AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧೀಜಿ ಬಳಸಿದ ಬಟ್ಟಲು, ಚಮಚ ಹರಾಜಿಗಿದೆ.. ಆರಂಭಿಕ ಬೆಲೆ ಕೇಳಿದರೆ ಹೌಹಾರುತ್ತೀರಿ!

ಮಹಾತ್ಮ ಗಾಂಧೀಜಿ ಬಳಸಿದ ಲೋಹದ ಬಟ್ಟಲು, ಮರದ ಚಮಚ, ಫೋರ್ಕ್ ಎಲ್ಲವನ್ನೂ ಹರಾಜಿಗಿಡಲಾಗಿದೆ. ಬ್ರಿಟನ್​ನ ಬ್ರಿಸ್ಟೋಲ್​ನಲ್ಲಿ ಜನವರಿ 10ರಂದು ಹರಾಜು ಪ್ರಕ್ರಿಯೆ ನಡೆಯಲಿದ್ದು ಹರಾಜಿನ ಆರಂಭಿಕ ಬೆಲೆ ಭಾರತೀಯ ಮೌಲ್ಯದಲ್ಲಿ ₹54,59,808.20 (GBP 55,000) ಆಗಿರಲಿದೆ.

ಗಾಂಧೀಜಿ ಬಳಸಿದ ಬಟ್ಟಲು, ಚಮಚ ಹರಾಜಿಗಿದೆ.. ಆರಂಭಿಕ ಬೆಲೆ ಕೇಳಿದರೆ ಹೌಹಾರುತ್ತೀರಿ!
ಮಹಾತ್ಮ ಗಾಂಧೀಜಿ
Skanda
| Edited By: |

Updated on: Dec 30, 2020 | 2:35 PM

Share

ಒಂದು ಕಾಲದಲ್ಲಿ ಮಹಾತ್ಮ ಗಾಂಧೀಜಿ ಬಳಸಿದ ಲೋಹದ ಬಟ್ಟಲು, ಮರದ ಚಮಚ, ಫೋರ್ಕ್ ಎಲ್ಲವಕ್ಕೂ ಈಗ ಭರಪೂರ ಡಿಮ್ಯಾಂಡ್ ಬಂದಿದೆ. ಬ್ರಿಟನ್​ನ ಬ್ರಿಸ್ಟಲ್​ನಲ್ಲಿ ಜನವರಿ 10ರಂದು ಹರಾಜು ಪ್ರಕ್ರಿಯೆ ನಡೆಯಲಿದ್ದು ಹರಾಜಿನ ಆರಂಭಿಕ ಬೆಲೆ ಭಾರತೀಯ ಮೌಲ್ಯದಲ್ಲಿ ₹54,59,808.20 (GBP 55,000) ಆಗಿರಲಿದೆ. ಅದರೊಂದಿಗೆ ಹರಾಜು ಸಮಿತಿಯ ಕಮಿಷನ್, ಜಿಎಸ್​ಟಿ, ವಿಮೆ, ಭಾರತದಿಂದ ಆಮದು ಮಾಡಿಕೊಂಡ ಮೊತ್ತ ಇತ್ಯಾದಿ ಸೇರಿಕೊಂಡು ಒಟ್ಟು ಮೊತ್ತ ₹ 1.2 ಕೋಟಿ ಆಗಬಹುದು ಎಂದು ಆಯೋಜಕರು ತಿಳಿಸಿದ್ದಾರೆ.

ಇದು ಆಯೋಜಕರು ನಿರೀಕ್ಷಿಸುತ್ತಿರುವ ಕನಿಷ್ಠ ಮೌಲ್ಯವಾಗಿದ್ದು ಹರಾಜಿನ ಸಂದರ್ಭದಲ್ಲಿ 2-3 ಪಟ್ಟು ಹೆಚ್ಚು ಮೌಲ್ಯಕ್ಕೆ ಹೋಗುವ ಸಾಧ್ಯತೆಯೂ ಇದೆ ಎಂದು ಅಂದಾಜಿಸಲಾಗಿದೆ. ಈ ವಸ್ತುಗಳನ್ನು ಮಹಾತ್ಮ ಗಾಂಧೀಜಿಯವರು 1942ರಿಂದ 1944ರ ಅವಧಿಯಲ್ಲಿ ಪುಣೆಯ ಅಗಾ ಖಾನ್​ ಅರಮನೆಯಲ್ಲಿ ಸೆರೆಯಾಳಾಗಿದ್ದಾಗ ಹಾಗೂ ಮುಂಬೈನ ಪಂಬನ್​ ಹೌಸ್​ನಲ್ಲಿದ್ದಾಗ ಬಳಕೆ ಮಾಡಿದ್ದರು ಎಂದು ಹರಾಜು ಪ್ರಕ್ರಿಯೆ ಆಯೋಜಕರು ತಿಳಿಸಿದ್ದಾರೆ.

ಯಾರ ಸಂಗ್ರಹಣೆಯಲ್ಲಿತ್ತು ಇದು? ಈ ವಸ್ತುಗಳು ಗಾಂಧೀಜಿಯವರ ಕಟ್ಟಾ ಅನುಯಾಯಿ ಆದ ಸುಮತಿ ಮೊರಾರ್ಜಿ ಅವರ ಸಂಗ್ರಹಣೆಯಲ್ಲಿತ್ತು. ಈ ಕುರಿತು 1970ರಲ್ಲಿ ಸುಮತಿ ಮೊರಾರ್ಜಿ ಅವರ ಗೌರವಾರ್ಥವಾಗಿ ಪ್ರಕಟಿಸಿದ ಸ್ಮರಣ ಗ್ರಂಥ ಮತ್ತು ವಿಠ್ಠಲ ಭಾಯಿ ಝಾವೇರಿ ಬಯೋಪಿಕ್​ನಲ್ಲೂ ಉಲ್ಲೇಖವಿದೆ. ಈ ವಸ್ತುಗಳು ಗಾಂಧೀಜಿಯವರಿಗೆ ಸಂಬಂಧಿಸಿದ್ದಷ್ಟೇ ಅಲ್ಲದೇ ಭಾರತೀಯ ಇತಿಹಾಸಕ್ಕೂ ಸಂಬಂಧಿಸಿದ್ದಾಗಿದ್ದರಿಂದ ಹರಾಜು ಪ್ರಕ್ರಿಯೆ ಬಹಳಷ್ಟು ಕುತೂಹಲ ಮೂಡಿಸಿದೆ.

ಬ್ರಿಟನ್ನಲ್ಲಿರುವ ಗಾಂಧಿ ಹಾಗೂ ಮಾಜಿ ಪ್ರಧಾನಿ ವಿನ್ಸ್ಟನ್ ಚರ್ಚಿಲ್ ಪ್ರತಿಮೆ ತೆರವು ಸಾಧ್ಯತೆ.. ಕಾರಣವೇನು..?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ