AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್ ವಿಮಾನ ಪತನ : ಜನವಸತಿ ಪ್ರದೇಶದಲ್ಲೇ ಅಪಘಾತ, 62 ಸಾವು

ಬ್ರೆಜಿಲ್​​ನ ಸಾವೊ ಪಾಲೊ ನಗರದ ಜನವಸತಿ ಪ್ರದೇಶದಲ್ಲೇ ವಿಮಾನ ಪತನಗೊಂಡಿದ್ದು, ಅದರಲ್ಲಿದ್ದ 62 ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಸಾವೊ ಪಾಲೊದ ರಾಜ್ಯ ಅಗ್ನಿಶಾಮಕ ದಳದ ಏಳು ತಂಡ ತೆರಳಿ ಬೆಂಕಿ ನಂದಿಸಿದೆ.

ಬ್ರೆಜಿಲ್ ವಿಮಾನ ಪತನ : ಜನವಸತಿ ಪ್ರದೇಶದಲ್ಲೇ ಅಪಘಾತ, 62 ಸಾವು
ವಿಮಾನ ಅಪಘಾತ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Aug 10, 2024 | 9:16 AM

Share

ಬ್ರೆಜಿಲ್​​ನಲ್ಲಿ (Brezil) ಭಾರಿ ವಿಮಾನ ಅಪಘಾತ (Plane crash) ಸಂಭವಿಸಿದ್ದು ಅದರಲ್ಲಿದ್ದ 62 ಜನರೆಲ್ಲರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಏರ್​​ಲೈನ್​ ವೊಪಾಸ್​ ಲಿನ್ಹಾಸ್​ ಏರಿಯಾಸ್​ ನಿರ್ವಹಿಸುತ್ತಿದ್ದ ATR-72 ಟರ್ಬೊಪ್ರೊಪ್​ ವಿಮಾನವು ಪರಾನಾ ರಾಜ್ಯದ ಕ್ಯಾಸ್ಕಾವೆಲ್​ನಿಂದ ಸಾವೊ ಪಾಲೊದಲ್ಲಿನ ಗೌರುಲ್ಹೋಸ್​ಗೆ ತೆರಳುತ್ತಿತ್ತು. ಆದರೆ, ಮಾರ್ಗ ಮಧ್ಯೆ ಸಾವೊ ಪಾಲೊ ನಗರದ ಜನವಸತಿ ಪ್ರದೇಶದಲ್ಲೇ ಪತನಗೊಂಡಿದೆ. ಅದರಲ್ಲಿದ್ದ 62 ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಸಾವೊ ಪಾಲೊದ ರಾಜ್ಯ ಅಗ್ನಿಶಾಮಕ ದಳದ ಏಳು ತಂಡ ತೆರಳಿ ಬೆಂಕಿ ನಂದಿಸಿದೆ. 58 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ದು ಸಾವೊ ಪಾಲೊದ ಗೌರುಲ್ಹೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವಿಮಾನ ಅಪಘಾತಕ್ಕೀಡಾಗಿದೆ. ಎಂದು ಏರಲೈನ್​ ವೊಪಾಸ್​ ತಿಳಿಸಿದೆ. ಆದರೆ, ಅಪಘಾತಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ.

ಸಮೀಪದ ಕಾಂಡೋಮಿನಿಯಂ ಕಾಂಪ್ಲೆಕ್ಸ್‌ನಲ್ಲಿರುವ ಒಂದು ಮನೆಗೆ ಮಾತ್ರ ಹಾನಿಯಾಗಿದೆ. ನಿವಾಸಿಗಳಿಗೆ ಯಾವುದೆ ಗಾಯವಾಗಿಲ್ಲ. ವಿಮಾನ ಅಪಘಾತದ ದೃಶ್ಯ ಸ್ಥಳೀಯರ ಮೊಬೈಲ್​ ಕ್ಯಾಮೆರಾದಲ್ಲಿ ಸರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಮಾನವು ಆಕಾದಲ್ಲಿ ತಿರುಗುತ್ತ ನೆಲಕ್ಕೆ ಅಪ್ಪಳಿಸಿದೆ. ವಿಮಾನ ಭೂಮಿಗೆ ಬಿದ್ದ ಕೂಡಲೆ ಹೊತ್ತಿ ಉರಿದಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:49 am, Sat, 10 August 24

Follow Us
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ