AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಭಾರತದ ಮೂಲಕ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನಕ್ಕೆ ಬಾಂಬ್ ಬೆದರಿಕೆ, ಭೂಸ್ಪರ್ಶಕ್ಕೆ ಅನುಮತಿ ನಿರಾಕರಣೆ

ಕ್ಷಣಕ್ಷಣದ ಬೆಳವಣಿಗೆಯನ್ನು ಭಾರತೀಯ ವಾಯುಪಡೆ ಗಮನಿಸುತ್ತಿದೆ.

Breaking News: ಭಾರತದ ಮೂಲಕ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನಕ್ಕೆ ಬಾಂಬ್ ಬೆದರಿಕೆ, ಭೂಸ್ಪರ್ಶಕ್ಕೆ ಅನುಮತಿ ನಿರಾಕರಣೆ
ವಿಮಾನ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Oct 03, 2022 | 12:35 PM

Share

ದೆಹಲಿ: ಇರಾನ್​ನಿಂದ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ (Bomb Threat) ಇರಿಸಲಾಗಿದೆ ಎಂದು ಚೀನಾದ ಭದ್ರತಾ ಸಂಸ್ಥೆಗಳು ಭಾರತ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿವೆ. ವಿಮಾನವು ಭಾರತದ ವಾಯುಗಡಿಯಲ್ಲಿ (Indian Air Space) ಇದ್ದ ಸಂದರ್ಭದಲ್ಲಿ ಬಾಂಬ್​ ಇರುವ ಮಾಹಿತಿ ರವಾನೆಯಾದ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯ (Indian Air Force) ಯುದ್ಧ ವಿಮಾನಗಳನ್ನು ಪ್ರಯಾಣಿಕರ ವಿಮಾನದ ರಕ್ಷಣೆಗಾಗಿ ನಿಯೋಜಿಸಲಾಗಿದೆ ಎಂದು ಎಎನ್​ಐ ಸುದ್ದಿಸಂಸ್ಥೆಯು ವರದಿ ಮಾಡಿದೆ. ಪ್ರಸ್ತುತ ಪ್ರಯಾಣಿಕರ ವಿಮಾನವು ಚೀನಾದತ್ತ ಹಾರುತ್ತಿದ್ದು, ಕ್ಷಣಕ್ಷಣದ ಬೆಳವಣಿಗೆಯನ್ನು ಭಾರತೀಯ ವಾಯುಪಡೆ ಗಮನಿಸುತ್ತಿದೆ.

ಭಾರತದ ವಾಯುಮಾರ್ಗದ ಮೂಲಕ ಇರಾನ್​ನಿಂದ ಚೀನಾಕ್ಕೆ ಹೋಗುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ ಇರಿಸಿರುವ ಬೆದರಿಕೆ ಕೇಳಿಬಂದಿದೆ. ವಿಷಯ ತಿಳಿದ ತಕ್ಷಣ ಜೈಪುರ ಮತ್ತು ಆಗ್ರಾ ವಾಯುನೆಲೆಯಲ್ಲಿರುವ ಭಾರತೀಯ ವಾಯುಪಡೆಯ ಯುದ್ಧವಿಮಾನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಯಿತು. ಪ್ರಯಾಣಿಕರ ವಿಮಾನದ ರಕ್ಷಣೆಗಾಗಿ ಧಾವಿಸಲು ವಾಯುಪಡೆಯು ತಾಲೀಮು ಆರಂಭಿಸಿತು. ಇರಾನ್​ನ ಪ್ರಯಾಣಿಕರ ವಿಮಾನವನ್ನು ದೆಹಲಿ ಅಥವಾ ಬೇರೆ ಯಾವುದೇ ವಿಮಾನ ನಿಲ್ದಾಣದಲ್ಲಿ ಇಳಿಸಲು ಅವಕಾಶ ಮಾಡಿಕೊಡಬೇಕು ಎನ್ನುವ ಮನವಿಯನ್ನು ವಿಮಾನ ಸಂಚಾರ ನಿಯಂತ್ರಕರು ತಾಂತ್ರಿಕ ಕಾರಣಗಳಿಂದಾಗಿ ನಿರಾಕರಿಸಿದರು.

ವಿಮಾನವು ಇರಾನ್​ ರಾಜಧಾನಿ ತೆಹರಾನ್​ನಿಂದ ಚೀನಾದ ಗುಂಝ್​ಹೌ ನಗರಕ್ಕೆ ತೆರಳುತ್ತಿತ್ತು ಎಂದು ವಿಮಾನಗಳ ಹಾರಾಟವನ್ನು ತೋರಿಸುವ ಫ್ಲೈಟ್​ರಾಡಾರ್​ ಮಾಹಿತಿ ನೀಡಿದೆ. ದೆಹಲಿ ಮತ್ತು ಜೈಪುರ ವಿಮಾನ ನಿಲ್ದಾಣಗಳಲ್ಲಿ ವಿಮಾನದ ತುರ್ತು ಭೂಸ್ಪರ್ಶಕ್ಕೆ ಅನುಮತಿ ನಿರಾಕರಿಸಿದ ನಂತರ ವಿಮಾನವು ಚೀನಾದ ವಾಯುಗಡಿ ಪ್ರವೇಶಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್​ಡಿಟಿವಿ ಜಾಲತಾಣವು ವರದಿ ಮಾಡಿದೆ.

ಮುಂಜಾನೆ 9.20ಕ್ಕೆ ವಿಮಾನದಲ್ಲಿ ಬಾಂಬ್​ ಇರಿಸಿರುವ ಬಗ್ಗೆ ಮಾಹಿತಿಯನ್ನು ಮೊದಲ ಬಾರಿಗೆ ಸ್ವೀಕರಿಸಲಾಯಿತು ಎಂದು ದೆಹಲಿ ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ. ವಿಮಾನದಲ್ಲಿ ಬಾಂಬ್ ಇರಿಸಿರುವ ಬೆದರಿಕೆ ಕೇಳಿ ಬಂದ ತಕ್ಷಣ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಯಿತು. ವಿಮಾನವನ್ನು ದೆಹಲಿಯಲ್ಲಿ ಇಳಿಸಲು ಅನುಮತಿ ನಿರಾಕರಿಸಿದ ನಂತರ ಜೈಪುರಕ್ಕೆ ವಿಮಾನದ ಮಾರ್ಗವನ್ನು ಬದಲಿಸಲಾಯಿತು. ನಂತರ ಅಲ್ಲಿ ವಿಮಾನ ಇಳಿಸಲು ಪೈಲಟ್​ಗಳು ಒಪ್ಪಲಿಲ್ಲ.

Published On - 11:46 am, Mon, 3 October 22

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು