AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jair Bolsonaro: 10 ದಿನಗಳಿಂದಲೂ ನಿಲ್ಲದ ಬಿಕ್ಕಳಿಕೆ; ಆಸ್ಪತ್ರೆಗೆ ದಾಖಲಾದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ

2018ರಲ್ಲಿ ಚುನಾವಣಾ ಪ್ರಚಾರದ ವೇಳೆ ಜೈರ್​ ಬೋಲ್ಸೋನಾರೋ ಚೂರಿ ಇರಿತಕ್ಕೆ ಒಳಗಾಗಿದ್ದರು. ಅದು ಕರುಳಿಗೂ ತಗುಲಿತ್ತು. ಅಂದಿನಿಂದಲೂ ಜೈರ್​ ಆರೋಗ್ಯದ ಬಗ್ಗೆ ಸಹಜವಾಗಿಯೇ ಕಳವಳ ಇದೆ.

Jair Bolsonaro: 10 ದಿನಗಳಿಂದಲೂ ನಿಲ್ಲದ ಬಿಕ್ಕಳಿಕೆ; ಆಸ್ಪತ್ರೆಗೆ ದಾಖಲಾದ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ
ಆಸ್ಪತ್ರೆಗೆ ದಾಖಲಾದ ಜೈರ್ ಬೋಲ್ಸೋನಾರೋ
TV9 Web
| Edited By: |

Updated on:Jul 15, 2021 | 6:02 PM

Share

ಬ್ರೆಜಿಲ್​ ಅಧ್ಯಕ್ಷ ಜೈರ್​ ಬೋಲ್ಸೋನಾರೋ (66) ಅವರು ತುರ್ತಾಗಿ ಸರ್ಜರಿಗೆ ಒಳಗಾಗಿರಬೇಕಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೈರ್​ ಅವರಿಗೆ ಕಳೆದ 10 ದಿನಗಳಿಂದಲೂ ಒಂದೇ ಸಮ ಬಿಕ್ಕಳಿಕೆ ಬರುತ್ತಿದ್ದು, ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪಾಸಣೆಗಳನ್ನು ಮಾಡಲಾಗಿದ್ದು, ಕರುಳಿಗೆ ಸಂಬಂಧಪಟ್ಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯಕೀಯ ವರದಿ ಬಂದಿದೆ. ಕೂಡಲೇ ಸರ್ಜರಿ ಆಗಬೇಕಿದೆ.

ಇನ್ನು ಟ್ವೀಟ್ ಮಾಡಿರುವ ಜೈರ್​ ಬೋಲ್ಸೋನಾರೋ, ನಾನು ಆದಷ್ಟು ಶೀಘ್ರವೇ ಹಿಂತಿರುಗುತ್ತೇನೆ ಎಂಬ ನಂಬಿಕೆಯಿದೆ. ಎಲ್ಲವೂ ದೇವರ ಇಚ್ಛೆ ಎಂದು ಹೇಳಿದ್ದಾರೆ. 2018ರಲ್ಲಿ ಚುನಾವಣಾ ಪ್ರಚಾರದ ವೇಳೆ ಜೈರ್​ ಬೋಲ್ಸೋನಾರೋ ಚೂರಿ ಇರಿತಕ್ಕೆ ಒಳಗಾಗಿದ್ದರು. ಅದು ಕರುಳಿಗೂ ತಗುಲಿತ್ತು. ಅಂದಿನಿಂದಲೂ ಜೈರ್​ ಆರೋಗ್ಯದ ಬಗ್ಗೆ ಸಹಜವಾಗಿಯೇ ಕಳವಳ ಇದೆ. ಅಂದು ಜೈರ್​ ಬೋಲ್ಸೋನಾರೋ ತುಂಬ ಗಂಭೀರವಾಗಿ ಗಾಯಗೊಂಡಿದ್ದರು ಮತ್ತು ಅವರ ದೇಹದ ಶೇ.40ರಷ್ಟು ರಕ್ತವನ್ನು ಕಳೆದುಕೊಂಡಿದ್ದರು.

ಅಂದು ಚೂರಿ ಇರಿತಕ್ಕೆ ಒಳಗಾದಾಗಿನಿಂದಲೂ ಹಲವು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ನಿನ್ನೆ ಬುಧವಾರ ಬ್ರೆಸಿಲಿಯಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ತೆರಳಿದ್ದರು. 48 ಗಂಟೆಗಳ ಕಾಲ ಅಬ್ಸರ್ವೇಶನ್​ನಲ್ಲಿರುವಂತೆ ವೈದ್ಯರು ಸೂಚಿಸಿದ್ದರು. ನಂತರ 2018ರಲ್ಲಿ ಜೈರ್​ ಅವರಿಗೆ ಸರ್ಜರಿ ಮಾಡಿದ ವೈದ್ಯರ ಸೂಚನೆ ಮೇರೆಗೆ ಸಾ ಪೌಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೊನಾ ಅಲೆ ಶುರುವಾದ ಮೇಲೆ ಜೈರ್​ ಬೋಲ್ಸೋನಾರೋ ಒಟ್ಟು ಮೂರು ಬಾರಿಗೆ ಕೊರೊನಾ ಸೋಂಕಿಗೆ ಒಳಗಾಗಿ, ಯಶಸ್ವಿಯಾಗಿ ಸೋಂಕನ್ನು ಮಣಿಸಿದ್ದರು.

ಇದನ್ನೂ ಓದಿ: ಭಾರತದಿಂದ ಲಸಿಕೆ ಖರೀದಿ ಒಪ್ಪಂದ ರದ್ದುಗೊಳಿಸಿದ ಬ್ರೆಜಿಲ್​​; ಹಗರಣದ ಆರೋಪ ಕೇಳಿಬಂದ ಬೆನ್ನಲ್ಲೇ ಕೊವ್ಯಾಕ್ಸಿನ್​ ಖರೀದಿಗೆ ಹಿಂದೇಟು

Brazil’s President Jair Bolsonaro in hospital Due to chronic hiccups

Published On - 6:01 pm, Thu, 15 July 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!