AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್ ವಿಮಾನ ಪತನ : ಜನವಸತಿ ಪ್ರದೇಶದಲ್ಲೇ ಅಪಘಾತ, 62 ಸಾವು

ಬ್ರೆಜಿಲ್​​ನ ಸಾವೊ ಪಾಲೊ ನಗರದ ಜನವಸತಿ ಪ್ರದೇಶದಲ್ಲೇ ವಿಮಾನ ಪತನಗೊಂಡಿದ್ದು, ಅದರಲ್ಲಿದ್ದ 62 ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಸಾವೊ ಪಾಲೊದ ರಾಜ್ಯ ಅಗ್ನಿಶಾಮಕ ದಳದ ಏಳು ತಂಡ ತೆರಳಿ ಬೆಂಕಿ ನಂದಿಸಿದೆ.

ಬ್ರೆಜಿಲ್ ವಿಮಾನ ಪತನ : ಜನವಸತಿ ಪ್ರದೇಶದಲ್ಲೇ ಅಪಘಾತ, 62 ಸಾವು
ವಿಮಾನ ಅಪಘಾತ
ವಿವೇಕ ಬಿರಾದಾರ
|

Updated on:Aug 10, 2024 | 9:16 AM

Share

ಬ್ರೆಜಿಲ್​​ನಲ್ಲಿ (Brezil) ಭಾರಿ ವಿಮಾನ ಅಪಘಾತ (Plane crash) ಸಂಭವಿಸಿದ್ದು ಅದರಲ್ಲಿದ್ದ 62 ಜನರೆಲ್ಲರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಏರ್​​ಲೈನ್​ ವೊಪಾಸ್​ ಲಿನ್ಹಾಸ್​ ಏರಿಯಾಸ್​ ನಿರ್ವಹಿಸುತ್ತಿದ್ದ ATR-72 ಟರ್ಬೊಪ್ರೊಪ್​ ವಿಮಾನವು ಪರಾನಾ ರಾಜ್ಯದ ಕ್ಯಾಸ್ಕಾವೆಲ್​ನಿಂದ ಸಾವೊ ಪಾಲೊದಲ್ಲಿನ ಗೌರುಲ್ಹೋಸ್​ಗೆ ತೆರಳುತ್ತಿತ್ತು. ಆದರೆ, ಮಾರ್ಗ ಮಧ್ಯೆ ಸಾವೊ ಪಾಲೊ ನಗರದ ಜನವಸತಿ ಪ್ರದೇಶದಲ್ಲೇ ಪತನಗೊಂಡಿದೆ. ಅದರಲ್ಲಿದ್ದ 62 ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಸಾವೊ ಪಾಲೊದ ರಾಜ್ಯ ಅಗ್ನಿಶಾಮಕ ದಳದ ಏಳು ತಂಡ ತೆರಳಿ ಬೆಂಕಿ ನಂದಿಸಿದೆ. 58 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ದು ಸಾವೊ ಪಾಲೊದ ಗೌರುಲ್ಹೋಸ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವಿಮಾನ ಅಪಘಾತಕ್ಕೀಡಾಗಿದೆ. ಎಂದು ಏರಲೈನ್​ ವೊಪಾಸ್​ ತಿಳಿಸಿದೆ. ಆದರೆ, ಅಪಘಾತಕ್ಕೆ ಕಾರಣವೇನೆಂದು ತಿಳಿದು ಬಂದಿಲ್ಲ.

ಸಮೀಪದ ಕಾಂಡೋಮಿನಿಯಂ ಕಾಂಪ್ಲೆಕ್ಸ್‌ನಲ್ಲಿರುವ ಒಂದು ಮನೆಗೆ ಮಾತ್ರ ಹಾನಿಯಾಗಿದೆ. ನಿವಾಸಿಗಳಿಗೆ ಯಾವುದೆ ಗಾಯವಾಗಿಲ್ಲ. ವಿಮಾನ ಅಪಘಾತದ ದೃಶ್ಯ ಸ್ಥಳೀಯರ ಮೊಬೈಲ್​ ಕ್ಯಾಮೆರಾದಲ್ಲಿ ಸರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಮಾನವು ಆಕಾದಲ್ಲಿ ತಿರುಗುತ್ತ ನೆಲಕ್ಕೆ ಅಪ್ಪಳಿಸಿದೆ. ವಿಮಾನ ಭೂಮಿಗೆ ಬಿದ್ದ ಕೂಡಲೆ ಹೊತ್ತಿ ಉರಿದಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:49 am, Sat, 10 August 24

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ