AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್ ದಾಳಿಗೆ ಬ್ರಿಕ್ಸ್ ರಾಷ್ಟ್ರಗಳ ತೀವ್ರ ಖಂಡನೆ

ಭಯೋತ್ಪಾದನೆಯನ್ನು ಎದುರಿಸುವಲ್ಲಿ ದ್ವಿಮುಖ ನೀತಿ'ಯನ್ನು ತಿರಸ್ಕರಿಸಲು ಎಲ್ಲ ದೇಶಗಳನ್ನು ಒತ್ತಾಯಿಸಿರುವ ಬ್ರಿಕ್ಸ್ ರಾಷ್ಟ್ರಗಳು ಭಾರತದ ಪಹಲ್ಗಾಮ್ ದಾಳಿಯನ್ನು ತೀವ್ರವಾಗಿ ಖಂಡಿಸಿವೆ. ಈ ಮೂಲಕ ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ಸಮರ ಸಾರಿರುವ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ, ಈಜಿಪ್ಟ್, ಇಥಿಯೋಪಿಯಾ, ಇಂಡೋನೇಷ್ಯಾ, ಇರಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸೇರಿದಂತೆ ಬ್ರಿಕ್ಸ್ ರಾಷ್ಟ್ರಗಳು ಭಯೋತ್ಪಾದನೆಯನ್ನು ಎದುರಿಸುವಲ್ಲಿ ದ್ವಿಮುಖ ನೀತಿಯನ್ನು ನಿಲ್ಲಿಸುವಂತೆ ಒತ್ತಾಯಿಸಿವೆ.

ಪಹಲ್ಗಾಮ್ ದಾಳಿಗೆ ಬ್ರಿಕ್ಸ್ ರಾಷ್ಟ್ರಗಳ ತೀವ್ರ ಖಂಡನೆ
Brics Summit
ಸುಷ್ಮಾ ಚಕ್ರೆ
|

Updated on: Sep 27, 2025 | 10:51 PM

Share

ನವದೆಹಲಿ, ಸೆಪ್ಟೆಂಬರ್ 27: ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Attack) 26 ಅಮಾಯಕರ ಜೀವಗಳನ್ನು ಬಲಿ ಪಡೆದ ಭಯೋತ್ಪಾದಕ ದಾಳಿಯನ್ನು ಬ್ರಿಕ್ಸ್ ರಾಷ್ಟ್ರಗಳು ಖಂಡಿಸಿವೆ. ಇದನ್ನು ‘ಕ್ರಿಮಿನಲ್ ಮತ್ತು ಅಸಮರ್ಥನೀಯ’ ಎಂದು ಟೀಕಿಸಿವೆ. ಭಯೋತ್ಪಾದಕರ ಗಡಿಯಾಚೆಗಿನ ಚಲನೆ ಸೇರಿದಂತೆ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯನ್ನು ಎದುರಿಸಲು ಬ್ರಿಕ್ಸ್ ಬದ್ಧವಾಗಿದೆ ಎಂದು ಎಲ್ಲ ದೇಶಗಳು ಪುನರುಚ್ಚರಿಸಿವೆ. ಈ ವೇಳೆ ಭಾರತದ ಪ್ರತಿನಿಧಿಯಾಗಿ ವಿದೇಶಾಂಗ ಸಚಿವ ಜೈಶಂಕರ್ ಪಾಲ್ಗೊಂಡಿದ್ದರು.

ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (ಯುಎನ್‌ಜಿಎ) 80ನೇ ಅಧಿವೇಶನದಲ್ಲಿ ಬ್ರಿಕ್ಸ್ ವಿದೇಶಾಂಗ ವ್ಯವಹಾರಗಳು ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ಸಚಿವರು ತಮ್ಮ ವಾರ್ಷಿಕ ಸಭೆಯನ್ನು ನಡೆಸಿದ ನಂತರ ಶುಕ್ರವಾರ (ಸ್ಥಳೀಯ ಸಮಯ) ಜಂಟಿಯಾಗಿ ಈ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ಬಳಿಕ ಉಗ್ರರ ನೆಲೆಗಳು ಪಾಕಿಸ್ತಾನದಿಂದ ಅಫ್ಘಾನ್ ಗಡಿಗೆ ಶಿಫ್ಟ್

ಭಯೋತ್ಪಾದನೆಯನ್ನು ಯಾವುದೇ ಧರ್ಮ, ರಾಷ್ಟ್ರೀಯತೆ, ನಾಗರಿಕತೆ ಅಥವಾ ಜನಾಂಗೀಯ ಗುಂಪಿನೊಂದಿಗೆ ಸಂಬಂಧಿಸಬಾರದು ಎಂದು ಬ್ರಿಕ್ಸ್ ಸಚಿವರು ಹೇಳಿದ್ದಾರೆ. ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ, ಈಜಿಪ್ಟ್, ಇಥಿಯೋಪಿಯಾ, ಇಂಡೋನೇಷ್ಯಾ, ಇರಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸೇರಿದಂತೆ ಬ್ರಿಕ್ಸ್ ರಾಷ್ಟ್ರಗಳು ಭಯೋತ್ಪಾದನೆಯನ್ನು ಎದುರಿಸುವಲ್ಲಿ ದ್ವಿಮುಖ ಮಾನದಂಡಗಳನ್ನು ತಪ್ಪಿಸುವಂತೆ ರಾಷ್ಟ್ರಗಳನ್ನು ಒತ್ತಾಯಿಸಿವೆ.

ಇದನ್ನೂ ಓದಿ: ಪಹಲ್ಗಾಮ್ ದಾಳಿ ವೇಳೆ ಲಷ್ಕರ್ ಉಗ್ರರಿಗೆ ಸಹಾಯ ಮಾಡಿದ್ದ ಕಾಶ್ಮೀರಿ ವ್ಯಕ್ತಿಯ ಬಂಧನ

ಇಡೀ ಜಗತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ ಸುಂಕಗಳನ್ನು ಎದುರಿಸುತ್ತಿರುವಾಗ, ಬ್ರಿಕ್ಸ್ ರಾಷ್ಟ್ರಗಳು ಸುಂಕಗಳ ವಿವೇಚನೆಯಿಲ್ಲದ ಏರಿಕೆಯ ರೂಪದಲ್ಲಿ ವ್ಯಾಪಾರ-ನಿರ್ಬಂಧಿತ ಕ್ರಮಗಳ ಪ್ರಸರಣದ ಬಗ್ಗೆ ಕಳವಳ ವ್ಯಕ್ತಪಡಿಸಿದವು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ