AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jair Bolsonaro: 10 ದಿನಗಳಿಂದಲೂ ನಿಲ್ಲದ ಬಿಕ್ಕಳಿಕೆ; ಆಸ್ಪತ್ರೆಗೆ ದಾಖಲಾದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ

2018ರಲ್ಲಿ ಚುನಾವಣಾ ಪ್ರಚಾರದ ವೇಳೆ ಜೈರ್​ ಬೋಲ್ಸೋನಾರೋ ಚೂರಿ ಇರಿತಕ್ಕೆ ಒಳಗಾಗಿದ್ದರು. ಅದು ಕರುಳಿಗೂ ತಗುಲಿತ್ತು. ಅಂದಿನಿಂದಲೂ ಜೈರ್​ ಆರೋಗ್ಯದ ಬಗ್ಗೆ ಸಹಜವಾಗಿಯೇ ಕಳವಳ ಇದೆ.

Jair Bolsonaro: 10 ದಿನಗಳಿಂದಲೂ ನಿಲ್ಲದ ಬಿಕ್ಕಳಿಕೆ; ಆಸ್ಪತ್ರೆಗೆ ದಾಖಲಾದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ
ಆಸ್ಪತ್ರೆಗೆ ದಾಖಲಾದ ಜೈರ್ ಬೋಲ್ಸೋನಾರೋ
TV9 Web
| Edited By: |

Updated on:Jul 15, 2021 | 6:02 PM

Share

ಬ್ರೆಜಿಲ್​ ಅಧ್ಯಕ್ಷ ಜೈರ್​ ಬೋಲ್ಸೋನಾರೋ (66) ಅವರು ತುರ್ತಾಗಿ ಸರ್ಜರಿಗೆ ಒಳಗಾಗಿರಬೇಕಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೈರ್​ ಅವರಿಗೆ ಕಳೆದ 10 ದಿನಗಳಿಂದಲೂ ಒಂದೇ ಸಮ ಬಿಕ್ಕಳಿಕೆ ಬರುತ್ತಿದ್ದು, ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪಾಸಣೆಗಳನ್ನು ಮಾಡಲಾಗಿದ್ದು, ಕರುಳಿಗೆ ಸಂಬಂಧಪಟ್ಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯಕೀಯ ವರದಿ ಬಂದಿದೆ. ಕೂಡಲೇ ಸರ್ಜರಿ ಆಗಬೇಕಿದೆ.

ಇನ್ನು ಟ್ವೀಟ್ ಮಾಡಿರುವ ಜೈರ್​ ಬೋಲ್ಸೋನಾರೋ, ನಾನು ಆದಷ್ಟು ಶೀಘ್ರವೇ ಹಿಂತಿರುಗುತ್ತೇನೆ ಎಂಬ ನಂಬಿಕೆಯಿದೆ. ಎಲ್ಲವೂ ದೇವರ ಇಚ್ಛೆ ಎಂದು ಹೇಳಿದ್ದಾರೆ. 2018ರಲ್ಲಿ ಚುನಾವಣಾ ಪ್ರಚಾರದ ವೇಳೆ ಜೈರ್​ ಬೋಲ್ಸೋನಾರೋ ಚೂರಿ ಇರಿತಕ್ಕೆ ಒಳಗಾಗಿದ್ದರು. ಅದು ಕರುಳಿಗೂ ತಗುಲಿತ್ತು. ಅಂದಿನಿಂದಲೂ ಜೈರ್​ ಆರೋಗ್ಯದ ಬಗ್ಗೆ ಸಹಜವಾಗಿಯೇ ಕಳವಳ ಇದೆ. ಅಂದು ಜೈರ್​ ಬೋಲ್ಸೋನಾರೋ ತುಂಬ ಗಂಭೀರವಾಗಿ ಗಾಯಗೊಂಡಿದ್ದರು ಮತ್ತು ಅವರ ದೇಹದ ಶೇ.40ರಷ್ಟು ರಕ್ತವನ್ನು ಕಳೆದುಕೊಂಡಿದ್ದರು.

ಅಂದು ಚೂರಿ ಇರಿತಕ್ಕೆ ಒಳಗಾದಾಗಿನಿಂದಲೂ ಹಲವು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ನಿನ್ನೆ ಬುಧವಾರ ಬ್ರೆಸಿಲಿಯಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ತೆರಳಿದ್ದರು. 48 ಗಂಟೆಗಳ ಕಾಲ ಅಬ್ಸರ್ವೇಶನ್​ನಲ್ಲಿರುವಂತೆ ವೈದ್ಯರು ಸೂಚಿಸಿದ್ದರು. ನಂತರ 2018ರಲ್ಲಿ ಜೈರ್​ ಅವರಿಗೆ ಸರ್ಜರಿ ಮಾಡಿದ ವೈದ್ಯರ ಸೂಚನೆ ಮೇರೆಗೆ ಸಾ ಪೌಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೊನಾ ಅಲೆ ಶುರುವಾದ ಮೇಲೆ ಜೈರ್​ ಬೋಲ್ಸೋನಾರೋ ಒಟ್ಟು ಮೂರು ಬಾರಿಗೆ ಕೊರೊನಾ ಸೋಂಕಿಗೆ ಒಳಗಾಗಿ, ಯಶಸ್ವಿಯಾಗಿ ಸೋಂಕನ್ನು ಮಣಿಸಿದ್ದರು.

ಇದನ್ನೂ ಓದಿ: ಭಾರತದಿಂದ ಲಸಿಕೆ ಖರೀದಿ ಒಪ್ಪಂದ ರದ್ದುಗೊಳಿಸಿದ ಬ್ರೆಜಿಲ್​​; ಹಗರಣದ ಆರೋಪ ಕೇಳಿಬಂದ ಬೆನ್ನಲ್ಲೇ ಕೊವ್ಯಾಕ್ಸಿನ್​ ಖರೀದಿಗೆ ಹಿಂದೇಟು

Brazil’s President Jair Bolsonaro in hospital Due to chronic hiccups

Published On - 6:01 pm, Thu, 15 July 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!