Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಹರಣವಾಗಿದ್ದ ಭಾರತದ ಮೂಲದ 4 ಮಂದಿಯ ಶವ ಯುಎಸ್‌ನ ಹಣ್ಣಿನ ತೋಟದಲ್ಲಿ ಪತ್ತೆ

ಅಮೆರಿಕದಲ್ಲಿರುವ ಭಾರತೀಯ ಮೂಲದ ಕುಟುಂಬದ ನಾಲ್ವರು ಕ್ಯಾಲಿಫೋರ್ನಿಯಾದ ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಪಹರಣವಾಗಿದ್ದ ಭಾರತದ ಮೂಲದ 4 ಮಂದಿಯ ಶವ ಯುಎಸ್‌ನ ಹಣ್ಣಿನ ತೋಟದಲ್ಲಿ ಪತ್ತೆ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 06, 2022 | 11:25 AM

ದೆಹಲಿ: ಕೆಲವು ದಿನಗಳಿಂದ ಕಾಣೆಯಾಗಿದ್ದ ಎಂಟು ತಿಂಗಳ ಮಗು ಸೇರಿದಂತೆ ಅಮೆರಿಕದಲ್ಲಿರುವ ಭಾರತೀಯ ಮೂಲದ ಕುಟುಂಬದ ನಾಲ್ವರು ಕ್ಯಾಲಿಫೋರ್ನಿಯಾದ ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸೋಮವಾರ ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಿಂದ 8 ತಿಂಗಳ ಮಗು ಅರೂಹಿ ಧೇರಿ ಮತ್ತು ಆಕೆಯ ಪೋಷಕರು 27 ವರ್ಷದ ಜಸ್ಲೀನ್ ಕೌರ್ ಮತ್ತು 36 ವರ್ಷದ ಜಸ್ದೀಪ್ ಸಿಂಗ್ ಅವರನ್ನು ಅಪಹರಿಸಲಾಗಿತ್ತು. ಮರ್ಸಿಡ್ ಕೌಂಟಿ ಪೋಲೀಸರ ಪ್ರಕಾರ ಮಗುವಿನ ಚಿಕ್ಕಪ್ಪ, 39 ವರ್ಷದ ಅಮನದೀಪ್ ಸಿಂಗ್ ಕೂಡ ಅಪಹರಿಸಿದ್ದಾರೆ.

ಮರ್ಸಿಡ್ ಕೌಂಟಿ ಶೆರಿಫ್ ವೆರ್ನ್ ವಾರ್ನ್ಕೆ ಅವರು ನಾಲ್ವರ ಶವಗಳು ಇಂಡಿಯಾನಾ ರಸ್ತೆ ಮತ್ತು ಹಚಿನ್ಸನ್ ರಸ್ತೆ ಬಳಿಯ ಹಣ್ಣಿನ ತೋಟದಲ್ಲಿ ಬುಧವಾರ ಸಂಜೆ ಪತ್ತೆಯಾಗಿವೆ. ಪೊಲೀಸರ ಪ್ರಕಾರ, ಅಧಿಕಾರಿಗಳನ್ನು ಸಂಪರ್ಕಿಸುವ ಮೊದಲು ತೋಟದ ಬಳಿಯ ರೈತ ಕಾರ್ಮಿಕರು ಶವಗಳನ್ನು ಪತ್ತೆ ಮಾಡಿದ್ದಾರೆ. ಈ ಕುಟುಂಬವನ್ನು ಅಪಹರಿಸಿದ ಒಂದು ದಿನದ ನಂತರ, ಪೊಲೀಸರು ಶಂಕಿತ ಅಪಹರಣಕಾರನನ್ನು ಪತ್ತೆ ಮಾಡಿ. 48 ವರ್ಷದ ಜೀಸಸ್ ಮ್ಯಾನುಯೆಲ್ ಸಲ್ಗಾಡೊನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಜಸ್ದೀಪ್ ಸಿಂಗ್ ಕುಟುಂಬದ ಮೇಲೆ ಈ ವ್ಯಕ್ತಿಗೆ ದ್ವೇಷವಿದೆ ಎಂದು ಹೇಳಲಾಗಿದೆ.

ಕ್ಯಾಲಿಫೋರ್ನಿಯಾದ ಮರ್ಸೆಡ್​​ ಸಿಟಿಯಲ್ಲಿ ಭಾರತೀಯ ಮೂಲದ ನಾಲ್ವರನ್ನು ಸೋಮವಾರ ಕಿಡ್ನ್ಯಾಪ್ ಮಾಡಲಾಗಿದೆ. ಇದರಲ್ಲಿ 8 ತಿಂಗಳ ಹೆಣ್ಣು ಮಗುವೂ ಸೇರಿದೆ. ಜಶ್​ದೀಪ್​ ಸಿಂಗ್​ ಹಾಗೂ ಪತ್ನಿ ಜಸ್ಲೀನ್​ ಕೌರ್​ ಮತ್ತು ಆಕೆಯ ಎಂಟು ತಿಂಗಳ ಮಗಳು ಅರೋಹಿ ಧೇರಿ, ಅಮನ್​ದೀಪ್​ ಸಿಂಗ್ ಸೇರಿ ನಾಲ್ವರ ಅಪಹರಣ ಆಗಿದೆ. ಇನ್ನು ಕಿಡ್ನ್ಯಾಪ್ ಮಾಡಿದವರು ಅತ್ಯಂತ ಅಪಾಯಕಾರಿ ಮತ್ತು ಶಸ್ತ್ರಸಜ್ಜಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Published On - 10:17 am, Thu, 6 October 22

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ