AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಭಾರತದ ಮೂಲಕ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನಕ್ಕೆ ಬಾಂಬ್ ಬೆದರಿಕೆ, ಭೂಸ್ಪರ್ಶಕ್ಕೆ ಅನುಮತಿ ನಿರಾಕರಣೆ

ಕ್ಷಣಕ್ಷಣದ ಬೆಳವಣಿಗೆಯನ್ನು ಭಾರತೀಯ ವಾಯುಪಡೆ ಗಮನಿಸುತ್ತಿದೆ.

Breaking News: ಭಾರತದ ಮೂಲಕ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನಕ್ಕೆ ಬಾಂಬ್ ಬೆದರಿಕೆ, ಭೂಸ್ಪರ್ಶಕ್ಕೆ ಅನುಮತಿ ನಿರಾಕರಣೆ
ವಿಮಾನ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Oct 03, 2022 | 12:35 PM

Share

ದೆಹಲಿ: ಇರಾನ್​ನಿಂದ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ (Bomb Threat) ಇರಿಸಲಾಗಿದೆ ಎಂದು ಚೀನಾದ ಭದ್ರತಾ ಸಂಸ್ಥೆಗಳು ಭಾರತ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿವೆ. ವಿಮಾನವು ಭಾರತದ ವಾಯುಗಡಿಯಲ್ಲಿ (Indian Air Space) ಇದ್ದ ಸಂದರ್ಭದಲ್ಲಿ ಬಾಂಬ್​ ಇರುವ ಮಾಹಿತಿ ರವಾನೆಯಾದ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯ (Indian Air Force) ಯುದ್ಧ ವಿಮಾನಗಳನ್ನು ಪ್ರಯಾಣಿಕರ ವಿಮಾನದ ರಕ್ಷಣೆಗಾಗಿ ನಿಯೋಜಿಸಲಾಗಿದೆ ಎಂದು ಎಎನ್​ಐ ಸುದ್ದಿಸಂಸ್ಥೆಯು ವರದಿ ಮಾಡಿದೆ. ಪ್ರಸ್ತುತ ಪ್ರಯಾಣಿಕರ ವಿಮಾನವು ಚೀನಾದತ್ತ ಹಾರುತ್ತಿದ್ದು, ಕ್ಷಣಕ್ಷಣದ ಬೆಳವಣಿಗೆಯನ್ನು ಭಾರತೀಯ ವಾಯುಪಡೆ ಗಮನಿಸುತ್ತಿದೆ.

ಭಾರತದ ವಾಯುಮಾರ್ಗದ ಮೂಲಕ ಇರಾನ್​ನಿಂದ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ ಇರಿಸಿರುವ ಬೆದರಿಕೆ ಕೇಳಿಬಂದಿದೆ. ವಿಷಯ ತಿಳಿದ ತಕ್ಷಣ ಜೈಪುರ ಮತ್ತು ಆಗ್ರಾ ವಾಯುನೆಲೆಯಲ್ಲಿರುವ ಭಾರತೀಯ ವಾಯುಪಡೆಯ ಯುದ್ಧವಿಮಾನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಯಿತು. ಪ್ರಯಾಣಿಕರ ವಿಮಾನದ ರಕ್ಷಣೆಗಾಗಿ ಧಾವಿಸಲು ವಾಯುಪಡೆಯು ತಾಲೀಮು ಆರಂಭಿಸಿತು. ಇರಾನ್​ನ ಪ್ರಯಾಣಿಕರ ವಿಮಾನವನ್ನು ದೆಹಲಿ ಅಥವಾ ಬೇರೆ ಯಾವುದೇ ವಿಮಾನ ನಿಲ್ದಾಣದಲ್ಲಿ ಇಳಿಸಲು ಅವಕಾಶ ಮಾಡಿಕೊಡಬೇಕು ಎನ್ನುವ ಮನವಿಯನ್ನು ವಿಮಾನ ಸಂಚಾರ ನಿಯಂತ್ರಕರು ತಾಂತ್ರಿಕ ಕಾರಣಗಳಿಂದಾಗಿ ನಿರಾಕರಿಸಿದರು.

ವಿಮಾನವು ಇರಾನ್​ ರಾಜಧಾನಿ ತೆಹರಾನ್​ನಿಂದ ಚೀನಾದ ಗುಂಝ್​ಹೌ ನಗರಕ್ಕೆ ತೆರಳುತ್ತಿತ್ತು ಎಂದು ವಿಮಾನಗಳ ಹಾರಾಟವನ್ನು ತೋರಿಸುವ ಫ್ಲೈಟ್​ರಾಡಾರ್​ ಮಾಹಿತಿ ನೀಡಿದೆ. ದೆಹಲಿ ಮತ್ತು ಜೈಪುರ ವಿಮಾನ ನಿಲ್ದಾಣಗಳಲ್ಲಿ ವಿಮಾನದ ತುರ್ತು ಭೂಸ್ಪರ್ಶಕ್ಕೆ ಅನುಮತಿ ನಿರಾಕರಿಸಿದ ನಂತರ ವಿಮಾನವು ಚೀನಾದ ವಾಯುಗಡಿ ಪ್ರವೇಶಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್​ಡಿಟಿವಿ ಜಾಲತಾಣವು ವರದಿ ಮಾಡಿದೆ.

ಮುಂಜಾನೆ 9.20ಕ್ಕೆ ವಿಮಾನದಲ್ಲಿ ಬಾಂಬ್​ ಇರಿಸಿರುವ ಬಗ್ಗೆ ಮಾಹಿತಿಯನ್ನು ಮೊದಲ ಬಾರಿಗೆ ಸ್ವೀಕರಿಸಲಾಯಿತು ಎಂದು ದೆಹಲಿ ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ. ವಿಮಾನದಲ್ಲಿ ಬಾಂಬ್ ಇರಿಸಿರುವ ಬೆದರಿಕೆ ಕೇಳಿ ಬಂದ ತಕ್ಷಣ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಯಿತು. ವಿಮಾನವನ್ನು ದೆಹಲಿಯಲ್ಲಿ ಇಳಿಸಲು ಅನುಮತಿ ನಿರಾಕರಿಸಿದ ನಂತರ ಜೈಪುರಕ್ಕೆ ವಿಮಾನದ ಮಾರ್ಗವನ್ನು ಬದಲಿಸಲಾಯಿತು. ನಂತರ ಅಲ್ಲಿ ವಿಮಾನ ಇಳಿಸಲು ಪೈಲಟ್​ಗಳು ಒಪ್ಪಲಿಲ್ಲ.

Published On - 11:46 am, Mon, 3 October 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ