AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಹರಣವಾಗಿದ್ದ ಭಾರತದ ಮೂಲದ 4 ಮಂದಿಯ ಶವ ಯುಎಸ್‌ನ ಹಣ್ಣಿನ ತೋಟದಲ್ಲಿ ಪತ್ತೆ

ಅಮೆರಿಕದಲ್ಲಿರುವ ಭಾರತೀಯ ಮೂಲದ ಕುಟುಂಬದ ನಾಲ್ವರು ಕ್ಯಾಲಿಫೋರ್ನಿಯಾದ ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಪಹರಣವಾಗಿದ್ದ ಭಾರತದ ಮೂಲದ 4 ಮಂದಿಯ ಶವ ಯುಎಸ್‌ನ ಹಣ್ಣಿನ ತೋಟದಲ್ಲಿ ಪತ್ತೆ
TV9 Web
| Edited By: |

Updated on:Oct 06, 2022 | 11:25 AM

Share

ದೆಹಲಿ: ಕೆಲವು ದಿನಗಳಿಂದ ಕಾಣೆಯಾಗಿದ್ದ ಎಂಟು ತಿಂಗಳ ಮಗು ಸೇರಿದಂತೆ ಅಮೆರಿಕದಲ್ಲಿರುವ ಭಾರತೀಯ ಮೂಲದ ಕುಟುಂಬದ ನಾಲ್ವರು ಕ್ಯಾಲಿಫೋರ್ನಿಯಾದ ಹಣ್ಣಿನ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸೋಮವಾರ ಉತ್ತರ ಕ್ಯಾಲಿಫೋರ್ನಿಯಾದ ಮರ್ಸಿಡ್ ಕೌಂಟಿಯಿಂದ 8 ತಿಂಗಳ ಮಗು ಅರೂಹಿ ಧೇರಿ ಮತ್ತು ಆಕೆಯ ಪೋಷಕರು 27 ವರ್ಷದ ಜಸ್ಲೀನ್ ಕೌರ್ ಮತ್ತು 36 ವರ್ಷದ ಜಸ್ದೀಪ್ ಸಿಂಗ್ ಅವರನ್ನು ಅಪಹರಿಸಲಾಗಿತ್ತು. ಮರ್ಸಿಡ್ ಕೌಂಟಿ ಪೋಲೀಸರ ಪ್ರಕಾರ ಮಗುವಿನ ಚಿಕ್ಕಪ್ಪ, 39 ವರ್ಷದ ಅಮನದೀಪ್ ಸಿಂಗ್ ಕೂಡ ಅಪಹರಿಸಿದ್ದಾರೆ.

ಮರ್ಸಿಡ್ ಕೌಂಟಿ ಶೆರಿಫ್ ವೆರ್ನ್ ವಾರ್ನ್ಕೆ ಅವರು ನಾಲ್ವರ ಶವಗಳು ಇಂಡಿಯಾನಾ ರಸ್ತೆ ಮತ್ತು ಹಚಿನ್ಸನ್ ರಸ್ತೆ ಬಳಿಯ ಹಣ್ಣಿನ ತೋಟದಲ್ಲಿ ಬುಧವಾರ ಸಂಜೆ ಪತ್ತೆಯಾಗಿವೆ. ಪೊಲೀಸರ ಪ್ರಕಾರ, ಅಧಿಕಾರಿಗಳನ್ನು ಸಂಪರ್ಕಿಸುವ ಮೊದಲು ತೋಟದ ಬಳಿಯ ರೈತ ಕಾರ್ಮಿಕರು ಶವಗಳನ್ನು ಪತ್ತೆ ಮಾಡಿದ್ದಾರೆ. ಈ ಕುಟುಂಬವನ್ನು ಅಪಹರಿಸಿದ ಒಂದು ದಿನದ ನಂತರ, ಪೊಲೀಸರು ಶಂಕಿತ ಅಪಹರಣಕಾರನನ್ನು ಪತ್ತೆ ಮಾಡಿ. 48 ವರ್ಷದ ಜೀಸಸ್ ಮ್ಯಾನುಯೆಲ್ ಸಲ್ಗಾಡೊನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಜಸ್ದೀಪ್ ಸಿಂಗ್ ಕುಟುಂಬದ ಮೇಲೆ ಈ ವ್ಯಕ್ತಿಗೆ ದ್ವೇಷವಿದೆ ಎಂದು ಹೇಳಲಾಗಿದೆ.

ಕ್ಯಾಲಿಫೋರ್ನಿಯಾದ ಮರ್ಸೆಡ್​​ ಸಿಟಿಯಲ್ಲಿ ಭಾರತೀಯ ಮೂಲದ ನಾಲ್ವರನ್ನು ಸೋಮವಾರ ಕಿಡ್ನ್ಯಾಪ್ ಮಾಡಲಾಗಿದೆ. ಇದರಲ್ಲಿ 8 ತಿಂಗಳ ಹೆಣ್ಣು ಮಗುವೂ ಸೇರಿದೆ. ಜಶ್​ದೀಪ್​ ಸಿಂಗ್​ ಹಾಗೂ ಪತ್ನಿ ಜಸ್ಲೀನ್​ ಕೌರ್​ ಮತ್ತು ಆಕೆಯ ಎಂಟು ತಿಂಗಳ ಮಗಳು ಅರೋಹಿ ಧೇರಿ, ಅಮನ್​ದೀಪ್​ ಸಿಂಗ್ ಸೇರಿ ನಾಲ್ವರ ಅಪಹರಣ ಆಗಿದೆ. ಇನ್ನು ಕಿಡ್ನ್ಯಾಪ್ ಮಾಡಿದವರು ಅತ್ಯಂತ ಅಪಾಯಕಾರಿ ಮತ್ತು ಶಸ್ತ್ರಸಜ್ಜಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Published On - 10:17 am, Thu, 6 October 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು