AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eiffel Tower: ಐಫೆಲ್ ಟವರ್‌ಗೆ ಬಾಂಬ್ ಬೆದರಿಕೆ ಕರೆ: ಸಾರ್ವಜನಿಕರ ಪ್ರವೇಶ ನಿರ್ಬಂಧ

Bomb threat: ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ ನಗರದಲ್ಲಿರುವ ಐಫೆಲ್ ಟವರ್‌ಗೆ ಶನಿವಾರ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಐಫೆಲ್ ಟವರ್‌ಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

Eiffel Tower: ಐಫೆಲ್ ಟವರ್‌ಗೆ ಬಾಂಬ್ ಬೆದರಿಕೆ ಕರೆ: ಸಾರ್ವಜನಿಕರ ಪ್ರವೇಶ ನಿರ್ಬಂಧ
ಐಫೆಲ್ ಟವರ್‌
ಗಂಗಾಧರ​ ಬ. ಸಾಬೋಜಿ
|

Updated on:Aug 12, 2023 | 9:06 PM

Share

ಪ್ಯಾರಿಸ್‌, ಆಗಸ್ಟ್​ 12: ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ ನಗರದಲ್ಲಿರುವ ಐಫೆಲ್ ಟವರ್‌ಗೆ (Eiffel Tower) ಶನಿವಾರ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಐಫೆಲ್ ಟವರ್‌ಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಐಫೆಲ್ ಟವರ್​ನ ಎಲ್ಲಾ ಮೂರು ಮಹಡಿಗಳನ್ನು ಸದ್ಯ ತೆರವು ಮಾಡಲಾಗಿದೆ. ಬಾಂಬ್​ ನಿಷ್ಕ್ರಿಯ ತಜ್ಞರು ಮತ್ತು ಪೊಲೀಸರ ತಂಡವು ಒಂದು ಮಹಡಿಯಲ್ಲಿ ರೆಸ್ಟೋರೆಂಟ್ ಸೇರಿದಂತೆ ಸುತ್ತಮುತ್ತ ಪ್ರದೇಶದ ಮೇಲೆ ಕಣ್ಗಾವಲು ವಹಿಸಿದ್ದಾರೆ.

ಐಫೆಲ್ ಟವರ್​ನ ದಕ್ಷಿಣ ಭಾಗದಲ್ಲಿ ಪೊಲೀಸ್ ಠಾಣೆ ಇದೆ. ಆವರಣದೊಳಗೆ ಪ್ರವೇಶಿಸಲು ಅನುಮತಿಸುವ ಮೊದಲು ಅಧಿಕಾರಿಗಳು ವಿಡಿಯೋ ಕಣ್ಗಾವಲು ಮತ್ತು ಸಂದರ್ಶಕರ ಭದ್ರತಾ ತಪಾಸಣೆಗಳನ್ನು ಕೈಗೊಳ್ಳುತ್ತಾರೆ.

ಇದನ್ನೂ ಓದಿ: ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರ್-ಉಲ್-ಹಕ್ ಕಾಕರ್ ನೇಮಕ

ಜನವರಿ 1887 ರಲ್ಲಿ ಐಫೆಲ್ ಟವರ್ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಮಾರ್ಚ್ 31, 1889 ರಂದು ಪೂರ್ಣಗೊಳಿಸಲಾಯಿತು. ಇದು 1889 ರ ವಿಶ್ವ ಮೇಳದ ಸಮಯದಲ್ಲಿ ಎರಡು ಮಿಲಿಯನ್ ಪ್ರವಾಸಿಗರು ಭೇಟಿ ನೀಡಿದ್ದರು.

ಎಎನ್​ಐ ಟ್ವೀಟ್​

ಬಾಂಬ್ ಬೆದರಿಕೆಯ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಪ್ಯಾರಿಸ್‌ನಲ್ಲಿರುವ ಐಫೆಲ್ ಟವರ್ ಅನ್ನು ಶನಿವಾರ ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದೆ ಎಂದು ಫ್ರೆಂಚ್ ಪೊಲೀಸ್ ಮೂಲವೊಂದು ಮಾಹಿತಿ ನೀಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾವೈರಸ್​​ನ ಹೊಸ ತಳಿ ಎರಿಸ್​​ನ್ನು ‘ಕುತೂಹಲಕಾರಿ ರೂಪಾಂತರಿ’ ಎಂದು ವರ್ಗೀಕರಿಸಿದ ವಿಶ್ವ ಆರೋಗ್ಯ ಸಂಸ್ಥೆ

ಘಟನೆಯ ಎರಡು ಗಂಟೆಗಳ ನಂತರ ಪ್ರವಾಸಿಗರನ್ನು ಮತ್ತೆ ಐಫೆಲ್ ಟವರ್‌ ಭೇಟಿಗೆ ಅನುಮತಿಸಲಾಗಿದೆ ಎಂದು ಫ್ರೆಂಚ್ ಪೊಲೀಸ್ ಮೂಲವನ್ನು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ಇದು ತಪ್ಪು ಕರೆ, ಪ್ರವಾಸಿಗರನ್ನು ಮತ್ತೆ ಐಫೆಲ್ ಟವರ್​ಗೆ ಭೇಟಿ ನೀಡಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮತ್ತಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:50 pm, Sat, 12 August 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು