ಶ್ರೀಲಂಕಾ: ಈಗಾಗಲ್ಲೇ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ, ಹಿನ್ನೆಲೆ, ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನ, ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ. ದೂರದರ್ಶನ ಪ್ರಸಾರಗಳು ಕೂಡ ಸ್ಥಗಿತಗೊಂಡಿದೆ. ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ (Emergency in Sri Lanka) ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಲ್ಲಿ (Sri Lanka Economic Crisis) ಪರಿಸ್ಥಿತಿ ಕೈಮೀರುತ್ತಿದೆ. ಅಧ್ಯಕ್ಷ ಗೊಟಬಯ ರಾಜಪಕ್ಸ ಸೇನಾ ವಿಮಾನದಲ್ಲಿ ಮಾಲ್ಡೀವ್ಸ್ಗೆ ಪಲಾಯನ ಮಾಡಿದ ನಂತರ ಜನರ ಆಕ್ರೋಶ ತೀವ್ರಗೊಂಡಿದ್ದು, ರಾಜಧಾನಿ ಕೊಲಂಬೊದ ರಸ್ತೆಗಳಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡಲು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ, ಇದೀಗ ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನವಾಗಿದ್ದು ಮಾಧ್ಯಮ ಕೇಂದ್ರಗಳನ್ನು ತನ್ನ ಕೈವಶ ಮಾಡಿಕೊಂಡಿದೆ. ಟಿವಿ ಮಾಧ್ಯಮಗಳಲ್ಲಿ ಮಾಹಿತಿ ಮತ್ತು ಕಾರ್ಯಕ್ರಮಗಳು ಈಗಾಗಲ್ಲೇ ಸ್ಥಗಿತಗೊಂಡಿದೆ.
ಹೆಚ್ಚಿನ ಮಾಹಿತಿ ನೀಡಲಾಗುವುದು