AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jair Bolsonaro: 10 ದಿನಗಳಿಂದಲೂ ನಿಲ್ಲದ ಬಿಕ್ಕಳಿಕೆ; ಆಸ್ಪತ್ರೆಗೆ ದಾಖಲಾದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ

2018ರಲ್ಲಿ ಚುನಾವಣಾ ಪ್ರಚಾರದ ವೇಳೆ ಜೈರ್​ ಬೋಲ್ಸೋನಾರೋ ಚೂರಿ ಇರಿತಕ್ಕೆ ಒಳಗಾಗಿದ್ದರು. ಅದು ಕರುಳಿಗೂ ತಗುಲಿತ್ತು. ಅಂದಿನಿಂದಲೂ ಜೈರ್​ ಆರೋಗ್ಯದ ಬಗ್ಗೆ ಸಹಜವಾಗಿಯೇ ಕಳವಳ ಇದೆ.

Jair Bolsonaro: 10 ದಿನಗಳಿಂದಲೂ ನಿಲ್ಲದ ಬಿಕ್ಕಳಿಕೆ; ಆಸ್ಪತ್ರೆಗೆ ದಾಖಲಾದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ
ಆಸ್ಪತ್ರೆಗೆ ದಾಖಲಾದ ಜೈರ್ ಬೋಲ್ಸೋನಾರೋ
TV9 Web
| Edited By: |

Updated on:Jul 15, 2021 | 6:02 PM

Share

ಬ್ರೆಜಿಲ್​ ಅಧ್ಯಕ್ಷ ಜೈರ್​ ಬೋಲ್ಸೋನಾರೋ (66) ಅವರು ತುರ್ತಾಗಿ ಸರ್ಜರಿಗೆ ಒಳಗಾಗಿರಬೇಕಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೈರ್​ ಅವರಿಗೆ ಕಳೆದ 10 ದಿನಗಳಿಂದಲೂ ಒಂದೇ ಸಮ ಬಿಕ್ಕಳಿಕೆ ಬರುತ್ತಿದ್ದು, ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪಾಸಣೆಗಳನ್ನು ಮಾಡಲಾಗಿದ್ದು, ಕರುಳಿಗೆ ಸಂಬಂಧಪಟ್ಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯಕೀಯ ವರದಿ ಬಂದಿದೆ. ಕೂಡಲೇ ಸರ್ಜರಿ ಆಗಬೇಕಿದೆ.

ಇನ್ನು ಟ್ವೀಟ್ ಮಾಡಿರುವ ಜೈರ್​ ಬೋಲ್ಸೋನಾರೋ, ನಾನು ಆದಷ್ಟು ಶೀಘ್ರವೇ ಹಿಂತಿರುಗುತ್ತೇನೆ ಎಂಬ ನಂಬಿಕೆಯಿದೆ. ಎಲ್ಲವೂ ದೇವರ ಇಚ್ಛೆ ಎಂದು ಹೇಳಿದ್ದಾರೆ. 2018ರಲ್ಲಿ ಚುನಾವಣಾ ಪ್ರಚಾರದ ವೇಳೆ ಜೈರ್​ ಬೋಲ್ಸೋನಾರೋ ಚೂರಿ ಇರಿತಕ್ಕೆ ಒಳಗಾಗಿದ್ದರು. ಅದು ಕರುಳಿಗೂ ತಗುಲಿತ್ತು. ಅಂದಿನಿಂದಲೂ ಜೈರ್​ ಆರೋಗ್ಯದ ಬಗ್ಗೆ ಸಹಜವಾಗಿಯೇ ಕಳವಳ ಇದೆ. ಅಂದು ಜೈರ್​ ಬೋಲ್ಸೋನಾರೋ ತುಂಬ ಗಂಭೀರವಾಗಿ ಗಾಯಗೊಂಡಿದ್ದರು ಮತ್ತು ಅವರ ದೇಹದ ಶೇ.40ರಷ್ಟು ರಕ್ತವನ್ನು ಕಳೆದುಕೊಂಡಿದ್ದರು.

ಅಂದು ಚೂರಿ ಇರಿತಕ್ಕೆ ಒಳಗಾದಾಗಿನಿಂದಲೂ ಹಲವು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ನಿನ್ನೆ ಬುಧವಾರ ಬ್ರೆಸಿಲಿಯಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ತೆರಳಿದ್ದರು. 48 ಗಂಟೆಗಳ ಕಾಲ ಅಬ್ಸರ್ವೇಶನ್​ನಲ್ಲಿರುವಂತೆ ವೈದ್ಯರು ಸೂಚಿಸಿದ್ದರು. ನಂತರ 2018ರಲ್ಲಿ ಜೈರ್​ ಅವರಿಗೆ ಸರ್ಜರಿ ಮಾಡಿದ ವೈದ್ಯರ ಸೂಚನೆ ಮೇರೆಗೆ ಸಾ ಪೌಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೊನಾ ಅಲೆ ಶುರುವಾದ ಮೇಲೆ ಜೈರ್​ ಬೋಲ್ಸೋನಾರೋ ಒಟ್ಟು ಮೂರು ಬಾರಿಗೆ ಕೊರೊನಾ ಸೋಂಕಿಗೆ ಒಳಗಾಗಿ, ಯಶಸ್ವಿಯಾಗಿ ಸೋಂಕನ್ನು ಮಣಿಸಿದ್ದರು.

ಇದನ್ನೂ ಓದಿ: ಭಾರತದಿಂದ ಲಸಿಕೆ ಖರೀದಿ ಒಪ್ಪಂದ ರದ್ದುಗೊಳಿಸಿದ ಬ್ರೆಜಿಲ್​​; ಹಗರಣದ ಆರೋಪ ಕೇಳಿಬಂದ ಬೆನ್ನಲ್ಲೇ ಕೊವ್ಯಾಕ್ಸಿನ್​ ಖರೀದಿಗೆ ಹಿಂದೇಟು

Brazil’s President Jair Bolsonaro in hospital Due to chronic hiccups

Published On - 6:01 pm, Thu, 15 July 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ