AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 2ನೇ ಅಲೆ: ಬ್ರಿಟನ್​ನಲ್ಲಿ ಮತ್ತೆ ಲಾಕ್​​ಡೌನ್.. ಯುರೋಪಿಯನ್​ ದೇಶಗಳಿಂದ ಬ್ರಿಟನ್​ ವಿಮಾನಗಳಿಗೆ ನಿರ್ಬಂಧ

ಕೊರೊನಾ ವೈರಾಣುವಿನ ಬದಲಾದ ಸ್ವರೂಪದ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಬ್ರಿಟನ್​ ದೇಶದ ಆರೋಗ್ಯ ಇಲಾಖೆ ನಿರ್ದೇಶಕರು (DGHS) ಇಂದು ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಭಾರತೀಯ ಪ್ರತಿನಿಧಿ ಡಾ.ರೋಡ್ರಿಕೋ ಹೆಚ್​​ ಆಫ್ರಿನ್ ಭಾಗವಹಿಸುವ ಸಾಧ್ಯತೆ ಇದೆ.

ಕೊರೊನಾ 2ನೇ ಅಲೆ: ಬ್ರಿಟನ್​ನಲ್ಲಿ ಮತ್ತೆ ಲಾಕ್​​ಡೌನ್.. ಯುರೋಪಿಯನ್​ ದೇಶಗಳಿಂದ ಬ್ರಿಟನ್​ ವಿಮಾನಗಳಿಗೆ ನಿರ್ಬಂಧ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Dec 21, 2020 | 11:42 AM

Share

ಬ್ರಿಟನ್​ ದೇಶದಲ್ಲಿ ಕೊವಿಡ್ 2ನೇ ಅಲೆ ಆತಂಕ ಹೆಚ್ಚುತ್ತಿದೆ. ಕೊರೊನಾ ವೈರಾಣು ಸ್ವರೂಪ ಬದಲಾಗಿದ್ದು ಪರಿಸ್ಥಿತಿ ಕೈ ಮೀರುತ್ತಿದೆ ಎಂದು ಬ್ರಿಟನ್​ ಸರ್ಕಾರ ಎಚ್ಚರಿಕೆ ನೀಡಿದೆ. ಕೊವಿಡ್​ 2ನೇ ಅಲೆಯ ಹೊಡೆತದಿಂದ ಜನರನ್ನು ರಕ್ಷಿಸುವ ಸಲುವಾಗಿ ಮನೆಯಿಂದ ಯಾರೂ ಹೊರಬಾರದಂತೆ ಲಾಕ್​ಡೌನ್​ ನಿಯಮ ರೂಪಿಸಲಾಗಿದೆ. ಈ ಬೆನ್ನಲ್ಲೇ ಯುರೋಪಿಯನ್​ ರಾಷ್ಟ್ರಗಳು ಎಚ್ಚೆತ್ತುಕೊಂಡಿದ್ದು, ಹಲವು ರಾಷ್ಟ್ರಗಳು ಬ್ರಿಟನ್​ನೊಂದಿಗಿನ ವಿಮಾನ ಸಂಪರ್ಕ ಸ್ಥಗಿತಗೊಳಿಸಿವೆ.

ಕೊರೊನಾ ವೈರಾಣುವಿನ ಬದಲಾದ ಸ್ವರೂಪದ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಬ್ರಿಟನ್​ ದೇಶದ ಆರೋಗ್ಯ ಇಲಾಖೆ ನಿರ್ದೇಶಕರು (DGHS) ಇಂದು ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಭಾರತೀಯ ಪ್ರತಿನಿಧಿ ಡಾ.ರೋಡ್ರಿಕೋ ಹೆಚ್​​ ಆಫ್ರಿನ್ ಭಾಗವಹಿಸುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ.

ಕೊರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಕೆಲ ಕಠಿಣ ನಿಯಮಗಳನ್ನು ಪಾಲಿಸಲೇಬೇಕು. ಈ ಸಲುವಾಗಿ ಕ್ರಿಸ್​ಮಸ್​ ಆಚರಣೆಗೆ ಸಡಿಲಿಸಿದ್ದ ನಿಯಮಗಳನ್ನು ಹಿಂಪಡೆಯುತ್ತಿದ್ದೇವೆ. 4ನೇ ಹಂತದ ಲಾಕ್​ಡೌನ್​ ಹೇರಿರುವುದರಿಂದ ಯಾರೂ ಮನೆಯಿಂದ ಆಚೆ ಬರಬೇಡಿ ಎಂದು ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್​ ಘೋಷಣೆ ಮಾಡಿದ್ದಾರೆ.

ಸದ್ಯಕ್ಕೆ ಕೊರೊನಾ ವೈರಸ್​ ಹೊಸ ಸ್ವರೂಪ ಮೊದಲಿಗಿಂತಲೂ ಹೆಚ್ಚು ಅಪಾಯಕಾರಿ ಅಥವಾ ಸಾವಿನ ಸಂಖ್ಯೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲು ಅಧಿಕೃತ ದಾಖಲೆಗಳು ಲಭ್ಯವಾಗಿಲ್ಲ. ಈಗಷ್ಟೇ ಬಂದಿರುವ ಲಸಿಕೆಗಳು ಇವುಗಳ ಮೇಲೆ ಪ್ರಭಾವ ಬೀರುತ್ತವೋ, ಇಲ್ಲವೋ ಎಂದು ಹೇಳುವುದೂ ಸಾಧ್ಯವಿಲ್ಲ ಎಂದು ಇಂಗ್ಲೆಂಡ್​ ದೇಶದ ಮುಖ್ಯ ಆರೋಗ್ಯಾಧಿಕಾರಿ ಪ್ರೊ.ಕ್ರಿಸ್​ ವಿಟ್ಟಿ ತಿಳಿಸಿದ್ದಾರೆ.

ಆದರೆ, ಇದು ಹಬ್ಬುತ್ತಿರುವ ವೇಗವನ್ನು ನೋಡಿದರೆ ತೀವ್ರ ಎಚ್ಚರಿಕೆ ಅತ್ಯಗತ್ಯ. ಆದ್ದರಿಂದ ಪ್ರಸ್ತುತ ಲಭ್ಯವಿರುವ ಮಾಹಿತಿಯನ್ನು ಆಧರಿಸಿ ಪರಿಶೀಲನೆ ನಡೆಸುತ್ತಿದ್ದೇವೆ. ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೂ ಮಾಹಿತಿ ನೀಡಿದ್ದೇವೆ ಎಂದು ಹೇಳಿದ್ದಾರೆ.

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅಂದಂಗಾಯ್ತು.. ಕೊರೊನಾ ನಾಶವಾಗುವ ಮುನ್ನವೇ ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಆತಂಕ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ