AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ಮಿಂಗ್​​ಹ್ಯಾಮ್​ನಲ್ಲಿ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ, 6ರಿಂದ 7 ಮನೆಗಳು ಧ್ವಂಸ

ಕಿಂಗ್‌ಸ್ಟಾಂಡಿಂಗ್‌ನ ದುಲ್ವಿಚ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟ ಸಂಭವಿಸಿದ ಮನೆ ಸಂಪೂರ್ಣ ನಾಶವಾಗಿದೆ.

ಬರ್ಮಿಂಗ್​​ಹ್ಯಾಮ್​ನಲ್ಲಿ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ, 6ರಿಂದ 7 ಮನೆಗಳು ಧ್ವಂಸ
ಬರ್ಮಿಂಗ್​ಹ್ಯಾಮ್​ನಲ್ಲಿ ಸ್ಫೋಟImage Credit source: News18
TV9 Web
| Edited By: |

Updated on:Jun 27, 2022 | 12:01 PM

Share

ಬರ್ಮಿಂಗ್​ಹ್ಯಾಂ: ಭಾನುವಾರ ರಾತ್ರಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮನೆಯೊಂದು ಸಂಪೂರ್ಣವಾಗಿ ನಾಶವಾಗಿದೆ. ಈ ಸ್ಫೋಟದ ಕಾರಣ ತಿಳಿದಿಲ್ಲ. ಇಂಗ್ಲೆಂಡ್ ಮೂಲದ ಮಾಧ್ಯಮಗಳ ಪ್ರಕಾರ, ತುರ್ತು ಸೇವೆಗಳು ಇನ್ನೂ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಹತ್ತಿರದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. ಸ್ಕೈ ನ್ಯೂಸ್ ಮತ್ತು ಗಾರ್ಡಿಯನ್ ಪ್ರಕಾರ, ಈ ಸ್ಫೋಟದಿಂದ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ನಾಲ್ವರಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗಿದೆ.

ಕಿಂಗ್‌ಸ್ಟಾಂಡಿಂಗ್‌ನ ದುಲ್ವಿಚ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟ ಸಂಭವಿಸಿದ ಮನೆ ಸಂಪೂರ್ಣ ನಾಶವಾಗಿದೆ. ಸ್ಫೋಟದಿಂದ ಹಾನಿಗೀಡಾದ ಮನೆಗೆ ಹೊಂದಿಕೊಂಡಿರುವ ಕನಿಷ್ಠ 5ರಿಂದ 6 ಮನೆಗಳು ಸಹ ವಿವಿಧ ಹಂತದ ಹಾನಿಯನ್ನು ಅನುಭವಿಸಿವೆ. ಅನಿಲ ಸ್ಫೋಟವೇ ಇದಕ್ಕೆ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಅವರ ಗಾಯಗಳ ಸಂಖ್ಯೆ ಮತ್ತು ತೀವ್ರತೆ ಸದ್ಯಕ್ಕೆ ತಿಳಿದಿಲ್ಲ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಶಬ್ದವು 7 ಕಿಮೀ ದೂರಕ್ಕೂ ಕೇಳಿತ್ತು. ಬರ್ಮಿಂಗ್​ಹ್ಯಾಮ್‌ನ ಉತ್ತರದಲ್ಲಿರುವ ಸುಟ್ಟನ್ ಕೋಲ್ಡ್‌ಫೀಲ್ಡ್ ನಿವಾಸಿಗಳು ಸ್ಫೋಟದ ಶಬ್ದವನ್ನು ಕೇಳಿದ್ದರು. ಈ ಪ್ರದೇಶದ ಕಡೆಗೆ ಜನರು ಹೊರಗೆ ಬಾರದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ತಮಿಳುನಾಡು: ದಿಂಡಿಗಲ್ ಕಲೆಕ್ಟರ್ ಕಚೇರಿ ಎದುರು ಪಟಾಕಿ ಅಂಗಡಿ ಸ್ಫೋಟ, ಓರ್ವ ಸಾವು

ಈ ಸ್ಫೋಟದಲ್ಲಿ ಒಂದು ಮನೆ ನಾಶವಾಗಿದ್ದು, ಇತರ ಮನೆಗಳು ಭಾರೀ ಹಾನಿಗೊಳಗಾಗಿವೆ. ಕಾರುಗಳಿಗೂ ಹಾನಿಯಾಗಿದೆ, ಸಾವು-ನೋವುಗಳ ವರದಿಯಾಗಿವೆ. ಆದರೆ ಅವರ ಗಾಯಗಳ ಪ್ರಮಾಣ ಮತ್ತು ತೀವ್ರತೆಯ ಬಗ್ಗೆ ಇನ್ನೂ ತಿಳಿದಿಲ್ಲ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಇದೇ ವೇಳೆ ಸಮುದಾಯದ ನಿವಾಸಿಯೊಬ್ಬರು ಬೆಂಕಿ ಹೊತ್ತಿ ಉರಿಯುತ್ತಿದ್ದ ಮನೆಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಮನೆಯೊಳಗೆ ಹೋಗಿ ರಕ್ಷಿಸಿದ್ದಾರೆ.

Published On - 12:00 pm, Mon, 27 June 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ