AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eiffel Tower: ಐಫೆಲ್ ಟವರ್‌ಗೆ ಬಾಂಬ್ ಬೆದರಿಕೆ ಕರೆ: ಸಾರ್ವಜನಿಕರ ಪ್ರವೇಶ ನಿರ್ಬಂಧ

Bomb threat: ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ ನಗರದಲ್ಲಿರುವ ಐಫೆಲ್ ಟವರ್‌ಗೆ ಶನಿವಾರ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಐಫೆಲ್ ಟವರ್‌ಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

Eiffel Tower: ಐಫೆಲ್ ಟವರ್‌ಗೆ ಬಾಂಬ್ ಬೆದರಿಕೆ ಕರೆ: ಸಾರ್ವಜನಿಕರ ಪ್ರವೇಶ ನಿರ್ಬಂಧ
ಐಫೆಲ್ ಟವರ್‌
ಗಂಗಾಧರ​ ಬ. ಸಾಬೋಜಿ
|

Updated on:Aug 12, 2023 | 9:06 PM

Share

ಪ್ಯಾರಿಸ್‌, ಆಗಸ್ಟ್​ 12: ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ ನಗರದಲ್ಲಿರುವ ಐಫೆಲ್ ಟವರ್‌ಗೆ (Eiffel Tower) ಶನಿವಾರ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಐಫೆಲ್ ಟವರ್‌ಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಐಫೆಲ್ ಟವರ್​ನ ಎಲ್ಲಾ ಮೂರು ಮಹಡಿಗಳನ್ನು ಸದ್ಯ ತೆರವು ಮಾಡಲಾಗಿದೆ. ಬಾಂಬ್​ ನಿಷ್ಕ್ರಿಯ ತಜ್ಞರು ಮತ್ತು ಪೊಲೀಸರ ತಂಡವು ಒಂದು ಮಹಡಿಯಲ್ಲಿ ರೆಸ್ಟೋರೆಂಟ್ ಸೇರಿದಂತೆ ಸುತ್ತಮುತ್ತ ಪ್ರದೇಶದ ಮೇಲೆ ಕಣ್ಗಾವಲು ವಹಿಸಿದ್ದಾರೆ.

ಐಫೆಲ್ ಟವರ್​ನ ದಕ್ಷಿಣ ಭಾಗದಲ್ಲಿ ಪೊಲೀಸ್ ಠಾಣೆ ಇದೆ. ಆವರಣದೊಳಗೆ ಪ್ರವೇಶಿಸಲು ಅನುಮತಿಸುವ ಮೊದಲು ಅಧಿಕಾರಿಗಳು ವಿಡಿಯೋ ಕಣ್ಗಾವಲು ಮತ್ತು ಸಂದರ್ಶಕರ ಭದ್ರತಾ ತಪಾಸಣೆಗಳನ್ನು ಕೈಗೊಳ್ಳುತ್ತಾರೆ.

ಇದನ್ನೂ ಓದಿ: ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರ್-ಉಲ್-ಹಕ್ ಕಾಕರ್ ನೇಮಕ

ಜನವರಿ 1887 ರಲ್ಲಿ ಐಫೆಲ್ ಟವರ್ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಮಾರ್ಚ್ 31, 1889 ರಂದು ಪೂರ್ಣಗೊಳಿಸಲಾಯಿತು. ಇದು 1889 ರ ವಿಶ್ವ ಮೇಳದ ಸಮಯದಲ್ಲಿ ಎರಡು ಮಿಲಿಯನ್ ಪ್ರವಾಸಿಗರು ಭೇಟಿ ನೀಡಿದ್ದರು.

ಎಎನ್​ಐ ಟ್ವೀಟ್​

ಬಾಂಬ್ ಬೆದರಿಕೆಯ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಪ್ಯಾರಿಸ್‌ನಲ್ಲಿರುವ ಐಫೆಲ್ ಟವರ್ ಅನ್ನು ಶನಿವಾರ ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದೆ ಎಂದು ಫ್ರೆಂಚ್ ಪೊಲೀಸ್ ಮೂಲವೊಂದು ಮಾಹಿತಿ ನೀಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾವೈರಸ್​​ನ ಹೊಸ ತಳಿ ಎರಿಸ್​​ನ್ನು ‘ಕುತೂಹಲಕಾರಿ ರೂಪಾಂತರಿ’ ಎಂದು ವರ್ಗೀಕರಿಸಿದ ವಿಶ್ವ ಆರೋಗ್ಯ ಸಂಸ್ಥೆ

ಘಟನೆಯ ಎರಡು ಗಂಟೆಗಳ ನಂತರ ಪ್ರವಾಸಿಗರನ್ನು ಮತ್ತೆ ಐಫೆಲ್ ಟವರ್‌ ಭೇಟಿಗೆ ಅನುಮತಿಸಲಾಗಿದೆ ಎಂದು ಫ್ರೆಂಚ್ ಪೊಲೀಸ್ ಮೂಲವನ್ನು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ಇದು ತಪ್ಪು ಕರೆ, ಪ್ರವಾಸಿಗರನ್ನು ಮತ್ತೆ ಐಫೆಲ್ ಟವರ್​ಗೆ ಭೇಟಿ ನೀಡಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮತ್ತಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:50 pm, Sat, 12 August 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?