AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jair Bolsonaro: 10 ದಿನಗಳಿಂದಲೂ ನಿಲ್ಲದ ಬಿಕ್ಕಳಿಕೆ; ಆಸ್ಪತ್ರೆಗೆ ದಾಖಲಾದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ

2018ರಲ್ಲಿ ಚುನಾವಣಾ ಪ್ರಚಾರದ ವೇಳೆ ಜೈರ್​ ಬೋಲ್ಸೋನಾರೋ ಚೂರಿ ಇರಿತಕ್ಕೆ ಒಳಗಾಗಿದ್ದರು. ಅದು ಕರುಳಿಗೂ ತಗುಲಿತ್ತು. ಅಂದಿನಿಂದಲೂ ಜೈರ್​ ಆರೋಗ್ಯದ ಬಗ್ಗೆ ಸಹಜವಾಗಿಯೇ ಕಳವಳ ಇದೆ.

Jair Bolsonaro: 10 ದಿನಗಳಿಂದಲೂ ನಿಲ್ಲದ ಬಿಕ್ಕಳಿಕೆ; ಆಸ್ಪತ್ರೆಗೆ ದಾಖಲಾದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ
ಆಸ್ಪತ್ರೆಗೆ ದಾಖಲಾದ ಜೈರ್ ಬೋಲ್ಸೋನಾರೋ
TV9 Web
| Updated By: Lakshmi Hegde|

Updated on:Jul 15, 2021 | 6:02 PM

Share

ಬ್ರೆಜಿಲ್​ ಅಧ್ಯಕ್ಷ ಜೈರ್​ ಬೋಲ್ಸೋನಾರೋ (66) ಅವರು ತುರ್ತಾಗಿ ಸರ್ಜರಿಗೆ ಒಳಗಾಗಿರಬೇಕಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೈರ್​ ಅವರಿಗೆ ಕಳೆದ 10 ದಿನಗಳಿಂದಲೂ ಒಂದೇ ಸಮ ಬಿಕ್ಕಳಿಕೆ ಬರುತ್ತಿದ್ದು, ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪಾಸಣೆಗಳನ್ನು ಮಾಡಲಾಗಿದ್ದು, ಕರುಳಿಗೆ ಸಂಬಂಧಪಟ್ಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯಕೀಯ ವರದಿ ಬಂದಿದೆ. ಕೂಡಲೇ ಸರ್ಜರಿ ಆಗಬೇಕಿದೆ.

ಇನ್ನು ಟ್ವೀಟ್ ಮಾಡಿರುವ ಜೈರ್​ ಬೋಲ್ಸೋನಾರೋ, ನಾನು ಆದಷ್ಟು ಶೀಘ್ರವೇ ಹಿಂತಿರುಗುತ್ತೇನೆ ಎಂಬ ನಂಬಿಕೆಯಿದೆ. ಎಲ್ಲವೂ ದೇವರ ಇಚ್ಛೆ ಎಂದು ಹೇಳಿದ್ದಾರೆ. 2018ರಲ್ಲಿ ಚುನಾವಣಾ ಪ್ರಚಾರದ ವೇಳೆ ಜೈರ್​ ಬೋಲ್ಸೋನಾರೋ ಚೂರಿ ಇರಿತಕ್ಕೆ ಒಳಗಾಗಿದ್ದರು. ಅದು ಕರುಳಿಗೂ ತಗುಲಿತ್ತು. ಅಂದಿನಿಂದಲೂ ಜೈರ್​ ಆರೋಗ್ಯದ ಬಗ್ಗೆ ಸಹಜವಾಗಿಯೇ ಕಳವಳ ಇದೆ. ಅಂದು ಜೈರ್​ ಬೋಲ್ಸೋನಾರೋ ತುಂಬ ಗಂಭೀರವಾಗಿ ಗಾಯಗೊಂಡಿದ್ದರು ಮತ್ತು ಅವರ ದೇಹದ ಶೇ.40ರಷ್ಟು ರಕ್ತವನ್ನು ಕಳೆದುಕೊಂಡಿದ್ದರು.

ಅಂದು ಚೂರಿ ಇರಿತಕ್ಕೆ ಒಳಗಾದಾಗಿನಿಂದಲೂ ಹಲವು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ನಿನ್ನೆ ಬುಧವಾರ ಬ್ರೆಸಿಲಿಯಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ತೆರಳಿದ್ದರು. 48 ಗಂಟೆಗಳ ಕಾಲ ಅಬ್ಸರ್ವೇಶನ್​ನಲ್ಲಿರುವಂತೆ ವೈದ್ಯರು ಸೂಚಿಸಿದ್ದರು. ನಂತರ 2018ರಲ್ಲಿ ಜೈರ್​ ಅವರಿಗೆ ಸರ್ಜರಿ ಮಾಡಿದ ವೈದ್ಯರ ಸೂಚನೆ ಮೇರೆಗೆ ಸಾ ಪೌಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೊನಾ ಅಲೆ ಶುರುವಾದ ಮೇಲೆ ಜೈರ್​ ಬೋಲ್ಸೋನಾರೋ ಒಟ್ಟು ಮೂರು ಬಾರಿಗೆ ಕೊರೊನಾ ಸೋಂಕಿಗೆ ಒಳಗಾಗಿ, ಯಶಸ್ವಿಯಾಗಿ ಸೋಂಕನ್ನು ಮಣಿಸಿದ್ದರು.

ಇದನ್ನೂ ಓದಿ: ಭಾರತದಿಂದ ಲಸಿಕೆ ಖರೀದಿ ಒಪ್ಪಂದ ರದ್ದುಗೊಳಿಸಿದ ಬ್ರೆಜಿಲ್​​; ಹಗರಣದ ಆರೋಪ ಕೇಳಿಬಂದ ಬೆನ್ನಲ್ಲೇ ಕೊವ್ಯಾಕ್ಸಿನ್​ ಖರೀದಿಗೆ ಹಿಂದೇಟು

Brazil’s President Jair Bolsonaro in hospital Due to chronic hiccups

Published On - 6:01 pm, Thu, 15 July 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್