AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eiffel Tower: ಐಫೆಲ್ ಟವರ್‌ಗೆ ಬಾಂಬ್ ಬೆದರಿಕೆ ಕರೆ: ಸಾರ್ವಜನಿಕರ ಪ್ರವೇಶ ನಿರ್ಬಂಧ

Bomb threat: ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ ನಗರದಲ್ಲಿರುವ ಐಫೆಲ್ ಟವರ್‌ಗೆ ಶನಿವಾರ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಐಫೆಲ್ ಟವರ್‌ಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

Eiffel Tower: ಐಫೆಲ್ ಟವರ್‌ಗೆ ಬಾಂಬ್ ಬೆದರಿಕೆ ಕರೆ: ಸಾರ್ವಜನಿಕರ ಪ್ರವೇಶ ನಿರ್ಬಂಧ
ಐಫೆಲ್ ಟವರ್‌
ಗಂಗಾಧರ​ ಬ. ಸಾಬೋಜಿ
|

Updated on:Aug 12, 2023 | 9:06 PM

Share

ಪ್ಯಾರಿಸ್‌, ಆಗಸ್ಟ್​ 12: ವಿಶ್ವದ ಅತಿ ಹೆಚ್ಚು ಭೇಟಿ ನೀಡುವ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ ನಗರದಲ್ಲಿರುವ ಐಫೆಲ್ ಟವರ್‌ಗೆ (Eiffel Tower) ಶನಿವಾರ ಬಾಂಬ್ ಬೆದರಿಕೆ ಕರೆ ಬಂದ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಐಫೆಲ್ ಟವರ್‌ಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಐಫೆಲ್ ಟವರ್​ನ ಎಲ್ಲಾ ಮೂರು ಮಹಡಿಗಳನ್ನು ಸದ್ಯ ತೆರವು ಮಾಡಲಾಗಿದೆ. ಬಾಂಬ್​ ನಿಷ್ಕ್ರಿಯ ತಜ್ಞರು ಮತ್ತು ಪೊಲೀಸರ ತಂಡವು ಒಂದು ಮಹಡಿಯಲ್ಲಿ ರೆಸ್ಟೋರೆಂಟ್ ಸೇರಿದಂತೆ ಸುತ್ತಮುತ್ತ ಪ್ರದೇಶದ ಮೇಲೆ ಕಣ್ಗಾವಲು ವಹಿಸಿದ್ದಾರೆ.

ಐಫೆಲ್ ಟವರ್​ನ ದಕ್ಷಿಣ ಭಾಗದಲ್ಲಿ ಪೊಲೀಸ್ ಠಾಣೆ ಇದೆ. ಆವರಣದೊಳಗೆ ಪ್ರವೇಶಿಸಲು ಅನುಮತಿಸುವ ಮೊದಲು ಅಧಿಕಾರಿಗಳು ವಿಡಿಯೋ ಕಣ್ಗಾವಲು ಮತ್ತು ಸಂದರ್ಶಕರ ಭದ್ರತಾ ತಪಾಸಣೆಗಳನ್ನು ಕೈಗೊಳ್ಳುತ್ತಾರೆ.

ಇದನ್ನೂ ಓದಿ: ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರ್-ಉಲ್-ಹಕ್ ಕಾಕರ್ ನೇಮಕ

ಜನವರಿ 1887 ರಲ್ಲಿ ಐಫೆಲ್ ಟವರ್ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದು, ಮಾರ್ಚ್ 31, 1889 ರಂದು ಪೂರ್ಣಗೊಳಿಸಲಾಯಿತು. ಇದು 1889 ರ ವಿಶ್ವ ಮೇಳದ ಸಮಯದಲ್ಲಿ ಎರಡು ಮಿಲಿಯನ್ ಪ್ರವಾಸಿಗರು ಭೇಟಿ ನೀಡಿದ್ದರು.

ಎಎನ್​ಐ ಟ್ವೀಟ್​

ಬಾಂಬ್ ಬೆದರಿಕೆಯ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಪ್ಯಾರಿಸ್‌ನಲ್ಲಿರುವ ಐಫೆಲ್ ಟವರ್ ಅನ್ನು ಶನಿವಾರ ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದೆ ಎಂದು ಫ್ರೆಂಚ್ ಪೊಲೀಸ್ ಮೂಲವೊಂದು ಮಾಹಿತಿ ನೀಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾವೈರಸ್​​ನ ಹೊಸ ತಳಿ ಎರಿಸ್​​ನ್ನು ‘ಕುತೂಹಲಕಾರಿ ರೂಪಾಂತರಿ’ ಎಂದು ವರ್ಗೀಕರಿಸಿದ ವಿಶ್ವ ಆರೋಗ್ಯ ಸಂಸ್ಥೆ

ಘಟನೆಯ ಎರಡು ಗಂಟೆಗಳ ನಂತರ ಪ್ರವಾಸಿಗರನ್ನು ಮತ್ತೆ ಐಫೆಲ್ ಟವರ್‌ ಭೇಟಿಗೆ ಅನುಮತಿಸಲಾಗಿದೆ ಎಂದು ಫ್ರೆಂಚ್ ಪೊಲೀಸ್ ಮೂಲವನ್ನು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ಇದು ತಪ್ಪು ಕರೆ, ಪ್ರವಾಸಿಗರನ್ನು ಮತ್ತೆ ಐಫೆಲ್ ಟವರ್​ಗೆ ಭೇಟಿ ನೀಡಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮತ್ತಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:50 pm, Sat, 12 August 23

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್