AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ಮಿಂಗ್​​ಹ್ಯಾಮ್​ನಲ್ಲಿ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ, 6ರಿಂದ 7 ಮನೆಗಳು ಧ್ವಂಸ

ಕಿಂಗ್‌ಸ್ಟಾಂಡಿಂಗ್‌ನ ದುಲ್ವಿಚ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟ ಸಂಭವಿಸಿದ ಮನೆ ಸಂಪೂರ್ಣ ನಾಶವಾಗಿದೆ.

ಬರ್ಮಿಂಗ್​​ಹ್ಯಾಮ್​ನಲ್ಲಿ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ, 6ರಿಂದ 7 ಮನೆಗಳು ಧ್ವಂಸ
ಬರ್ಮಿಂಗ್​ಹ್ಯಾಮ್​ನಲ್ಲಿ ಸ್ಫೋಟImage Credit source: News18
TV9 Web
| Edited By: |

Updated on:Jun 27, 2022 | 12:01 PM

Share

ಬರ್ಮಿಂಗ್​ಹ್ಯಾಂ: ಭಾನುವಾರ ರಾತ್ರಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮನೆಯೊಂದು ಸಂಪೂರ್ಣವಾಗಿ ನಾಶವಾಗಿದೆ. ಈ ಸ್ಫೋಟದ ಕಾರಣ ತಿಳಿದಿಲ್ಲ. ಇಂಗ್ಲೆಂಡ್ ಮೂಲದ ಮಾಧ್ಯಮಗಳ ಪ್ರಕಾರ, ತುರ್ತು ಸೇವೆಗಳು ಇನ್ನೂ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಹತ್ತಿರದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. ಸ್ಕೈ ನ್ಯೂಸ್ ಮತ್ತು ಗಾರ್ಡಿಯನ್ ಪ್ರಕಾರ, ಈ ಸ್ಫೋಟದಿಂದ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ನಾಲ್ವರಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗಿದೆ.

ಕಿಂಗ್‌ಸ್ಟಾಂಡಿಂಗ್‌ನ ದುಲ್ವಿಚ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟ ಸಂಭವಿಸಿದ ಮನೆ ಸಂಪೂರ್ಣ ನಾಶವಾಗಿದೆ. ಸ್ಫೋಟದಿಂದ ಹಾನಿಗೀಡಾದ ಮನೆಗೆ ಹೊಂದಿಕೊಂಡಿರುವ ಕನಿಷ್ಠ 5ರಿಂದ 6 ಮನೆಗಳು ಸಹ ವಿವಿಧ ಹಂತದ ಹಾನಿಯನ್ನು ಅನುಭವಿಸಿವೆ. ಅನಿಲ ಸ್ಫೋಟವೇ ಇದಕ್ಕೆ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಅವರ ಗಾಯಗಳ ಸಂಖ್ಯೆ ಮತ್ತು ತೀವ್ರತೆ ಸದ್ಯಕ್ಕೆ ತಿಳಿದಿಲ್ಲ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಶಬ್ದವು 7 ಕಿಮೀ ದೂರಕ್ಕೂ ಕೇಳಿತ್ತು. ಬರ್ಮಿಂಗ್​ಹ್ಯಾಮ್‌ನ ಉತ್ತರದಲ್ಲಿರುವ ಸುಟ್ಟನ್ ಕೋಲ್ಡ್‌ಫೀಲ್ಡ್ ನಿವಾಸಿಗಳು ಸ್ಫೋಟದ ಶಬ್ದವನ್ನು ಕೇಳಿದ್ದರು. ಈ ಪ್ರದೇಶದ ಕಡೆಗೆ ಜನರು ಹೊರಗೆ ಬಾರದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ತಮಿಳುನಾಡು: ದಿಂಡಿಗಲ್ ಕಲೆಕ್ಟರ್ ಕಚೇರಿ ಎದುರು ಪಟಾಕಿ ಅಂಗಡಿ ಸ್ಫೋಟ, ಓರ್ವ ಸಾವು

ಈ ಸ್ಫೋಟದಲ್ಲಿ ಒಂದು ಮನೆ ನಾಶವಾಗಿದ್ದು, ಇತರ ಮನೆಗಳು ಭಾರೀ ಹಾನಿಗೊಳಗಾಗಿವೆ. ಕಾರುಗಳಿಗೂ ಹಾನಿಯಾಗಿದೆ, ಸಾವು-ನೋವುಗಳ ವರದಿಯಾಗಿವೆ. ಆದರೆ ಅವರ ಗಾಯಗಳ ಪ್ರಮಾಣ ಮತ್ತು ತೀವ್ರತೆಯ ಬಗ್ಗೆ ಇನ್ನೂ ತಿಳಿದಿಲ್ಲ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಇದೇ ವೇಳೆ ಸಮುದಾಯದ ನಿವಾಸಿಯೊಬ್ಬರು ಬೆಂಕಿ ಹೊತ್ತಿ ಉರಿಯುತ್ತಿದ್ದ ಮನೆಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಮನೆಯೊಳಗೆ ಹೋಗಿ ರಕ್ಷಿಸಿದ್ದಾರೆ.

Published On - 12:00 pm, Mon, 27 June 22

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ