AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪರಿಸ್ಥಿತಿಯಿಂದ ಭಾರತ ಭೇಟಿ ರದ್ದುಗೊಳಿಸಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

ಭಾರತದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಸರ್ಕಾರವು ಈ ನಿರ್ಧಾರಕ್ಕೆ ಬಂದಿದೆ

ಕೊರೊನಾ ಪರಿಸ್ಥಿತಿಯಿಂದ ಭಾರತ ಭೇಟಿ ರದ್ದುಗೊಳಿಸಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ಬೋರಿಸ್ ಜಾನ್ಸನ್​ ಮತ್ತು ನರೇಂದ್ರ ಮೋದಿ (ಪ್ರಾತಿನಿಧಿಕ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 19, 2021 | 3:19 PM

Share

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕು ಪರಿಸ್ಥಿತಿ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಭಾರತ ಭೇಟಿ ರದ್ದುಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮುಂದಿನ ತಿಂಗಳು ದ್ವಿಪಕ್ಷೀಯ ಮಾತುಕತೆ ನಡೆಸುವ ಬಗ್ಗೆ ಸಮಯ ನಿಗದಿಯಾಗಿತ್ತು. ಆದರೆ ಇದೀಗ ಬೋರಿಸ್ ಜಾನ್ಸನ್ ತಮ್ಮ ಭೇಟಿಯನ್ನು ರದ್ದುಪಡಿಸಿದ್ದಾರೆ.

ಭೇಟಿಯ ಬಗ್ಗೆ ಎರಡೂ ದೇಶಗಳು ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ಹೊರಡಿಸಿರಲಿಲ್ಲ. ಆದರೆ ಎರಡೂ ದೇಶಗಳ ವಿದೇಶಾಂಗ ವ್ಯವಹಾರಗಳ ಇಲಾಖೆ ಮತ್ತು ಪ್ರಧಾನಿ ಕಾರ್ಯಾಲಯಗಳ ಮಟ್ಟದಲ್ಲಿ ಈ ಭೇಟಿ ಅಂತಿಮಗೊಂಡಿತ್ತು. ಏಪ್ರಿಲ್ 26ರಿಂದ ಬೋರಿಸ್ ಜಾನ್ಸನ್ ಅವರ ಭಾರತ ಭೇಟಿ ಆರಂಭವಾಗಬೇಕಿತ್ತು. ಭಾರತ ಭೇಟಿಯ ವೇಳೆ ಬ್ರಿಟನ್ ಪ್ರಧಾನಿಯು ಮುಂಬೈ ಮತ್ತು ಪುಣೆ ನಗರಗಳಿಗೂ ಭೇಟಿ ನೀಡುವ ಕಾರ್ಯಕ್ರಮಗಳು ನಿಗದಿಯಾಗಿತ್ತು.

ಭಾರತದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಸರ್ಕಾರವು ಈ ನಿರ್ಧಾರಕ್ಕೆ ಬಂದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಈ ತಿಂಗಳ ಕೊನೆಯಲ್ಲಿ ಎರಡೂ ದೇಶಗಳ ಮುಖ್ಯಸ್ಥರು ಪರಸ್ಪರ ಮಾತುಕತೆ ನಡೆಸಲಿದ್ದಾರೆ. ಈ ವರ್ಷದ ಕೊನೆಯಲ್ಲಿ ಮುಖಾಮುಖಿ ಭೇಟಿಯಾಗಲಿದ್ದಾರೆ ಎಂದು ಭಾರತ ಮತ್ತು ಬ್ರಿಟನ್ ದೇಶಗಳು ಪ್ರತ್ಯೇಕ ಹೇಳಿಕೆಗಳಲ್ಲಿ ಸ್ಪಷ್ಟಪಡಿಸಿವೆ.

‘ಪ್ರಸ್ತುತ ಕೊರೊನಾ ಪರಿಸ್ಥಿತಿಯಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಭಾರತ ಪ್ರವಾಸ ಸಾಧ್ಯವಿಲ್ಲ. ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿ ಈ ತಿಂಗಳ ಕೊನೆಯಲ್ಲಿ ಮಾತುಕತೆ ನಡೆಸಿ ಭಾರತ-ಬ್ರಿಟನ್ ದ್ವಿಪಕ್ಷೀಯ ಸಹಕಾರ ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಪರಸ್ಪರ ಭೇಟಿಯಾಗಿ ಚರ್ಚಿಸಲಿದ್ದಾರೆ’ ಎಂದು ಬ್ರಿಟನ್ ಸರ್ಕಾರದ ಹೇಳಿಕೆ ತಿಳಿಸಿದೆ.

ಈ ವರ್ಷದ ಗಣರಾಜ್ಯೋತ್ಸವ ಸಮಾರಂಭಕ್ಕೂ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮುಖ್ಯ ಅತಿಥಿಯಾಗಿ ಆಗಬೇಕಿಸಬೇಕಿತ್ತು. ಆದರೆ ಕೊರೊನಾ ವೈರಸ್​ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸಿದ್ದ ಕಾರಣ ಅವರ ಭಾರತ ಭೇಟಿ ಕೊನೆ ಗಳಿಗೆಯಲ್ಲಿ ರದ್ದಾಗಿತ್ತು.

ಇದನ್ನೂ ಓದಿ: ಗಣರಾಜ್ಯೋತ್ಸದ ಗಣ್ಯ ಆತಿಥ್ಯ: ಪ್ರಧಾನಿ ಮೋದಿಗೆ ಕರೆ ಮಾಡಿ ಬರಲ್ಲ ಎಂದ ಬ್ರಿಟನ್​ ಪ್ರಧಾನಿ

ಇದನ್ನೂ ಓದಿ: ಬ್ರಿಟನ್ ರಾಣಿ ಎಲಿಜಬೆತ್​ರ 70 ವರ್ಷಗಳ ಸಂಗಾತಿ ಎಡಿನ್​ಬರ್ಗ್ ಅರಸ ಪ್ರಿನ್ಸ್ ಫಿಲಿಪ್ ಇನ್ನಿಲ್ಲ

(UK PM Boris Johnson cancels India visit due to current Covid-19 situation)

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!