AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಭಾರತದ ಮೂಲಕ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನಕ್ಕೆ ಬಾಂಬ್ ಬೆದರಿಕೆ, ಭೂಸ್ಪರ್ಶಕ್ಕೆ ಅನುಮತಿ ನಿರಾಕರಣೆ

ಕ್ಷಣಕ್ಷಣದ ಬೆಳವಣಿಗೆಯನ್ನು ಭಾರತೀಯ ವಾಯುಪಡೆ ಗಮನಿಸುತ್ತಿದೆ.

Breaking News: ಭಾರತದ ಮೂಲಕ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನಕ್ಕೆ ಬಾಂಬ್ ಬೆದರಿಕೆ, ಭೂಸ್ಪರ್ಶಕ್ಕೆ ಅನುಮತಿ ನಿರಾಕರಣೆ
ವಿಮಾನ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Oct 03, 2022 | 12:35 PM

Share

ದೆಹಲಿ: ಇರಾನ್​ನಿಂದ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ (Bomb Threat) ಇರಿಸಲಾಗಿದೆ ಎಂದು ಚೀನಾದ ಭದ್ರತಾ ಸಂಸ್ಥೆಗಳು ಭಾರತ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿವೆ. ವಿಮಾನವು ಭಾರತದ ವಾಯುಗಡಿಯಲ್ಲಿ (Indian Air Space) ಇದ್ದ ಸಂದರ್ಭದಲ್ಲಿ ಬಾಂಬ್​ ಇರುವ ಮಾಹಿತಿ ರವಾನೆಯಾದ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯ (Indian Air Force) ಯುದ್ಧ ವಿಮಾನಗಳನ್ನು ಪ್ರಯಾಣಿಕರ ವಿಮಾನದ ರಕ್ಷಣೆಗಾಗಿ ನಿಯೋಜಿಸಲಾಗಿದೆ ಎಂದು ಎಎನ್​ಐ ಸುದ್ದಿಸಂಸ್ಥೆಯು ವರದಿ ಮಾಡಿದೆ. ಪ್ರಸ್ತುತ ಪ್ರಯಾಣಿಕರ ವಿಮಾನವು ಚೀನಾದತ್ತ ಹಾರುತ್ತಿದ್ದು, ಕ್ಷಣಕ್ಷಣದ ಬೆಳವಣಿಗೆಯನ್ನು ಭಾರತೀಯ ವಾಯುಪಡೆ ಗಮನಿಸುತ್ತಿದೆ.

ಭಾರತದ ವಾಯುಮಾರ್ಗದ ಮೂಲಕ ಇರಾನ್​ನಿಂದ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ ಇರಿಸಿರುವ ಬೆದರಿಕೆ ಕೇಳಿಬಂದಿದೆ. ವಿಷಯ ತಿಳಿದ ತಕ್ಷಣ ಜೈಪುರ ಮತ್ತು ಆಗ್ರಾ ವಾಯುನೆಲೆಯಲ್ಲಿರುವ ಭಾರತೀಯ ವಾಯುಪಡೆಯ ಯುದ್ಧವಿಮಾನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಯಿತು. ಪ್ರಯಾಣಿಕರ ವಿಮಾನದ ರಕ್ಷಣೆಗಾಗಿ ಧಾವಿಸಲು ವಾಯುಪಡೆಯು ತಾಲೀಮು ಆರಂಭಿಸಿತು. ಇರಾನ್​ನ ಪ್ರಯಾಣಿಕರ ವಿಮಾನವನ್ನು ದೆಹಲಿ ಅಥವಾ ಬೇರೆ ಯಾವುದೇ ವಿಮಾನ ನಿಲ್ದಾಣದಲ್ಲಿ ಇಳಿಸಲು ಅವಕಾಶ ಮಾಡಿಕೊಡಬೇಕು ಎನ್ನುವ ಮನವಿಯನ್ನು ವಿಮಾನ ಸಂಚಾರ ನಿಯಂತ್ರಕರು ತಾಂತ್ರಿಕ ಕಾರಣಗಳಿಂದಾಗಿ ನಿರಾಕರಿಸಿದರು.

ವಿಮಾನವು ಇರಾನ್​ ರಾಜಧಾನಿ ತೆಹರಾನ್​ನಿಂದ ಚೀನಾದ ಗುಂಝ್​ಹೌ ನಗರಕ್ಕೆ ತೆರಳುತ್ತಿತ್ತು ಎಂದು ವಿಮಾನಗಳ ಹಾರಾಟವನ್ನು ತೋರಿಸುವ ಫ್ಲೈಟ್​ರಾಡಾರ್​ ಮಾಹಿತಿ ನೀಡಿದೆ. ದೆಹಲಿ ಮತ್ತು ಜೈಪುರ ವಿಮಾನ ನಿಲ್ದಾಣಗಳಲ್ಲಿ ವಿಮಾನದ ತುರ್ತು ಭೂಸ್ಪರ್ಶಕ್ಕೆ ಅನುಮತಿ ನಿರಾಕರಿಸಿದ ನಂತರ ವಿಮಾನವು ಚೀನಾದ ವಾಯುಗಡಿ ಪ್ರವೇಶಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್​ಡಿಟಿವಿ ಜಾಲತಾಣವು ವರದಿ ಮಾಡಿದೆ.

ಮುಂಜಾನೆ 9.20ಕ್ಕೆ ವಿಮಾನದಲ್ಲಿ ಬಾಂಬ್​ ಇರಿಸಿರುವ ಬಗ್ಗೆ ಮಾಹಿತಿಯನ್ನು ಮೊದಲ ಬಾರಿಗೆ ಸ್ವೀಕರಿಸಲಾಯಿತು ಎಂದು ದೆಹಲಿ ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ. ವಿಮಾನದಲ್ಲಿ ಬಾಂಬ್ ಇರಿಸಿರುವ ಬೆದರಿಕೆ ಕೇಳಿ ಬಂದ ತಕ್ಷಣ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಯಿತು. ವಿಮಾನವನ್ನು ದೆಹಲಿಯಲ್ಲಿ ಇಳಿಸಲು ಅನುಮತಿ ನಿರಾಕರಿಸಿದ ನಂತರ ಜೈಪುರಕ್ಕೆ ವಿಮಾನದ ಮಾರ್ಗವನ್ನು ಬದಲಿಸಲಾಯಿತು. ನಂತರ ಅಲ್ಲಿ ವಿಮಾನ ಇಳಿಸಲು ಪೈಲಟ್​ಗಳು ಒಪ್ಪಲಿಲ್ಲ.

Published On - 11:46 am, Mon, 3 October 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ