AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​ನಲ್ಲಿ ಹರ್ಷಿತಾ ಕೊಲೆ ಪ್ರಕರಣ, ಕತ್ತು ಹಿಸುಕಿ, ಶವವನ್ನು ಕಾರಿನ ಡಿಕ್ಕಿಯಲ್ಲಿಟ್ಟು ಪತಿ ಪರಾರಿ

ಲಂಡನ್​ನ ಇಲ್ಫೋರ್ಡ್​ನಲ್ಲಿ ಪಾರ್ಕ್​ ಮಾಡಲಾಗಿದ್ದ ಕಾರಿನ ಡಿಕ್ಕಿಯಲ್ಲಿ ಭಾರತೀಯ ಮಹಿಳೆಯ ಶವ ಪತ್ತೆಯಾಗಿದೆ. ಆಕೆಯನ್ನು ಹರ್ಷಿತಾ ಎಂದು ಗುರುತಿಸಲಾಗಿದೆ. ಆಕೆ ಕಳೆದ ಆಗಸ್ಟ್​ನಲ್ಲಿ ಪಂಕಜ್ ಲಂಬಾ ಎಂಬುವವರನ್ನು ಮದುವೆಯಾಗಿದ್ದರು, ಆಕೆ ಹುಟ್ಟಿ ಬೆಳೆದಿದ್ದೆಲ್ಲಾ ದೆಹಲಿಯಲ್ಲೇ. ಮದುವೆಯಾದ ಬಳಿಕ ಏಪ್ರಿಲ್​ನಲ್ಲಿ ಯುಕೆಗೆ ಹೋಗಿದ್ದರು. ಕೆಲವು ದಿನಗಳ ಹಿಂದೆ ನಾರ್ಥಾಂಪ್ಟನ್‌ಶೈರ್‌ನಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು.

ಲಂಡನ್​ನಲ್ಲಿ ಹರ್ಷಿತಾ ಕೊಲೆ ಪ್ರಕರಣ, ಕತ್ತು ಹಿಸುಕಿ, ಶವವನ್ನು ಕಾರಿನ ಡಿಕ್ಕಿಯಲ್ಲಿಟ್ಟು ಪತಿ ಪರಾರಿ
ಹರ್ಷಿತಾ
ನಯನಾ ರಾಜೀವ್
|

Updated on: Nov 20, 2024 | 11:03 AM

Share

ಲಂಡನ್​ನ ಇಲ್ಫೋರ್ಡ್​ನಲ್ಲಿ ಪಾರ್ಕ್​ ಮಾಡಲಾಗಿದ್ದ ಕಾರಿನ ಡಿಕ್ಕಿಯಲ್ಲಿ ಭಾರತೀಯ ಮಹಿಳೆಯ ಶವ ಪತ್ತೆಯಾಗಿದೆ. ಆಕೆಯನ್ನು ಹರ್ಷಿತಾ ಎಂದು ಗುರುತಿಸಲಾಗಿದೆ. ಆಕೆ ಕಳೆದ ಆಗಸ್ಟ್​ನಲ್ಲಿ ಪಂಕಜ್ ಲಂಬಾ ಎಂಬುವವರನ್ನು ಮದುವೆಯಾಗಿದ್ದರು, ಆಕೆ ಹುಟ್ಟಿ ಬೆಳೆದಿದ್ದೆಲ್ಲಾ ದೆಹಲಿಯಲ್ಲೇ. ಮದುವೆಯಾದ ಬಳಿಕ ಏಪ್ರಿಲ್​ನಲ್ಲಿ ಯುಕೆಗೆ ಹೋಗಿದ್ದರು. ಕೆಲವು ದಿನಗಳ ಹಿಂದೆ ನಾರ್ಥಾಂಪ್ಟನ್‌ಶೈರ್‌ನಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು.

ನವೆಂಬರ್ 11 ರಂದು ಮೃತ ದೇಹ ಪತ್ತೆಯಾದ ನಂತರ ಸಂಚಲನ ಉಂಟಾಗಿತ್ತು. ಮೃತದೇಹದ ಮರಣೋತ್ತರ ಪರೀಕ್ಷೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹರ್ಷಿತಾಳನ್ನು ಆಕೆಯ 23 ವರ್ಷದ ಪತಿ ಪಂಕಜ್ ಹತ್ಯೆ ಮಾಡಿರಬಹುದು, ಅವರು ಅಪರಾಧ ಮಾಡಿದ ಕೂಡಲೇ ದೇಶದಿಂದ ಪರಾರಿಯಾಗಿದ್ದರು. ಮನೆಯಿಂದ 145 ಕಿ.ಮೀ ದೂರ ಇಲ್ಬೋರ್ಡ್​ಗೆ ಆಕೆಯ ಶವವನ್ನು ತೆಗೆದುಕೊಂಡು ಹೋಗಲಾಗಿತ್ತು.

ಈ ತಿಂಗಳ ಆರಂಭದಲ್ಲಿ ನಾರ್ಥಾಂಪ್ಟನ್‌ಶೈರ್‌ನಲ್ಲಿ ಹರ್ಷಿತಾಳನ್ನು ಆಕೆಯ ಪತಿ ಪಂಕಜ್ ಲಂಬಾ ಹತ್ಯೆ ಮಾಡಿದ್ದಾರೆ, ಈಗ ದೇಶಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನವೆಂಬರ್ 10ರಂದು ರಾತ್ರಿ ಮನೆಗೆ ಕರೆ ಮಾಡಿದ್ದ ಆಕೆ ತಾನು ಪತಿಗಾಗಿ ಊಟ ಸಿದ್ಧಪಡಿಸುತ್ತಿರುವುದಾಗಿ ಹೇಳಿದ್ದಳು.

ಮತ್ತಷ್ಟು ಓದಿ: ಕುಡಿದ ಮತ್ತಿನಲ್ಲಿ ಕತ್ತಿಯಿಂದ ಪತ್ನಿಯ ಕತ್ತು ಸೀಳಿದ ವ್ಯಕ್ತಿ

ಅದಾದ ಬಳಿಕ ಎರಡು ದಿನಗಳ ಕಾಲ ಫೋನ್ ಸ್ವಿಚ್ಡ್​ ಆಫ್ ಆಗಿತ್ತು. ನವೆಂಬರ್ 13ರಂದು ಆಕೆಯ ಕುಟುಂಬದವರು ನಾರ್ಥಾಂಪ್ಟನ್‌ಶೈರ್ ಪೊಲೀಸರನ್ನು ಸಂಪರ್ಕಿಸಿದರು. ಮನೆಗೆ ಭೇಟಿ ನೀಡಿದ ಅಧಿಕಾರಿಗಳಿಗೆ ಯಾವುದೇ ಕುರುಹು ಪತ್ತೆಯಾಗಿಲ್ಲ, ಬಳಿಕ ತನಿಖೆ ಮುಂದುವರೆಸಿದರು.

ಮರುದಿನ ನವೆಂಬರ್ 14 ರಂದು ಇಲ್ಫೋರ್ಡ್ನಲ್ಲಿ ಆಕೆಯ ಶವ ಪತ್ತೆಯಾಗಿದೆ. ಅಷ್ಟೊತ್ತಿಗಾಗಲೇ ಪಂಕಜ್ ಅಧಿಕಾರಿಗಳ ಕಣ್ತಪ್ಪಿಸಿ ನಾಪತ್ತೆಯಾಗಿದ್ದ. ತನಿಖೆಯಿಂದ ಆಕೆ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗಿದ್ದಳು ಎಂಬುದು ತಿಳಿದುಬಂದಿದೆ. ಈ ಸಂಬಂಧ ಸೆಪ್ಟೆಂಬರ್‌ನಲ್ಲಿ ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಪಂಕಜ್ ಅವರನ್ನು ಮದುವೆಯಾದ ನಂತರ ಅವರು ಏಪ್ರಿಲ್ 2023 ರಲ್ಲಿ ಯುಕೆಗೆ ಹೋಗಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ