AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್ ದಾಳಿಗೆ ಬ್ರಿಕ್ಸ್ ರಾಷ್ಟ್ರಗಳ ತೀವ್ರ ಖಂಡನೆ

ಭಯೋತ್ಪಾದನೆಯನ್ನು ಎದುರಿಸುವಲ್ಲಿ ದ್ವಿಮುಖ ನೀತಿ'ಯನ್ನು ತಿರಸ್ಕರಿಸಲು ಎಲ್ಲ ದೇಶಗಳನ್ನು ಒತ್ತಾಯಿಸಿರುವ ಬ್ರಿಕ್ಸ್ ರಾಷ್ಟ್ರಗಳು ಭಾರತದ ಪಹಲ್ಗಾಮ್ ದಾಳಿಯನ್ನು ತೀವ್ರವಾಗಿ ಖಂಡಿಸಿವೆ. ಈ ಮೂಲಕ ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ಸಮರ ಸಾರಿರುವ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ, ಈಜಿಪ್ಟ್, ಇಥಿಯೋಪಿಯಾ, ಇಂಡೋನೇಷ್ಯಾ, ಇರಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸೇರಿದಂತೆ ಬ್ರಿಕ್ಸ್ ರಾಷ್ಟ್ರಗಳು ಭಯೋತ್ಪಾದನೆಯನ್ನು ಎದುರಿಸುವಲ್ಲಿ ದ್ವಿಮುಖ ನೀತಿಯನ್ನು ನಿಲ್ಲಿಸುವಂತೆ ಒತ್ತಾಯಿಸಿವೆ.

ಪಹಲ್ಗಾಮ್ ದಾಳಿಗೆ ಬ್ರಿಕ್ಸ್ ರಾಷ್ಟ್ರಗಳ ತೀವ್ರ ಖಂಡನೆ
Brics Summit
ಸುಷ್ಮಾ ಚಕ್ರೆ
|

Updated on: Sep 27, 2025 | 10:51 PM

Share

ನವದೆಹಲಿ, ಸೆಪ್ಟೆಂಬರ್ 27: ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Attack) 26 ಅಮಾಯಕರ ಜೀವಗಳನ್ನು ಬಲಿ ಪಡೆದ ಭಯೋತ್ಪಾದಕ ದಾಳಿಯನ್ನು ಬ್ರಿಕ್ಸ್ ರಾಷ್ಟ್ರಗಳು ಖಂಡಿಸಿವೆ. ಇದನ್ನು ‘ಕ್ರಿಮಿನಲ್ ಮತ್ತು ಅಸಮರ್ಥನೀಯ’ ಎಂದು ಟೀಕಿಸಿವೆ. ಭಯೋತ್ಪಾದಕರ ಗಡಿಯಾಚೆಗಿನ ಚಲನೆ ಸೇರಿದಂತೆ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯನ್ನು ಎದುರಿಸಲು ಬ್ರಿಕ್ಸ್ ಬದ್ಧವಾಗಿದೆ ಎಂದು ಎಲ್ಲ ದೇಶಗಳು ಪುನರುಚ್ಚರಿಸಿವೆ. ಈ ವೇಳೆ ಭಾರತದ ಪ್ರತಿನಿಧಿಯಾಗಿ ವಿದೇಶಾಂಗ ಸಚಿವ ಜೈಶಂಕರ್ ಪಾಲ್ಗೊಂಡಿದ್ದರು.

ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (ಯುಎನ್‌ಜಿಎ) 80ನೇ ಅಧಿವೇಶನದಲ್ಲಿ ಬ್ರಿಕ್ಸ್ ವಿದೇಶಾಂಗ ವ್ಯವಹಾರಗಳು ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ಸಚಿವರು ತಮ್ಮ ವಾರ್ಷಿಕ ಸಭೆಯನ್ನು ನಡೆಸಿದ ನಂತರ ಶುಕ್ರವಾರ (ಸ್ಥಳೀಯ ಸಮಯ) ಜಂಟಿಯಾಗಿ ಈ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ಬಳಿಕ ಉಗ್ರರ ನೆಲೆಗಳು ಪಾಕಿಸ್ತಾನದಿಂದ ಅಫ್ಘಾನ್ ಗಡಿಗೆ ಶಿಫ್ಟ್

ಭಯೋತ್ಪಾದನೆಯನ್ನು ಯಾವುದೇ ಧರ್ಮ, ರಾಷ್ಟ್ರೀಯತೆ, ನಾಗರಿಕತೆ ಅಥವಾ ಜನಾಂಗೀಯ ಗುಂಪಿನೊಂದಿಗೆ ಸಂಬಂಧಿಸಬಾರದು ಎಂದು ಬ್ರಿಕ್ಸ್ ಸಚಿವರು ಹೇಳಿದ್ದಾರೆ. ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ, ಈಜಿಪ್ಟ್, ಇಥಿಯೋಪಿಯಾ, ಇಂಡೋನೇಷ್ಯಾ, ಇರಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸೇರಿದಂತೆ ಬ್ರಿಕ್ಸ್ ರಾಷ್ಟ್ರಗಳು ಭಯೋತ್ಪಾದನೆಯನ್ನು ಎದುರಿಸುವಲ್ಲಿ ದ್ವಿಮುಖ ಮಾನದಂಡಗಳನ್ನು ತಪ್ಪಿಸುವಂತೆ ರಾಷ್ಟ್ರಗಳನ್ನು ಒತ್ತಾಯಿಸಿವೆ.

ಇದನ್ನೂ ಓದಿ: ಪಹಲ್ಗಾಮ್ ದಾಳಿ ವೇಳೆ ಲಷ್ಕರ್ ಉಗ್ರರಿಗೆ ಸಹಾಯ ಮಾಡಿದ್ದ ಕಾಶ್ಮೀರಿ ವ್ಯಕ್ತಿಯ ಬಂಧನ

ಇಡೀ ಜಗತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ ಸುಂಕಗಳನ್ನು ಎದುರಿಸುತ್ತಿರುವಾಗ, ಬ್ರಿಕ್ಸ್ ರಾಷ್ಟ್ರಗಳು ಸುಂಕಗಳ ವಿವೇಚನೆಯಿಲ್ಲದ ಏರಿಕೆಯ ರೂಪದಲ್ಲಿ ವ್ಯಾಪಾರ-ನಿರ್ಬಂಧಿತ ಕ್ರಮಗಳ ಪ್ರಸರಣದ ಬಗ್ಗೆ ಕಳವಳ ವ್ಯಕ್ತಪಡಿಸಿದವು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ