AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 2ನೇ ಅಲೆ: ಬ್ರಿಟನ್​ನಲ್ಲಿ ಮತ್ತೆ ಲಾಕ್​​ಡೌನ್.. ಯುರೋಪಿಯನ್​ ದೇಶಗಳಿಂದ ಬ್ರಿಟನ್​ ವಿಮಾನಗಳಿಗೆ ನಿರ್ಬಂಧ

ಕೊರೊನಾ ವೈರಾಣುವಿನ ಬದಲಾದ ಸ್ವರೂಪದ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಬ್ರಿಟನ್​ ದೇಶದ ಆರೋಗ್ಯ ಇಲಾಖೆ ನಿರ್ದೇಶಕರು (DGHS) ಇಂದು ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಭಾರತೀಯ ಪ್ರತಿನಿಧಿ ಡಾ.ರೋಡ್ರಿಕೋ ಹೆಚ್​​ ಆಫ್ರಿನ್ ಭಾಗವಹಿಸುವ ಸಾಧ್ಯತೆ ಇದೆ.

ಕೊರೊನಾ 2ನೇ ಅಲೆ: ಬ್ರಿಟನ್​ನಲ್ಲಿ ಮತ್ತೆ ಲಾಕ್​​ಡೌನ್.. ಯುರೋಪಿಯನ್​ ದೇಶಗಳಿಂದ ಬ್ರಿಟನ್​ ವಿಮಾನಗಳಿಗೆ ನಿರ್ಬಂಧ
ಪ್ರಾತಿನಿಧಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Dec 21, 2020 | 11:42 AM

Share

ಬ್ರಿಟನ್​ ದೇಶದಲ್ಲಿ ಕೊವಿಡ್ 2ನೇ ಅಲೆ ಆತಂಕ ಹೆಚ್ಚುತ್ತಿದೆ. ಕೊರೊನಾ ವೈರಾಣು ಸ್ವರೂಪ ಬದಲಾಗಿದ್ದು ಪರಿಸ್ಥಿತಿ ಕೈ ಮೀರುತ್ತಿದೆ ಎಂದು ಬ್ರಿಟನ್​ ಸರ್ಕಾರ ಎಚ್ಚರಿಕೆ ನೀಡಿದೆ. ಕೊವಿಡ್​ 2ನೇ ಅಲೆಯ ಹೊಡೆತದಿಂದ ಜನರನ್ನು ರಕ್ಷಿಸುವ ಸಲುವಾಗಿ ಮನೆಯಿಂದ ಯಾರೂ ಹೊರಬಾರದಂತೆ ಲಾಕ್​ಡೌನ್​ ನಿಯಮ ರೂಪಿಸಲಾಗಿದೆ. ಈ ಬೆನ್ನಲ್ಲೇ ಯುರೋಪಿಯನ್​ ರಾಷ್ಟ್ರಗಳು ಎಚ್ಚೆತ್ತುಕೊಂಡಿದ್ದು, ಹಲವು ರಾಷ್ಟ್ರಗಳು ಬ್ರಿಟನ್​ನೊಂದಿಗಿನ ವಿಮಾನ ಸಂಪರ್ಕ ಸ್ಥಗಿತಗೊಳಿಸಿವೆ.

ಕೊರೊನಾ ವೈರಾಣುವಿನ ಬದಲಾದ ಸ್ವರೂಪದ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಬ್ರಿಟನ್​ ದೇಶದ ಆರೋಗ್ಯ ಇಲಾಖೆ ನಿರ್ದೇಶಕರು (DGHS) ಇಂದು ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಭಾರತೀಯ ಪ್ರತಿನಿಧಿ ಡಾ.ರೋಡ್ರಿಕೋ ಹೆಚ್​​ ಆಫ್ರಿನ್ ಭಾಗವಹಿಸುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ.

ಕೊರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಕೆಲ ಕಠಿಣ ನಿಯಮಗಳನ್ನು ಪಾಲಿಸಲೇಬೇಕು. ಈ ಸಲುವಾಗಿ ಕ್ರಿಸ್​ಮಸ್​ ಆಚರಣೆಗೆ ಸಡಿಲಿಸಿದ್ದ ನಿಯಮಗಳನ್ನು ಹಿಂಪಡೆಯುತ್ತಿದ್ದೇವೆ. 4ನೇ ಹಂತದ ಲಾಕ್​ಡೌನ್​ ಹೇರಿರುವುದರಿಂದ ಯಾರೂ ಮನೆಯಿಂದ ಆಚೆ ಬರಬೇಡಿ ಎಂದು ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್​ ಘೋಷಣೆ ಮಾಡಿದ್ದಾರೆ.

ಸದ್ಯಕ್ಕೆ ಕೊರೊನಾ ವೈರಸ್​ ಹೊಸ ಸ್ವರೂಪ ಮೊದಲಿಗಿಂತಲೂ ಹೆಚ್ಚು ಅಪಾಯಕಾರಿ ಅಥವಾ ಸಾವಿನ ಸಂಖ್ಯೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲು ಅಧಿಕೃತ ದಾಖಲೆಗಳು ಲಭ್ಯವಾಗಿಲ್ಲ. ಈಗಷ್ಟೇ ಬಂದಿರುವ ಲಸಿಕೆಗಳು ಇವುಗಳ ಮೇಲೆ ಪ್ರಭಾವ ಬೀರುತ್ತವೋ, ಇಲ್ಲವೋ ಎಂದು ಹೇಳುವುದೂ ಸಾಧ್ಯವಿಲ್ಲ ಎಂದು ಇಂಗ್ಲೆಂಡ್​ ದೇಶದ ಮುಖ್ಯ ಆರೋಗ್ಯಾಧಿಕಾರಿ ಪ್ರೊ.ಕ್ರಿಸ್​ ವಿಟ್ಟಿ ತಿಳಿಸಿದ್ದಾರೆ.

ಆದರೆ, ಇದು ಹಬ್ಬುತ್ತಿರುವ ವೇಗವನ್ನು ನೋಡಿದರೆ ತೀವ್ರ ಎಚ್ಚರಿಕೆ ಅತ್ಯಗತ್ಯ. ಆದ್ದರಿಂದ ಪ್ರಸ್ತುತ ಲಭ್ಯವಿರುವ ಮಾಹಿತಿಯನ್ನು ಆಧರಿಸಿ ಪರಿಶೀಲನೆ ನಡೆಸುತ್ತಿದ್ದೇವೆ. ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೂ ಮಾಹಿತಿ ನೀಡಿದ್ದೇವೆ ಎಂದು ಹೇಳಿದ್ದಾರೆ.

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅಂದಂಗಾಯ್ತು.. ಕೊರೊನಾ ನಾಶವಾಗುವ ಮುನ್ನವೇ ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಆತಂಕ

Follow Us
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ