AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಉಗ್ರದಾಳಿ ಮಾಸ್ಟರ್ ಮೈಂಡ್​ ಹಫೀಜ್​ ಸೈಯದ್​ ಮನೆ ಸಮೀಪ ಸ್ಫೋಟ; ಇಬ್ಬರು ಸಾವು

ಲಾಹೋರ್​: ಪಾಕಿಸ್ತಾನದ ಲಾಹೋರ್​​ನ ಜನವಸತಿ ಪ್ರದೇಶದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಉಗ್ರದಾಳಿಯ ಮಾಸ್ಟರ್​ ಮೈಂಡ್​ ಆಗಿರುವ, ಜಮಾತ್​ ಉದ್ ದವಾಹ್​​ ಸಂಘಟನೆ ಮುಖ್ಯಸ್ಥ ಹಫೀಜ್​ ಮಹಮ್ಮದ್​ ಸೈಯದ್​​ನ ಜೋಹಾರ್​ ಪಟ್ಟಣದಲ್ಲಿರುವ ನಿವಾಸದ​ ಸಮೀಪವೇ ಸ್ಫೋಟಗೊಂಡಿದ್ದಾಗಿ ವರದಿಯಾಗಿದೆ. ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲಿ ನಿಜಕ್ಕೂ ನಡೆದಿದ್ದೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಕೂಡ ಆಗಮಿಸಿದೆ ಎಂದು ಲಾಹೋರ್​ ಕ್ಯಾಪಿಟಲ್​ ಸಿಟಿ […]

ಮುಂಬೈ ಉಗ್ರದಾಳಿ ಮಾಸ್ಟರ್ ಮೈಂಡ್​ ಹಫೀಜ್​ ಸೈಯದ್​ ಮನೆ ಸಮೀಪ ಸ್ಫೋಟ; ಇಬ್ಬರು ಸಾವು
ಲಾಹೋರ್​ ಬ್ಲಾಸ್ಟ್ ಚಿತ್ರಣ
Lakshmi Hegde
|

Updated on: Jun 23, 2021 | 3:40 PM

Share

ಲಾಹೋರ್​: ಪಾಕಿಸ್ತಾನದ ಲಾಹೋರ್​​ನ ಜನವಸತಿ ಪ್ರದೇಶದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, 17 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮುಂಬೈ ಉಗ್ರದಾಳಿಯ ಮಾಸ್ಟರ್​ ಮೈಂಡ್​ ಆಗಿರುವ, ಜಮಾತ್​ ಉದ್ ದವಾಹ್​​ ಸಂಘಟನೆ ಮುಖ್ಯಸ್ಥ ಹಫೀಜ್​ ಮಹಮ್ಮದ್​ ಸೈಯದ್​​ನ ಜೋಹಾರ್​ ಪಟ್ಟಣದಲ್ಲಿರುವ ನಿವಾಸದ​ ಸಮೀಪವೇ ಸ್ಫೋಟಗೊಂಡಿದ್ದಾಗಿ ವರದಿಯಾಗಿದೆ.

ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲಿ ನಿಜಕ್ಕೂ ನಡೆದಿದ್ದೇನು ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಬಾಂಬ್​ ನಿಷ್ಕ್ರಿಯ ದಳ ಕೂಡ ಆಗಮಿಸಿದೆ ಎಂದು ಲಾಹೋರ್​ ಕ್ಯಾಪಿಟಲ್​ ಸಿಟಿ ಪೊಲೀಸ್​ ಅಧಿಕಾರಿ ಗುಲಾಮ್ ಮಹಮ್ಮದ್ ಡೋಗರ್​ ಹೇಳಿದ್ದಾರೆ.

ಪಾಕಿಸ್ತಾನ ಪಂಜಾಬ್​ನ ಮುಖ್ಯಮಂತ್ರಿ ಉಸ್ಮಾನ್ ಸ್ಫೋಟದ ಬಗ್ಗೆ ಪೊಲೀಸರಿಂದ ವರದಿ ಕೇಳಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಬೇಕು ಎಂದು ಸೂಚಿಸಿದ್ದಾರೆ. ಇದರೊಂದಿಗೆ ಕೇಂದ್ರ ಆಂತರಿಕ ವ್ಯವಹಾರಗಳ ಸಚಿವ ಶೇಖ್ ರಶೀದ್​ ಅವರೂ ಘಟನೆಯ ವಿವರ ಪಡೆದಿದ್ದಾರೆ. ಬ್ಲಾಸ್ಟ್ ಸಂಬಂಧ ತನಿಖೆ ನಡೆಸಲು ಲಾಹೋರ್​ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ನನ್ನ ಮನೆಗೆ ಬೆಂಕಿ ಹಚ್ಚಿದವರನ್ನು ಪಕ್ಷದಿಂದ ಉಚ್ಛಾಟಿಸಬೇಕಿತ್ತು, ಆದರೆ ಕೆಪಿಸಿಸಿ ಅಧ್ಯಕ್ಷರಿಗೆ ಕಿವಿ ಕೇಳಿಸ್ತಿಲ್ಲ; ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬೇಸರ

Blast near Mumbai terror attack mastermind Hafiz Saeed In Pakistan

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ