AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಭಾರತದ ಮೂಲಕ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನಕ್ಕೆ ಬಾಂಬ್ ಬೆದರಿಕೆ, ಭೂಸ್ಪರ್ಶಕ್ಕೆ ಅನುಮತಿ ನಿರಾಕರಣೆ

ಕ್ಷಣಕ್ಷಣದ ಬೆಳವಣಿಗೆಯನ್ನು ಭಾರತೀಯ ವಾಯುಪಡೆ ಗಮನಿಸುತ್ತಿದೆ.

Breaking News: ಭಾರತದ ಮೂಲಕ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನಕ್ಕೆ ಬಾಂಬ್ ಬೆದರಿಕೆ, ಭೂಸ್ಪರ್ಶಕ್ಕೆ ಅನುಮತಿ ನಿರಾಕರಣೆ
ವಿಮಾನ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Oct 03, 2022 | 12:35 PM

Share

ದೆಹಲಿ: ಇರಾನ್​ನಿಂದ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ (Bomb Threat) ಇರಿಸಲಾಗಿದೆ ಎಂದು ಚೀನಾದ ಭದ್ರತಾ ಸಂಸ್ಥೆಗಳು ಭಾರತ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿವೆ. ವಿಮಾನವು ಭಾರತದ ವಾಯುಗಡಿಯಲ್ಲಿ (Indian Air Space) ಇದ್ದ ಸಂದರ್ಭದಲ್ಲಿ ಬಾಂಬ್​ ಇರುವ ಮಾಹಿತಿ ರವಾನೆಯಾದ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯ (Indian Air Force) ಯುದ್ಧ ವಿಮಾನಗಳನ್ನು ಪ್ರಯಾಣಿಕರ ವಿಮಾನದ ರಕ್ಷಣೆಗಾಗಿ ನಿಯೋಜಿಸಲಾಗಿದೆ ಎಂದು ಎಎನ್​ಐ ಸುದ್ದಿಸಂಸ್ಥೆಯು ವರದಿ ಮಾಡಿದೆ. ಪ್ರಸ್ತುತ ಪ್ರಯಾಣಿಕರ ವಿಮಾನವು ಚೀನಾದತ್ತ ಹಾರುತ್ತಿದ್ದು, ಕ್ಷಣಕ್ಷಣದ ಬೆಳವಣಿಗೆಯನ್ನು ಭಾರತೀಯ ವಾಯುಪಡೆ ಗಮನಿಸುತ್ತಿದೆ.

ಭಾರತದ ವಾಯುಮಾರ್ಗದ ಮೂಲಕ ಇರಾನ್​ನಿಂದ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ ಇರಿಸಿರುವ ಬೆದರಿಕೆ ಕೇಳಿಬಂದಿದೆ. ವಿಷಯ ತಿಳಿದ ತಕ್ಷಣ ಜೈಪುರ ಮತ್ತು ಆಗ್ರಾ ವಾಯುನೆಲೆಯಲ್ಲಿರುವ ಭಾರತೀಯ ವಾಯುಪಡೆಯ ಯುದ್ಧವಿಮಾನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಯಿತು. ಪ್ರಯಾಣಿಕರ ವಿಮಾನದ ರಕ್ಷಣೆಗಾಗಿ ಧಾವಿಸಲು ವಾಯುಪಡೆಯು ತಾಲೀಮು ಆರಂಭಿಸಿತು. ಇರಾನ್​ನ ಪ್ರಯಾಣಿಕರ ವಿಮಾನವನ್ನು ದೆಹಲಿ ಅಥವಾ ಬೇರೆ ಯಾವುದೇ ವಿಮಾನ ನಿಲ್ದಾಣದಲ್ಲಿ ಇಳಿಸಲು ಅವಕಾಶ ಮಾಡಿಕೊಡಬೇಕು ಎನ್ನುವ ಮನವಿಯನ್ನು ವಿಮಾನ ಸಂಚಾರ ನಿಯಂತ್ರಕರು ತಾಂತ್ರಿಕ ಕಾರಣಗಳಿಂದಾಗಿ ನಿರಾಕರಿಸಿದರು.

ವಿಮಾನವು ಇರಾನ್​ ರಾಜಧಾನಿ ತೆಹರಾನ್​ನಿಂದ ಚೀನಾದ ಗುಂಝ್​ಹೌ ನಗರಕ್ಕೆ ತೆರಳುತ್ತಿತ್ತು ಎಂದು ವಿಮಾನಗಳ ಹಾರಾಟವನ್ನು ತೋರಿಸುವ ಫ್ಲೈಟ್​ರಾಡಾರ್​ ಮಾಹಿತಿ ನೀಡಿದೆ. ದೆಹಲಿ ಮತ್ತು ಜೈಪುರ ವಿಮಾನ ನಿಲ್ದಾಣಗಳಲ್ಲಿ ವಿಮಾನದ ತುರ್ತು ಭೂಸ್ಪರ್ಶಕ್ಕೆ ಅನುಮತಿ ನಿರಾಕರಿಸಿದ ನಂತರ ವಿಮಾನವು ಚೀನಾದ ವಾಯುಗಡಿ ಪ್ರವೇಶಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್​ಡಿಟಿವಿ ಜಾಲತಾಣವು ವರದಿ ಮಾಡಿದೆ.

ಮುಂಜಾನೆ 9.20ಕ್ಕೆ ವಿಮಾನದಲ್ಲಿ ಬಾಂಬ್​ ಇರಿಸಿರುವ ಬಗ್ಗೆ ಮಾಹಿತಿಯನ್ನು ಮೊದಲ ಬಾರಿಗೆ ಸ್ವೀಕರಿಸಲಾಯಿತು ಎಂದು ದೆಹಲಿ ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ. ವಿಮಾನದಲ್ಲಿ ಬಾಂಬ್ ಇರಿಸಿರುವ ಬೆದರಿಕೆ ಕೇಳಿ ಬಂದ ತಕ್ಷಣ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಯಿತು. ವಿಮಾನವನ್ನು ದೆಹಲಿಯಲ್ಲಿ ಇಳಿಸಲು ಅನುಮತಿ ನಿರಾಕರಿಸಿದ ನಂತರ ಜೈಪುರಕ್ಕೆ ವಿಮಾನದ ಮಾರ್ಗವನ್ನು ಬದಲಿಸಲಾಯಿತು. ನಂತರ ಅಲ್ಲಿ ವಿಮಾನ ಇಳಿಸಲು ಪೈಲಟ್​ಗಳು ಒಪ್ಪಲಿಲ್ಲ.

Published On - 11:46 am, Mon, 3 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ