Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ಮಿಂಗ್​​ಹ್ಯಾಮ್​ನಲ್ಲಿ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ, 6ರಿಂದ 7 ಮನೆಗಳು ಧ್ವಂಸ

ಕಿಂಗ್‌ಸ್ಟಾಂಡಿಂಗ್‌ನ ದುಲ್ವಿಚ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟ ಸಂಭವಿಸಿದ ಮನೆ ಸಂಪೂರ್ಣ ನಾಶವಾಗಿದೆ.

ಬರ್ಮಿಂಗ್​​ಹ್ಯಾಮ್​ನಲ್ಲಿ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ, 6ರಿಂದ 7 ಮನೆಗಳು ಧ್ವಂಸ
ಬರ್ಮಿಂಗ್​ಹ್ಯಾಮ್​ನಲ್ಲಿ ಸ್ಫೋಟImage Credit source: News18
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 27, 2022 | 12:01 PM

ಬರ್ಮಿಂಗ್​ಹ್ಯಾಂ: ಭಾನುವಾರ ರಾತ್ರಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮನೆಯೊಂದು ಸಂಪೂರ್ಣವಾಗಿ ನಾಶವಾಗಿದೆ. ಈ ಸ್ಫೋಟದ ಕಾರಣ ತಿಳಿದಿಲ್ಲ. ಇಂಗ್ಲೆಂಡ್ ಮೂಲದ ಮಾಧ್ಯಮಗಳ ಪ್ರಕಾರ, ತುರ್ತು ಸೇವೆಗಳು ಇನ್ನೂ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಹತ್ತಿರದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. ಸ್ಕೈ ನ್ಯೂಸ್ ಮತ್ತು ಗಾರ್ಡಿಯನ್ ಪ್ರಕಾರ, ಈ ಸ್ಫೋಟದಿಂದ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಮತ್ತು ನಾಲ್ವರಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗಿದೆ.

ಕಿಂಗ್‌ಸ್ಟಾಂಡಿಂಗ್‌ನ ದುಲ್ವಿಚ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟ ಸಂಭವಿಸಿದ ಮನೆ ಸಂಪೂರ್ಣ ನಾಶವಾಗಿದೆ. ಸ್ಫೋಟದಿಂದ ಹಾನಿಗೀಡಾದ ಮನೆಗೆ ಹೊಂದಿಕೊಂಡಿರುವ ಕನಿಷ್ಠ 5ರಿಂದ 6 ಮನೆಗಳು ಸಹ ವಿವಿಧ ಹಂತದ ಹಾನಿಯನ್ನು ಅನುಭವಿಸಿವೆ. ಅನಿಲ ಸ್ಫೋಟವೇ ಇದಕ್ಕೆ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಅವರ ಗಾಯಗಳ ಸಂಖ್ಯೆ ಮತ್ತು ತೀವ್ರತೆ ಸದ್ಯಕ್ಕೆ ತಿಳಿದಿಲ್ಲ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಶಬ್ದವು 7 ಕಿಮೀ ದೂರಕ್ಕೂ ಕೇಳಿತ್ತು. ಬರ್ಮಿಂಗ್​ಹ್ಯಾಮ್‌ನ ಉತ್ತರದಲ್ಲಿರುವ ಸುಟ್ಟನ್ ಕೋಲ್ಡ್‌ಫೀಲ್ಡ್ ನಿವಾಸಿಗಳು ಸ್ಫೋಟದ ಶಬ್ದವನ್ನು ಕೇಳಿದ್ದರು. ಈ ಪ್ರದೇಶದ ಕಡೆಗೆ ಜನರು ಹೊರಗೆ ಬಾರದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ತಮಿಳುನಾಡು: ದಿಂಡಿಗಲ್ ಕಲೆಕ್ಟರ್ ಕಚೇರಿ ಎದುರು ಪಟಾಕಿ ಅಂಗಡಿ ಸ್ಫೋಟ, ಓರ್ವ ಸಾವು

ಈ ಸ್ಫೋಟದಲ್ಲಿ ಒಂದು ಮನೆ ನಾಶವಾಗಿದ್ದು, ಇತರ ಮನೆಗಳು ಭಾರೀ ಹಾನಿಗೊಳಗಾಗಿವೆ. ಕಾರುಗಳಿಗೂ ಹಾನಿಯಾಗಿದೆ, ಸಾವು-ನೋವುಗಳ ವರದಿಯಾಗಿವೆ. ಆದರೆ ಅವರ ಗಾಯಗಳ ಪ್ರಮಾಣ ಮತ್ತು ತೀವ್ರತೆಯ ಬಗ್ಗೆ ಇನ್ನೂ ತಿಳಿದಿಲ್ಲ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಇದೇ ವೇಳೆ ಸಮುದಾಯದ ನಿವಾಸಿಯೊಬ್ಬರು ಬೆಂಕಿ ಹೊತ್ತಿ ಉರಿಯುತ್ತಿದ್ದ ಮನೆಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಮನೆಯೊಳಗೆ ಹೋಗಿ ರಕ್ಷಿಸಿದ್ದಾರೆ.

Published On - 12:00 pm, Mon, 27 June 22

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ