಸಿದ ಮನೆ ಸಂಪೂರ್ಣ ನಾಶವಾಗಿದೆ. ಸ್ಫೋಟದಿಂದ ಹಾನಿಗೀಡಾದ ಮನೆಗೆ ಹೊಂದಿಕೊಂಡಿರುವ ಕನಿಷ್ಠ 5ರಿಂದ 6 ಮನೆಗಳು ಸಹ ವಿವಿಧ ಹಂತದ ಹಾನಿಯನ್ನು ಅನುಭವಿಸಿವೆ. ಅನಿಲ ಸ್ಫೋಟವೇ ಇದಕ್ಕೆ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಅವರ ಗಾಯಗಳ ಸಂಖ್ಯೆ ಮತ್ತು ತೀವ್ರತೆ ಸದ್ಯಕ್ಕೆ ತಿಳಿದಿಲ್ಲ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಶಬ್ದವು 7 ಕಿಮೀ ದೂರಕ್ಕೂ ಕೇಳಿತ್ತು. ಬರ್ಮಿಂಗ್​ಹ್ಯಾಮ್‌ನ ಉತ್ತರದಲ್ಲಿರುವ ಸುಟ್ಟನ್ ಕೋಲ್ಡ್‌ಫೀಲ್ಡ್ ನಿವಾಸಿಗಳು ಸ್ಫೋಟದ ಶಬ್ದವನ್ನು ಕೇಳಿದ್ದರು. ಈ ಪ್ರದೇಶದ ಕಡೆಗೆ ಜನರು ಹೊರಗೆ ಬಾರದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ತಮಿಳುನಾಡು: ದಿಂಡಿಗಲ್ ಕಲೆಕ್ಟರ್ ಕಚೇರಿ ಎದುರು ಪಟಾಕಿ ಅಂಗಡಿ ಸ್ಫೋಟ, ಓರ್ವ ಸಾವು

ಈ ಸ್ಫೋಟದಲ್ಲಿ ಒಂದು ಮನೆ ನಾಶವಾಗಿದ್ದು, ಇತರ ಮನೆಗಳು ಭಾರೀ ಹಾನಿಗೊಳಗಾಗಿವೆ. ಕಾರುಗಳಿಗೂ ಹಾನಿಯಾಗಿದೆ, ಸಾವು-ನೋವುಗಳ ವರದಿಯಾಗಿವೆ. ಆದರೆ ಅವರ ಗಾಯಗಳ ಪ್ರಮಾಣ ಮತ್ತು ತೀವ್ರತೆಯ ಬಗ್ಗೆ ಇನ್ನೂ ತಿಳಿದಿಲ್ಲ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಇದೇ ವೇಳೆ ಸಮುದಾಯದ ನಿವಾಸಿಯೊಬ್ಬರು ಬೆಂಕಿ ಹೊತ್ತಿ ಉರಿಯುತ್ತಿದ್ದ ಮನೆಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಮನೆಯೊಳಗೆ ಹೋಗಿ ರಕ್ಷಿಸಿದ್ದಾರೆ.

Published On - 12:00 pm, Mon, 27 June 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!