AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 2ನೇ ಅಲೆ: ಬ್ರಿಟನ್​ನಲ್ಲಿ ಮತ್ತೆ ಲಾಕ್​​ಡೌನ್.. ಯುರೋಪಿಯನ್​ ದೇಶಗಳಿಂದ ಬ್ರಿಟನ್​ ವಿಮಾನಗಳಿಗೆ ನಿರ್ಬಂಧ

ಕೊರೊನಾ ವೈರಾಣುವಿನ ಬದಲಾದ ಸ್ವರೂಪದ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಬ್ರಿಟನ್​ ದೇಶದ ಆರೋಗ್ಯ ಇಲಾಖೆ ನಿರ್ದೇಶಕರು (DGHS) ಇಂದು ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಭಾರತೀಯ ಪ್ರತಿನಿಧಿ ಡಾ.ರೋಡ್ರಿಕೋ ಹೆಚ್​​ ಆಫ್ರಿನ್ ಭಾಗವಹಿಸುವ ಸಾಧ್ಯತೆ ಇದೆ.

ಕೊರೊನಾ 2ನೇ ಅಲೆ: ಬ್ರಿಟನ್​ನಲ್ಲಿ ಮತ್ತೆ ಲಾಕ್​​ಡೌನ್.. ಯುರೋಪಿಯನ್​ ದೇಶಗಳಿಂದ ಬ್ರಿಟನ್​ ವಿಮಾನಗಳಿಗೆ ನಿರ್ಬಂಧ
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Dec 21, 2020 | 11:42 AM

Share

ಬ್ರಿಟನ್​ ದೇಶದಲ್ಲಿ ಕೊವಿಡ್ 2ನೇ ಅಲೆ ಆತಂಕ ಹೆಚ್ಚುತ್ತಿದೆ. ಕೊರೊನಾ ವೈರಾಣು ಸ್ವರೂಪ ಬದಲಾಗಿದ್ದು ಪರಿಸ್ಥಿತಿ ಕೈ ಮೀರುತ್ತಿದೆ ಎಂದು ಬ್ರಿಟನ್​ ಸರ್ಕಾರ ಎಚ್ಚರಿಕೆ ನೀಡಿದೆ. ಕೊವಿಡ್​ 2ನೇ ಅಲೆಯ ಹೊಡೆತದಿಂದ ಜನರನ್ನು ರಕ್ಷಿಸುವ ಸಲುವಾಗಿ ಮನೆಯಿಂದ ಯಾರೂ ಹೊರಬಾರದಂತೆ ಲಾಕ್​ಡೌನ್​ ನಿಯಮ ರೂಪಿಸಲಾಗಿದೆ. ಈ ಬೆನ್ನಲ್ಲೇ ಯುರೋಪಿಯನ್​ ರಾಷ್ಟ್ರಗಳು ಎಚ್ಚೆತ್ತುಕೊಂಡಿದ್ದು, ಹಲವು ರಾಷ್ಟ್ರಗಳು ಬ್ರಿಟನ್​ನೊಂದಿಗಿನ ವಿಮಾನ ಸಂಪರ್ಕ ಸ್ಥಗಿತಗೊಳಿಸಿವೆ.

ಕೊರೊನಾ ವೈರಾಣುವಿನ ಬದಲಾದ ಸ್ವರೂಪದ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಬ್ರಿಟನ್​ ದೇಶದ ಆರೋಗ್ಯ ಇಲಾಖೆ ನಿರ್ದೇಶಕರು (DGHS) ಇಂದು ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಭಾರತೀಯ ಪ್ರತಿನಿಧಿ ಡಾ.ರೋಡ್ರಿಕೋ ಹೆಚ್​​ ಆಫ್ರಿನ್ ಭಾಗವಹಿಸುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ.

ಕೊರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಕೆಲ ಕಠಿಣ ನಿಯಮಗಳನ್ನು ಪಾಲಿಸಲೇಬೇಕು. ಈ ಸಲುವಾಗಿ ಕ್ರಿಸ್​ಮಸ್​ ಆಚರಣೆಗೆ ಸಡಿಲಿಸಿದ್ದ ನಿಯಮಗಳನ್ನು ಹಿಂಪಡೆಯುತ್ತಿದ್ದೇವೆ. 4ನೇ ಹಂತದ ಲಾಕ್​ಡೌನ್​ ಹೇರಿರುವುದರಿಂದ ಯಾರೂ ಮನೆಯಿಂದ ಆಚೆ ಬರಬೇಡಿ ಎಂದು ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್​ ಘೋಷಣೆ ಮಾಡಿದ್ದಾರೆ.

ಸದ್ಯಕ್ಕೆ ಕೊರೊನಾ ವೈರಸ್​ ಹೊಸ ಸ್ವರೂಪ ಮೊದಲಿಗಿಂತಲೂ ಹೆಚ್ಚು ಅಪಾಯಕಾರಿ ಅಥವಾ ಸಾವಿನ ಸಂಖ್ಯೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲು ಅಧಿಕೃತ ದಾಖಲೆಗಳು ಲಭ್ಯವಾಗಿಲ್ಲ. ಈಗಷ್ಟೇ ಬಂದಿರುವ ಲಸಿಕೆಗಳು ಇವುಗಳ ಮೇಲೆ ಪ್ರಭಾವ ಬೀರುತ್ತವೋ, ಇಲ್ಲವೋ ಎಂದು ಹೇಳುವುದೂ ಸಾಧ್ಯವಿಲ್ಲ ಎಂದು ಇಂಗ್ಲೆಂಡ್​ ದೇಶದ ಮುಖ್ಯ ಆರೋಗ್ಯಾಧಿಕಾರಿ ಪ್ರೊ.ಕ್ರಿಸ್​ ವಿಟ್ಟಿ ತಿಳಿಸಿದ್ದಾರೆ.

ಆದರೆ, ಇದು ಹಬ್ಬುತ್ತಿರುವ ವೇಗವನ್ನು ನೋಡಿದರೆ ತೀವ್ರ ಎಚ್ಚರಿಕೆ ಅತ್ಯಗತ್ಯ. ಆದ್ದರಿಂದ ಪ್ರಸ್ತುತ ಲಭ್ಯವಿರುವ ಮಾಹಿತಿಯನ್ನು ಆಧರಿಸಿ ಪರಿಶೀಲನೆ ನಡೆಸುತ್ತಿದ್ದೇವೆ. ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೂ ಮಾಹಿತಿ ನೀಡಿದ್ದೇವೆ ಎಂದು ಹೇಳಿದ್ದಾರೆ.

ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಅಂದಂಗಾಯ್ತು.. ಕೊರೊನಾ ನಾಶವಾಗುವ ಮುನ್ನವೇ ಬ್ರಿಟನ್‌ನಲ್ಲಿ ಹೊಸ ಪ್ರಭೇದದ ಆತಂಕ

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು