AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವು

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಈ ಮಾಹಿತಿ ನೀಡಿದೆ. ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ ವಲಸಿಗರು ಹೆಚ್ಚಿನ ಅಲೆಗಳ ಹೊಡೆತದಿಂದಾಗಿ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವು
ದೋಣಿ-ಸಾಂದರ್ಭಿಕ ಚಿತ್ರImage Credit source: Middle east monitor
ನಯನಾ ರಾಜೀವ್
|

Updated on: Dec 17, 2023 | 11:33 AM

Share

ಲಿಬಿಯಾ ಕರಾವಳಿಯಲ್ಲಿ ದೋಣಿ ಮುಳುಗಿ 60ಕ್ಕೂ ಹೆಚ್ಚು ಮಂದಿ ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂಟರ್ನ್ಯಾಷನಲ್ ಆರ್ಗನೈಸೇಶನ್ ಫಾರ್ ಮೈಗ್ರೇಷನ್ ಈ ಮಾಹಿತಿ ನೀಡಿದೆ. ಲಿಬಿಯಾದ ವಾಯುವ್ಯ ಕರಾವಳಿಯಲ್ಲಿರುವ ಜುವಾರಾದಿಂದ ಹೊರಟ ವಲಸಿಗರು ಹೆಚ್ಚಿನ ಅಲೆಗಳ ಹೊಡೆತದಿಂದಾಗಿ ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ.

ನೈಜೀರಿಯಾ, ಗ್ಯಾಂಬಿಯಾ ಮತ್ತು ಇತರ ಆಫ್ರಿಕನ್ ದೇಶಗಳಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ – ಸುಮಾರು 86 ವಲಸಿಗರು ಹಡಗಿನಲ್ಲಿದ್ದರು ಎಂದು ಹೇಳಲಾಗಿದೆ. 25 ಜನರನ್ನು ರಕ್ಷಿಸಲಾಗಿದೆ. ಬದುಕುಳಿದವರೆಲ್ಲರೂ ಉತ್ತಮ ಸ್ಥಿತಿಯಲ್ಲಿದ್ದಾರೆ. ಲಿಬಿಯಾ ಮತ್ತು ಟುನೀಶಿಯಾ ಇಟಲಿಯ ಮೂಲಕ ಯುರೋಪ್ ತಲುಪುವ ಭರವಸೆಯಲ್ಲಿ ಅಪಾಯಕಾರಿ ಸಮುದ್ರ ಪ್ರಯಾಣವನ್ನು ಬೆಳೆಸಿ ಪ್ರಾಣವನ್ನು ಅಪಾಯಕ್ಕೆ ತಂದೊಡ್ಡುತ್ತಿದ್ದಾರೆ.

ಟುನೀಶಿಯಾ ಮತ್ತು ಲಿಬಿಯಾದಿಂದ ಈ ವರ್ಷ 153,000 ಕ್ಕೂ ಹೆಚ್ಚು ವಲಸಿಗರು ಇಟಲಿಗೆ ಆಗಮಿಸಿದ್ದಾರೆ. ಲಿಬಿಯಾದಿಂದ ಇಟಲಿಗೆ ಹೋಗುವ ಮಾರ್ಗದಲ್ಲಿ 750 ಜನರನ್ನು ತುಂಬಿದ ಮೀನುಗಾರಿಕಾ ದೋಣಿ ಆಡ್ರಿಯಾನಾ ಜೂನ್ 14 ರಂದು ನೈಋತ್ಯ ಗ್ರೀಸ್‌ನಲ್ಲಿ ಮುಳುಗಿತ್ತು.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ದೋಣಿ ಮುಳುಗಿ 3 ಮಂದಿ ಸಾವು

ಹಡಗಿನಲ್ಲಿ ಮುಖ್ಯವಾಗಿ ಸಿರಿಯನ್ನರು, ಪಾಕಿಸ್ತಾನಿಗಳು ಮತ್ತು ಈಜಿಪ್ಟಿನವರು ಇದ್ದರು. 104 ಮಂದಿ ಮಾತ್ರ ಬದುಕುಳಿದಿದ್ದು, 82 ಮೃತದೇಹಗಳು ಪತ್ತೆಯಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ